ಬ್ರೇಕಿಂಗ್ ನ್ಯೂಸ್
29-01-24 05:03 pm Mangalore Correspondent ಕರಾವಳಿ
ಮಂಗಳೂರು, ಜ.29 : ಮುಂದಿನ ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ರಾಷ್ಟ್ರೀಯ ಹಿಂದುಳಿದ ವರ್ಗದ ಮೀನುಗಾರ ಮುಖಂಡ ಪ್ರಮೋದ್ ಮಧ್ವರಾಜ್ ಅವರಿಗೆ ಬಿಜೆಪಿ ಅವಕಾಶ ನೀಡಬೇಕೆಂದು ಅಖಿಲ ಭಾರತ ಮೀನುಗಾರರ ಸಂಘದ ಮುಖಂಡರು ಒತ್ತಾಯಿಸಿದ್ದಾರೆ.
2019ರ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಒಬಿಸಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿಲ್ಲ. ರಾಜ್ಯದ ಜನಸಂಖ್ಯೆಯು 50 ಶೇ.ದಷ್ಟಿದ್ದರೂ ಒಬಿಸಿ ಅಭ್ಯರ್ಥಿಗಳಿಗೆ ಒಂದೇ ಒಂದು ಸೀಟು ನೀಡಿಲ್ಲವಾದ್ದರಿಂದ ಬಿಜೆಪಿಗೆ ಒಬಿಸಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅನಿವಾರ್ಯವಾಗಿರುತ್ತದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಹಂಚಿಕೊಂಡಿರುವ ಹಿಂದುಳಿದ ವರ್ಗಕ್ಕೆ ಸೇರಿದ ಮೀನುಗಾರರು ಮಹತ್ವದ ಸವಾಲುಗಳನ್ನು ಎದುರಿಸುತ್ತಿದ್ದು, ರಾಜಕೀಯ ವೇದಿಕೆಗಳಲ್ಲಿ ಮನ್ನಣೆ ಹಾಗೂ ಪ್ರಾತಿನಿಧ್ಯವನ್ನು ಪಡೆಯಲು ದೀರ್ಘ ಕಾಲ ಹೋರಾಡುತ್ತಿದ್ದಾರೆ.
ರಾಷ್ಟ್ರೀಯ ಮಟ್ಟದಲ್ಲಿ ಮೀನುಗಾರರ ಸಮಸ್ಯೆಗಳ ನಿವಾರಣೆ ಮತ್ತು ಮೀನುಗಾರಿಕೆಯ ಸರ್ವಾಂಗೀಣ ಅಭಿವೃದ್ಧಿಗೆ ಸಂಸತ್ತಿನಲ್ಲಿ ಮೀನುಗಾರರ ಪ್ರತಿನಿಧಿಯನ್ನು ಇರುವುದು ಬಹಳ ಮುಖ್ಯವಾಗಿದೆ. ಪ್ರಮೋದ್ ಮಧ್ವರಾಜ್ 12 ವರ್ಷಗಳಿಂದ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾಗಿ, 13 ವರ್ಷಗಳಿಂದ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಅಧ್ಯಕ್ಷರಾಗಿ, 6 ವರ್ಷಗಳಿಂದ ರಾಷ್ಟ್ರೀಯ ಮೀನುಗಾರರ ವೇದಿಕೆಯ ಕಾರ್ಯದರ್ಶಿಯಾಗಿ ಗುರುತಿಸಿದ್ದಾರೆ. ನಾಡಿನ ಸಮಸ್ಯೆ ಬಗ್ಗೆ ತಿಳಿದಿರುವ ಇಂತಹ ವ್ಯಕ್ತಿಯೇ ನಮ್ಮ ಕರಾವಳಿಗೆ ಸಂಸದರಾಗಬೇಕು ಎಂದು ಮೀನುಗಾರ ಮುಖಂಡ ಮೋಹನ್ ಬೆಂಗ್ರೆ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.
ಮೀನುಗಾರಿಕೆಯನ್ನು ಆಧುನೀಕರಣಗೊಳಿಸಿ ಅಭಿವೃದ್ಧಿ ಪಡಿಸುವುದು, ರಾಜ್ಯದ ಕಡಲ ಕಿನಾರೆ ಹಾಗೂ ಪ್ರಾಕೃತಿಕ ಸೌಂದರ್ಯವನ್ನು ಆಕರ್ಷಣೀಯ ಪ್ರವಾಸಿ ತಾಣಗಳನ್ನಾಗಿ
ಅಭಿವೃದ್ಧಿಪಡಿಸುವುದು, ಮಾಹಿತಿ ತಂತ್ರಜ್ಞಾನ ಕೇಂದ್ರ ನಿರ್ಮಾಣ ಮಾಡಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಬೇಕಿದ್ದು ಪ್ರಮೋದ್ ಮಧ್ವರಾಜ್ ಸಂಸದರಾದಲ್ಲಿ ಮೀನುಗಾರ ಸಮಾಜ ಅವರನ್ನು ಬೆಂಬಲಿಸುವ ನಿರ್ಧಾರಕ್ಕೆ ಬಂದಿದ್ದೇವೆ ಎಂದವರು ಹೇಳಿದರು. ಕಿಶೋರ್ ಸುವರ್ಣ ಮತ್ತಿತರರು ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Bjp MP udupi chikmagaluru ticket to Pramod Madhwaraj must be given, high demand from fishing community.
12-07-25 10:47 pm
HK News Desk
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
12-07-25 11:00 pm
Mangalore Correspondent
Mangalore Accident, Bolero, Deralakatte: ದೇರಳ...
12-07-25 10:26 pm
Gas Leak at MRPL, Mangalore, death: ಎಂಆರ್ ಪಿಎ...
12-07-25 01:42 pm
Dharmasthala News, Dead bodies, Court: ಧರ್ಮಸ್...
11-07-25 08:55 pm
Dc Mangalore, Darshan; ಯುವ ಜಿಲ್ಲಾಧಿಕಾರಿ ಚುರುಕ...
10-07-25 07:23 pm
12-07-25 11:10 pm
Mangalore Correspondent
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm
ಮಂಗಳೂರಿಗೆ ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಡ್ರಗ್ಸ್...
11-07-25 07:13 pm