ಬ್ರೇಕಿಂಗ್ ನ್ಯೂಸ್
27-01-24 07:32 pm Udupi Correspondent ಕರಾವಳಿ
ಉಡುಪಿ, ಜ.27: ಕುಂದಾಪುರದಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಮ್ಮುಖದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರ ವಿರುದ್ಧ ಕಾರ್ಯಕರ್ತರು ಸಚಿವರ ಎದುರೇ ಏರುದನಿಯಲ್ಲಿ ಮಾತನಾಡಿದ್ದು ಇದನ್ನು ಚಿತ್ರೀಕರಣ ಮಾಡುತ್ತಿದ್ದ ಮಾಧ್ಯಮದವರನ್ನು ಅರ್ಧದಿಂದಲೇ ಹೊರಕ್ಕಟ್ಟಿದ ಪ್ರಸಂಗ ನಡೆದಿದೆ.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಅವರು, ಪ್ಲೀಸ್ ನೀವು ಹೊರಹೋಗಿ ಎಂದು ಪತ್ರಕರ್ತರನ್ನು ತಳ್ಳಿ ಚಿತ್ರೀಕರಣಕ್ಕೆ ಅಡ್ಡಿಪಡಿಸಿದ್ದಾರೆ. ಇದು ಕಾರ್ಯಕರ್ತರ ಸಭೆ, ನೀವು ವಿಡಿಯೋ ಮಾಡಿದ್ರೆ ಒಳ್ಳೆದಾಗಲ್ಲ. ಆಮೇಲೆ ಕರೀತೀವಿ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ನಡೆಯನ್ನು ಪತ್ರಕರ್ತರು ವಿರೋಧಿಸಿದ್ದು ಮತ್ತೆ ತಮ್ಮನ್ನು ಯಾಕೆ ಕರೆದಿದ್ದು ಅಂತ ಪ್ರಶ್ನೆ ಮಾಡಿದ್ದಾರೆ.





ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರೊಬ್ಬರು ಪಕ್ಷದ ಮುಖಂಡರ ವಿಚಾರದಲ್ಲಿ ಮಾತನಾಡುತ್ತಿದ್ದಾಗ ಮಾಧ್ಯಮದವರು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು. ವೇದಿಕೆಯಲ್ಲಿ ಕುಳಿತಿದ್ದ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ವೇದಿಕೆಯಿಂದ ಇಳಿದುಬಂದು ಮಾಧ್ಯಮದವರ ಕ್ಯಾಮೆರಾ ಚಿತ್ರೀಕರಣಕ್ಕೆ ಅಡ್ಡಗಟ್ಟಿದ್ದು ಹೊರಗೆ ಹೋಗುವಂತೆ ಸೂಚನೆ ನೀಡಿದ್ದಾರೆ.
ಇದರಿಂದ ಕೆಲ ಹೊತ್ತು ಪತ್ರಕರ್ತರ ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಇದೆಲ್ಲಾ ಘಟನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಮತ್ತಿತರರು ಸಾಕ್ಷಿಯಾದರು. ಒಟ್ಟಾರೆ ಜಿಲ್ಲಾ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಈ ಘಟನೆಯಿಂದ ಸಾಬೀತಾಗಿದೆ.
Kundapura congress leaders flight in meeting in front of minister Lakshmi Hebbalkar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm