ಬ್ರೇಕಿಂಗ್ ನ್ಯೂಸ್
27-01-24 07:32 pm Udupi Correspondent ಕರಾವಳಿ
ಉಡುಪಿ, ಜ.27: ಕುಂದಾಪುರದಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಮ್ಮುಖದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರ ವಿರುದ್ಧ ಕಾರ್ಯಕರ್ತರು ಸಚಿವರ ಎದುರೇ ಏರುದನಿಯಲ್ಲಿ ಮಾತನಾಡಿದ್ದು ಇದನ್ನು ಚಿತ್ರೀಕರಣ ಮಾಡುತ್ತಿದ್ದ ಮಾಧ್ಯಮದವರನ್ನು ಅರ್ಧದಿಂದಲೇ ಹೊರಕ್ಕಟ್ಟಿದ ಪ್ರಸಂಗ ನಡೆದಿದೆ.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಅವರು, ಪ್ಲೀಸ್ ನೀವು ಹೊರಹೋಗಿ ಎಂದು ಪತ್ರಕರ್ತರನ್ನು ತಳ್ಳಿ ಚಿತ್ರೀಕರಣಕ್ಕೆ ಅಡ್ಡಿಪಡಿಸಿದ್ದಾರೆ. ಇದು ಕಾರ್ಯಕರ್ತರ ಸಭೆ, ನೀವು ವಿಡಿಯೋ ಮಾಡಿದ್ರೆ ಒಳ್ಳೆದಾಗಲ್ಲ. ಆಮೇಲೆ ಕರೀತೀವಿ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ನಡೆಯನ್ನು ಪತ್ರಕರ್ತರು ವಿರೋಧಿಸಿದ್ದು ಮತ್ತೆ ತಮ್ಮನ್ನು ಯಾಕೆ ಕರೆದಿದ್ದು ಅಂತ ಪ್ರಶ್ನೆ ಮಾಡಿದ್ದಾರೆ.





ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರೊಬ್ಬರು ಪಕ್ಷದ ಮುಖಂಡರ ವಿಚಾರದಲ್ಲಿ ಮಾತನಾಡುತ್ತಿದ್ದಾಗ ಮಾಧ್ಯಮದವರು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು. ವೇದಿಕೆಯಲ್ಲಿ ಕುಳಿತಿದ್ದ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ವೇದಿಕೆಯಿಂದ ಇಳಿದುಬಂದು ಮಾಧ್ಯಮದವರ ಕ್ಯಾಮೆರಾ ಚಿತ್ರೀಕರಣಕ್ಕೆ ಅಡ್ಡಗಟ್ಟಿದ್ದು ಹೊರಗೆ ಹೋಗುವಂತೆ ಸೂಚನೆ ನೀಡಿದ್ದಾರೆ.
ಇದರಿಂದ ಕೆಲ ಹೊತ್ತು ಪತ್ರಕರ್ತರ ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಇದೆಲ್ಲಾ ಘಟನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಮತ್ತಿತರರು ಸಾಕ್ಷಿಯಾದರು. ಒಟ್ಟಾರೆ ಜಿಲ್ಲಾ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಈ ಘಟನೆಯಿಂದ ಸಾಬೀತಾಗಿದೆ.
Kundapura congress leaders flight in meeting in front of minister Lakshmi Hebbalkar.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm