ಬ್ರೇಕಿಂಗ್ ನ್ಯೂಸ್
30-01-24 08:17 pm Mangalore Correspondent ಕರಾವಳಿ
ಮಂಗಳೂರು, ಜ.30: ಕಾಶ್ಮೀರದಲ್ಲಿ ಲಾಲ್ ಚೌಕದಲ್ಲಿ ಧೈರ್ಯ ಇದ್ದವರು ರಾಷ್ಟ್ರ ಧ್ವಜ ಹಾರಿಸಿ ಎಂದಿದ್ದರು. ಆಗ ನಾವು ಬಿಜೆಪಿಯವರು ರಾಷ್ಟ್ರ ಧ್ವಜ ಹಾರಿಸಿದ್ದು, ಕಾಂಗ್ರೆಸಿನವರು ಎಲ್ಲಿದ್ದರು ? ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜ ಹಾರಿಸಿದ್ದು ಯಾರು? ಅಲ್ಲಿ ನಾವು ರಾಷ್ಟ್ರ ಧ್ವಜ ಹಾರಿಸಿದಾಗ ಲಾಠಿಚಾರ್ಜ್ ಮಾಡಿದ್ರಲ್ಲಾ ಕಾಂಗ್ರೆಸಿಗರು. ಇವರ ರಾಷ್ಟ್ರ ಧ್ವಜದ ಮೇಲಿನ ಪ್ರೇಮ ಆಗ ಎಲ್ಲಿತ್ತು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ದ.ಕ. ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮಸ್ಥರೇ 50 ರೂ.ನಂತೆ ಸಂಗ್ರಹಿಸಿ ಆರು ಲಕ್ಷ ವೆಚ್ಚದಲ್ಲಿ ಧ್ವಜಸ್ತಂಭ ಏರಿಸಿದ್ದರು. ತಿಂಗಳ ಕಾಲ ಧ್ವಜಸ್ತಂಭದ ಕೆಲಸ ಮಾಡಿದ್ದರು. ಆದರೆ ಅಲ್ಲಿ ರಾಮನ ಮಂದಿರದ ನೆನಪಲ್ಲಿ ಕೇಸರಿ ಬಣ್ಣದ ಹನುಮ ಧ್ವಜ ಏರಿಸಿದ್ದನ್ನು ಸಿದ್ದರಾಮಯ್ಯರಿಗೆ ಸಹಿಸಕ್ಕಾಗಿಲ್ಲ.
ಇವರಿಗೆ ಈಗ ರಾಷ್ಟ್ರ ಧ್ವಜದ ಮೇಲೆ ಅಭಿಮಾನ ಉಕ್ಕಿ ಹರಿದಿದೆ. ರಾಷ್ಟ್ರ ಧ್ವಜದ ಅಭಿಯಾನ ಮಾಡುತ್ತಾರಂತೆ. ಆದರೆ ರಾಷ್ಟ್ರ ಧ್ವಜದ ಪ್ರಶ್ನೆ ಬಂದಾಗ, ಇವರೆಲ್ಲ ಸುಮ್ಮನಿದ್ದರು ಎನ್ನೋದನ್ನು ನಾವು ಪ್ರಶ್ನೆ ಮಾಡಲೇಬೇಕು.
ಸಿದ್ದರಾಮಯ್ಯ ತನ್ನ ಹೆಸರಲ್ಲಿ ರಾಮ ಇದೆ ಅಂತಾರೆ. ಹೆಸರಲ್ಲಿ ರಾಮ ಇದ್ದರೇನು, ಹೃದಯದಲ್ಲಿ ಟಿಪ್ಪು ಟಿಪ್ಪು ಅಂತಿದ್ದೀರಲ್ಲಾ ನೀವು. ವೀರಪ್ಪನ್ ಹೆಸರಿನಲ್ಲಿ ವೀರ ಮತ್ತು ಅಪ್ಪ ಎಂಬ ಹೆಸರು ಇದ್ದಂತೆ. ವೀರಪ್ಪನ್ ಅಂದ್ರೆ ಡಕಾಯಿತರು, ಕಳ್ಳರಿಗೆಲ್ಲ ಲೀಡರ್ ಆಗಿದ್ದವ ಎಂದು ಅಶೋಕ್ ವ್ಯಂಗ್ಯವಾಡಿದರು.
ಲೋಕಸಭೆ ಚುನಾವಣೆ ಗೆಲುವೇ ನಮ್ಮ ಗುರಿ. ಲೋಕಸಭೆಯಲ್ಲಿ 28ಕ್ಕೆ 28 ಸ್ಥಾನ ಗೆದ್ದರೆ ಈ ಸರ್ಕಾರ ಒಂದು ತಿಂಗಳು ಇರಲ್ಲ. ಅಲ್ಲಿದ್ದವರೇ ಈ ಸರ್ಕಾರ ಇರಬಾರದು ಅಂತ ಬಿಟ್ಟು ಬರ್ತಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಕೊಡುವ ಉತ್ತರವೇ ಇವರಿಗೆ ಕೊನೆ ಮೊಳೆಯಾಗಲಿದೆ. ಅದಕ್ಕಾಗಿ ನಾವು ಸಜ್ಜಾಗಬೇಕಿದೆ ಎಂದು ಅಶೋಕ್ ಹೇಳಿದರು.
Mangalore R Ashok slams congress during Bjp Satish Kumpala being district president. He questioned which government was there during national flag being placed at Idgah maiden.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm