ಬ್ರೇಕಿಂಗ್ ನ್ಯೂಸ್
22-11-20 05:36 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 22: ರಾಜ್ಯದಲ್ಲಿ ಮೈಸೂರು ಮತ್ತು ಮಂಗಳೂರು ಸಮಾನಾಂತರವಾಗಿ ಬೆಳೆಯುತ್ತಿರುವ ಅವಳಿ ನಗರಗಳು. ಈ ನಗರಗಳ ಮಧ್ಯೆ ತುರ್ತು ಪ್ರಯಾಣಕ್ಕಾಗಿ ವಿಮಾನ ಸೌಲಭ್ಯ ಬರಬೇಕೆಂಬ ಜನರ ನಿರೀಕ್ಷೆ ಈಡೇರುತ್ತಿದೆ. ಇದೇ ಡಿಸೆಂಬರ್ 10 ರಿಂದ ಇವೆರಡು ನಗರಗಳ ಮಧ್ಯೆ ವಿಮಾನ ಸಂಚಾರ ಆರಂಭಗೊಳ್ಳಲಿದೆ.
ಉಡಾನ್ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ, ಅಂಗ ಸಂಸ್ಥೆಯಾದ ಅಲಯನ್ಸ್ ಏರ್ ವಿಮಾನ ಮೈಸೂರು – ಮಂಗಳೂರು ಮಧ್ಯೆ ವಾರದಲ್ಲಿ ನಾಲ್ಕು ದಿನ ಸಂಚರಿಸಲಿದೆ. ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರ ಈ ಸೇವೆ ಇರಲಿದ್ದು ಮೈಸೂರಿನಿಂದ ಬೆಳಗ್ಗೆ ಹನ್ನೊಂದಕ್ಕೆ ಹೊರಡುವ ಈ ವಿಮಾನವು ಮಂಗ್ಳೂರಿಗೆ ಮಧ್ಯಾಹ್ನ 12.15ಕ್ಕೆ ತಲುಪಲಿದೆ. ಅಲ್ಲಿಂದ ಮರಳಿ ಮಧ್ಯಾಹ್ನ 12.40ಕ್ಕೆ ಹೊರಟು 1.40ಕ್ಕೆ ಮೈಸೂರಿಗೆ ತಲುಪಲಿದೆ.
ಮಂಗಳೂರು ಮೂಲದ ಸುಮಾರು ಅರುವತ್ತು ಸಾವಿರ ಕುಟುಂಬಗಳು ಮೈಸೂರಿನಲ್ಲಿ ವಾಸವಿದ್ದು ಈ ಹಿನ್ನೆಲೆಯಲ್ಲಿ ಎರಡೂ ನಗರಗಳ ನಡುವೆ ವಿಮಾನ ಹಾರಾಟ ಆರಂಭಿಸುವಂತೆ ಹಲವು ಸಂಘ ಸಂಸ್ಥೆಗಳು, ವಾಣಿಜ್ಯೋದ್ಯಮಿಗಳು ಸೇರಿದಂತೆ ಪ್ರಮುಖರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಅಕ್ಟೋಬರ್ ನಲ್ಲಿಯೇ ಈ ಮಾರ್ಗದಲ್ಲಿ ವಿಮಾನ ಸಂಚಾರ ಆರಂಭಿಸುವುದಾಗಿ ಏರ್ ಇಂಡಿಯಾ ಪ್ರಕಟಿಸಿತ್ತು. ಆದರೆ ಅನುಮತಿ ದೊರೆತಿರಲಿಲ್ಲ. ಹೀಗಾಗಿ ವಿಮಾನ ಸಂಚಾರ ವಿಳಂಬವಾಗಿತ್ತು. ಇದೀಗ ಹಸಿರು ನಿಶಾನೆ ದೊರೆತಿದ್ದು ಉಭಯ ಜಿಲ್ಲೆಗಳ ಪ್ರಯಾಣಿಕರಿಗೆ ಸಂತಸವಾಗಿದೆ.
Video:
Thank you beloved PM @narendramodi ji and @HardeepSPuri Sir. ALLIANCE AIR COMMENCES FLIGHT OPERATIONS CONNECTING MYSURU TO MANGALORE EFFECTIVE 10TH DECEMBER 2020
— Pratap Simha (@mepratap) November 21, 2020
The flight will operate on Wednesday, Friday, Saturday & Sunday.
Want to fly from Mysuru to Mangaluru? Very soon!
— Pratap Simha (@mepratap) November 21, 2020
Air India to commence it's operations from Mangalore to Mysore from December 10th, 2020.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 11:06 pm
Mangalore Correspondent
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm