ಬ್ರೇಕಿಂಗ್ ನ್ಯೂಸ್
29-01-24 05:03 pm Mangalore Correspondent ಕರಾವಳಿ
ಮಂಗಳೂರು, ಜ.29 : ಮುಂದಿನ ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ರಾಷ್ಟ್ರೀಯ ಹಿಂದುಳಿದ ವರ್ಗದ ಮೀನುಗಾರ ಮುಖಂಡ ಪ್ರಮೋದ್ ಮಧ್ವರಾಜ್ ಅವರಿಗೆ ಬಿಜೆಪಿ ಅವಕಾಶ ನೀಡಬೇಕೆಂದು ಅಖಿಲ ಭಾರತ ಮೀನುಗಾರರ ಸಂಘದ ಮುಖಂಡರು ಒತ್ತಾಯಿಸಿದ್ದಾರೆ.
2019ರ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಒಬಿಸಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿಲ್ಲ. ರಾಜ್ಯದ ಜನಸಂಖ್ಯೆಯು 50 ಶೇ.ದಷ್ಟಿದ್ದರೂ ಒಬಿಸಿ ಅಭ್ಯರ್ಥಿಗಳಿಗೆ ಒಂದೇ ಒಂದು ಸೀಟು ನೀಡಿಲ್ಲವಾದ್ದರಿಂದ ಬಿಜೆಪಿಗೆ ಒಬಿಸಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅನಿವಾರ್ಯವಾಗಿರುತ್ತದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಹಂಚಿಕೊಂಡಿರುವ ಹಿಂದುಳಿದ ವರ್ಗಕ್ಕೆ ಸೇರಿದ ಮೀನುಗಾರರು ಮಹತ್ವದ ಸವಾಲುಗಳನ್ನು ಎದುರಿಸುತ್ತಿದ್ದು, ರಾಜಕೀಯ ವೇದಿಕೆಗಳಲ್ಲಿ ಮನ್ನಣೆ ಹಾಗೂ ಪ್ರಾತಿನಿಧ್ಯವನ್ನು ಪಡೆಯಲು ದೀರ್ಘ ಕಾಲ ಹೋರಾಡುತ್ತಿದ್ದಾರೆ.
ರಾಷ್ಟ್ರೀಯ ಮಟ್ಟದಲ್ಲಿ ಮೀನುಗಾರರ ಸಮಸ್ಯೆಗಳ ನಿವಾರಣೆ ಮತ್ತು ಮೀನುಗಾರಿಕೆಯ ಸರ್ವಾಂಗೀಣ ಅಭಿವೃದ್ಧಿಗೆ ಸಂಸತ್ತಿನಲ್ಲಿ ಮೀನುಗಾರರ ಪ್ರತಿನಿಧಿಯನ್ನು ಇರುವುದು ಬಹಳ ಮುಖ್ಯವಾಗಿದೆ. ಪ್ರಮೋದ್ ಮಧ್ವರಾಜ್ 12 ವರ್ಷಗಳಿಂದ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾಗಿ, 13 ವರ್ಷಗಳಿಂದ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಅಧ್ಯಕ್ಷರಾಗಿ, 6 ವರ್ಷಗಳಿಂದ ರಾಷ್ಟ್ರೀಯ ಮೀನುಗಾರರ ವೇದಿಕೆಯ ಕಾರ್ಯದರ್ಶಿಯಾಗಿ ಗುರುತಿಸಿದ್ದಾರೆ. ನಾಡಿನ ಸಮಸ್ಯೆ ಬಗ್ಗೆ ತಿಳಿದಿರುವ ಇಂತಹ ವ್ಯಕ್ತಿಯೇ ನಮ್ಮ ಕರಾವಳಿಗೆ ಸಂಸದರಾಗಬೇಕು ಎಂದು ಮೀನುಗಾರ ಮುಖಂಡ ಮೋಹನ್ ಬೆಂಗ್ರೆ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.
ಮೀನುಗಾರಿಕೆಯನ್ನು ಆಧುನೀಕರಣಗೊಳಿಸಿ ಅಭಿವೃದ್ಧಿ ಪಡಿಸುವುದು, ರಾಜ್ಯದ ಕಡಲ ಕಿನಾರೆ ಹಾಗೂ ಪ್ರಾಕೃತಿಕ ಸೌಂದರ್ಯವನ್ನು ಆಕರ್ಷಣೀಯ ಪ್ರವಾಸಿ ತಾಣಗಳನ್ನಾಗಿ
ಅಭಿವೃದ್ಧಿಪಡಿಸುವುದು, ಮಾಹಿತಿ ತಂತ್ರಜ್ಞಾನ ಕೇಂದ್ರ ನಿರ್ಮಾಣ ಮಾಡಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಬೇಕಿದ್ದು ಪ್ರಮೋದ್ ಮಧ್ವರಾಜ್ ಸಂಸದರಾದಲ್ಲಿ ಮೀನುಗಾರ ಸಮಾಜ ಅವರನ್ನು ಬೆಂಬಲಿಸುವ ನಿರ್ಧಾರಕ್ಕೆ ಬಂದಿದ್ದೇವೆ ಎಂದವರು ಹೇಳಿದರು. ಕಿಶೋರ್ ಸುವರ್ಣ ಮತ್ತಿತರರು ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Bjp MP udupi chikmagaluru ticket to Pramod Madhwaraj must be given, high demand from fishing community.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm