ಬ್ರೇಕಿಂಗ್ ನ್ಯೂಸ್
30-01-24 08:17 pm Mangalore Correspondent ಕರಾವಳಿ
ಮಂಗಳೂರು, ಜ.30: ಕಾಶ್ಮೀರದಲ್ಲಿ ಲಾಲ್ ಚೌಕದಲ್ಲಿ ಧೈರ್ಯ ಇದ್ದವರು ರಾಷ್ಟ್ರ ಧ್ವಜ ಹಾರಿಸಿ ಎಂದಿದ್ದರು. ಆಗ ನಾವು ಬಿಜೆಪಿಯವರು ರಾಷ್ಟ್ರ ಧ್ವಜ ಹಾರಿಸಿದ್ದು, ಕಾಂಗ್ರೆಸಿನವರು ಎಲ್ಲಿದ್ದರು ? ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜ ಹಾರಿಸಿದ್ದು ಯಾರು? ಅಲ್ಲಿ ನಾವು ರಾಷ್ಟ್ರ ಧ್ವಜ ಹಾರಿಸಿದಾಗ ಲಾಠಿಚಾರ್ಜ್ ಮಾಡಿದ್ರಲ್ಲಾ ಕಾಂಗ್ರೆಸಿಗರು. ಇವರ ರಾಷ್ಟ್ರ ಧ್ವಜದ ಮೇಲಿನ ಪ್ರೇಮ ಆಗ ಎಲ್ಲಿತ್ತು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ದ.ಕ. ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮಸ್ಥರೇ 50 ರೂ.ನಂತೆ ಸಂಗ್ರಹಿಸಿ ಆರು ಲಕ್ಷ ವೆಚ್ಚದಲ್ಲಿ ಧ್ವಜಸ್ತಂಭ ಏರಿಸಿದ್ದರು. ತಿಂಗಳ ಕಾಲ ಧ್ವಜಸ್ತಂಭದ ಕೆಲಸ ಮಾಡಿದ್ದರು. ಆದರೆ ಅಲ್ಲಿ ರಾಮನ ಮಂದಿರದ ನೆನಪಲ್ಲಿ ಕೇಸರಿ ಬಣ್ಣದ ಹನುಮ ಧ್ವಜ ಏರಿಸಿದ್ದನ್ನು ಸಿದ್ದರಾಮಯ್ಯರಿಗೆ ಸಹಿಸಕ್ಕಾಗಿಲ್ಲ.
ಇವರಿಗೆ ಈಗ ರಾಷ್ಟ್ರ ಧ್ವಜದ ಮೇಲೆ ಅಭಿಮಾನ ಉಕ್ಕಿ ಹರಿದಿದೆ. ರಾಷ್ಟ್ರ ಧ್ವಜದ ಅಭಿಯಾನ ಮಾಡುತ್ತಾರಂತೆ. ಆದರೆ ರಾಷ್ಟ್ರ ಧ್ವಜದ ಪ್ರಶ್ನೆ ಬಂದಾಗ, ಇವರೆಲ್ಲ ಸುಮ್ಮನಿದ್ದರು ಎನ್ನೋದನ್ನು ನಾವು ಪ್ರಶ್ನೆ ಮಾಡಲೇಬೇಕು.
ಸಿದ್ದರಾಮಯ್ಯ ತನ್ನ ಹೆಸರಲ್ಲಿ ರಾಮ ಇದೆ ಅಂತಾರೆ. ಹೆಸರಲ್ಲಿ ರಾಮ ಇದ್ದರೇನು, ಹೃದಯದಲ್ಲಿ ಟಿಪ್ಪು ಟಿಪ್ಪು ಅಂತಿದ್ದೀರಲ್ಲಾ ನೀವು. ವೀರಪ್ಪನ್ ಹೆಸರಿನಲ್ಲಿ ವೀರ ಮತ್ತು ಅಪ್ಪ ಎಂಬ ಹೆಸರು ಇದ್ದಂತೆ. ವೀರಪ್ಪನ್ ಅಂದ್ರೆ ಡಕಾಯಿತರು, ಕಳ್ಳರಿಗೆಲ್ಲ ಲೀಡರ್ ಆಗಿದ್ದವ ಎಂದು ಅಶೋಕ್ ವ್ಯಂಗ್ಯವಾಡಿದರು.
ಲೋಕಸಭೆ ಚುನಾವಣೆ ಗೆಲುವೇ ನಮ್ಮ ಗುರಿ. ಲೋಕಸಭೆಯಲ್ಲಿ 28ಕ್ಕೆ 28 ಸ್ಥಾನ ಗೆದ್ದರೆ ಈ ಸರ್ಕಾರ ಒಂದು ತಿಂಗಳು ಇರಲ್ಲ. ಅಲ್ಲಿದ್ದವರೇ ಈ ಸರ್ಕಾರ ಇರಬಾರದು ಅಂತ ಬಿಟ್ಟು ಬರ್ತಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಕೊಡುವ ಉತ್ತರವೇ ಇವರಿಗೆ ಕೊನೆ ಮೊಳೆಯಾಗಲಿದೆ. ಅದಕ್ಕಾಗಿ ನಾವು ಸಜ್ಜಾಗಬೇಕಿದೆ ಎಂದು ಅಶೋಕ್ ಹೇಳಿದರು.
Mangalore R Ashok slams congress during Bjp Satish Kumpala being district president. He questioned which government was there during national flag being placed at Idgah maiden.
12-07-25 10:47 pm
HK News Desk
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
12-07-25 11:00 pm
Mangalore Correspondent
Mangalore Accident, Bolero, Deralakatte: ದೇರಳ...
12-07-25 10:26 pm
Gas Leak at MRPL, Mangalore, death: ಎಂಆರ್ ಪಿಎ...
12-07-25 01:42 pm
Dharmasthala News, Dead bodies, Court: ಧರ್ಮಸ್...
11-07-25 08:55 pm
Dc Mangalore, Darshan; ಯುವ ಜಿಲ್ಲಾಧಿಕಾರಿ ಚುರುಕ...
10-07-25 07:23 pm
12-07-25 11:10 pm
Mangalore Correspondent
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm
ಮಂಗಳೂರಿಗೆ ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಡ್ರಗ್ಸ್...
11-07-25 07:13 pm