ಬ್ರೇಕಿಂಗ್ ನ್ಯೂಸ್
29-01-24 10:50 pm Mangalore Correspondent ಕರಾವಳಿ
ಮಂಗಳೂರು, ಜ.29: ನಗರದ ಮಂಗಳಾ ಕ್ರೀಡಾಂಗಣದ ಬಳಿ ಏರ್ಪಡಿಸಿದ್ದ ಆಹಾರ ಉತ್ಸವದಲ್ಲಿ ಬೀದಿ ಬದಿ ವ್ಯಾಪಾರ ನಿಯಮಾವಳಿಯನ್ನು ಸಂಪೂರ್ಣ ಉಲ್ಲಂಘಿಸಿ ನಡೆಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ ಆರೋಪಿಸಿದೆ.
ಆಹಾರ ಉತ್ಸವದ ಪರಿಸರದಲ್ಲಿ ದಿನನಿತ್ಯ ಬೀದಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳನ್ನು ಬಲವಂತವಾಗಿ ಸ್ಟಾಲ್ ಗಳನ್ನು ಹಾಕಿಸಿ 20% ಕಮಿಷನ್ ಪಡೆಯಲು ದುಪ್ಪಟ್ಟು ದರಗಳಿಗೆ ಆಹಾರ ಮಾರಾಟ ಮಾಡಿಸಿರುತ್ತಾರೆ. ಅಲ್ಲದೆ ಬೀದಿ ಬದಿಯಲ್ಲಿ ಆಹಾರ ಮಾರಾಟದ ದರಗಳನ್ನು ಪಂಚತಾರಾ ಹೋಟೆಲುಗಳ ರೀತಿ ವಿಧಿಸಿ ಸಾರ್ವಜನಿಕರ ಜೇಬಿಗೂ ಕತ್ತರಿ ಹಾಕಲಾಗಿದೆ. ಬೀದಿ ಆಹಾರ ಮಾರಾಟಗಾರರಿಗೆ ತರಬೇತಿ ನೀಡಿ ಪ್ರಮಾಣ ಪತ್ರ ನೀಡಬೇಕಾದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದವರು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಪ್ರಮಾಣ ಪತ್ರ ನೀಡಿರುತ್ತಾರೆ ಎಂದು ಬೀದಿಬದಿ ವ್ಯಾಪಾರಸ್ಥರ ಸಂಘ ಆರೋಪಿಸಿದೆ.

ಬಡ ಬೀದಿ ವ್ಯಾಪಾರಿಗಳು ತಮ್ಮ ಹೊಟ್ಟೆಪಾಡಿಗಾಗಿ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡಿದರೆ ಕಾರ್ಯಾಚರಣೆ ಮಾಡುವ ಪಾಲಿಕೆ ಅಧಿಕಾರಿಗಳು, ಕೇಸು ದಾಖಲಿಸುವ ಪೊಲೀಸರು ರಸ್ತೆ ಸಂಚಾರವನ್ನೇ ನಿಷೇಧಿಸಿ ಆಹಾರ ಉತ್ಸವ ನಡೆಸಲು ಅವಕಾಶ ಕೊಟ್ಟಿರುವುದು ಎಷ್ಟು ಸರಿ? ಬಡ ಬೀದಿ ವ್ಯಾಪಾರಿಗಳಿಗೆ ಒಂದು ನ್ಯಾಯ, ರಾಜಕೀಯ ಪ್ರಭಾವಿ ಕಮಿಷನ್ ದಂಧೆಕೋರರಿಗೆ ಸಾರ್ವಜನಿಕ ರಸ್ತೆಗಳನ್ನೇ ಅಕ್ರಮವಾಗಿ ವ್ಯಾಪಾರಕ್ಕೆ ಬಳಸಿಕೊಂಡು ಕಾನೂನು ನಿಯಮ ಮೀರಿರುವ ಬಲಾಢ್ಯರಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಪೊಲೀಸರೇ ಕಾವಲು ನಿಂತು ವ್ಯಾಪಾರಕ್ಕೆ ಅನುಕೂಲತೆ ಮಾಡಿಕೊತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿಕೆ ಇಮ್ತಿಯಾಝ್, ಬೀದಿ ಬದಿ ವ್ಯಾಪಾರ ನಿಯಮಾವಳಿ ಉಲ್ಲಂಘನೆ ಮಾಡಿರುವ ಬಗ್ಗೆ ಪಾಲಿಕೆ ಆಯುಕ್ತರಿಗೆ ವಾರದ ಹಿಂದೆಯೇ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದರೂ ರಾಜಕೀಯ ಪ್ರಭಾವದಿಂದಾಗಿ ಕ್ರಮ ಕೈಗೊಂಡಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Dakshin Kannada Street vendors association allege of violation of rules during food fest in Mangalore 2024. 20 percent commision has been taken ever poor food stall owners. The association has requested the Mangalore city commissioner to take necessary action.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm