ಬ್ರೇಕಿಂಗ್ ನ್ಯೂಸ್
02-02-24 08:32 pm Mangalore Correspondent ಕರಾವಳಿ
ಮಂಗಳೂರು, ಫೆ.2: ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜವನ್ನು ಬಲವಂತದಿಂದ ತೆರವುಗೊಳಿಸಿದ್ದು ಹಿಂದುಗಳ ಭಾವನೆಗೆ ನೋವು ಕೊಟ್ಟಿದೆ. ಹೀಗಾಗಿ ಹಿಂದು ಸಮಾಜದಲ್ಲಿ ವಿಶ್ವಾಸ ತುಂಬಿಸಲು ರಾಜ್ಯಾದ್ಯಂತ ಹಿಂದು ಮನೆಗಳಲ್ಲಿ ಹನುಮ ಧ್ವಜ ಹಾಕಲು ಕರೆ ಕೊಟ್ಟಿದ್ದೇವೆ. ಅಲ್ಲದೆ, ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿ ಹನುಮ ಧ್ವಜ ಅಭಿಯಾನ ನಡೆಸುತ್ತೇವೆ. ಫೆ.9ರ ವರೆಗೆ ಹನುಮ ಧ್ವಜ ಅಭಿಯಾನ ನಡೆಯಲಿದ್ದು, ಫೆ.10ರಂದು ಎಲ್ಲ ಜಿಲ್ಲಾಧಿಕಾರಿ ಕಚೇರಿ ಎದುರಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡಿ ಪ್ರತಿಭಟನೆ ನಡೆಸಲಾಗುವುದು ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್ ಹೇಳಿದ್ದಾರೆ.
ಕದ್ರಿಯ ವಿಶ್ವ ಹಿಂದು ಪರಿಷತ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕೆರಗೋಡು ಗ್ರಾಮದಲ್ಲಿ ಗ್ರಾಮಸ್ಥರೇ ಹಣ ವ್ಯಯಿಸಿ ಹನುಮಧ್ವಜ ಸ್ಥಾಪನೆ ಮಾಡಿದ್ದರು. ರಾಜ್ಯದ ಕಾಂಗ್ರೆಸ್ ಸರಕಾರ ಮುಸ್ಲಿಮರಿಗೆ ನೋವಾಗುತ್ತೆ ಎಂದು ಹೇಳಿ ಧ್ವಜ ತೆರವು ಮಾಡಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತಿದ್ದು, ಹಿಂದು ಸಮಾಜಕ್ಕೆ ನೋವು ಕೊಟ್ಟಿರುವುದನ್ನು ಸಹಿಸುವುದಿಲ್ಲ. ಇದನ್ನು ಪ್ರತಿಭಟಿಸಿ ರಾಜ್ಯಾದ್ಯಂತ ಹಿಂದು ಮನೆಗಳಲ್ಲಿ ಸ್ವಯಂಪ್ರೇರಿತವಾಗಿ ಹನುಮ ಧ್ವಜ ಹಾಕಲಿದ್ದಾರೆ. ಫೆ.9 ಅಥವಾ 10ರಂದು ಸಾಮೂಹಿಕವಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ.
ಮಳಲಿ ಮಸೀದಿಯ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಈಗಾಗಲೇ ಕೋರ್ಟಿನಲ್ಲಿ ವಿಚಾರಣೆ ಆಗ್ತಾ ಇದೆ. ಅದು ನಮ್ಮ ಪರವಾಗಿಯೇ ತೀರ್ಪು ಬರುತ್ತೆ ಎನ್ನುವ ವಿಶ್ವಾಸದಲ್ಲಿದ್ದೇವೆ. ಜ್ಞಾನವಾಪಿ ಮಸೀದಿ ರೀತಿಯಲ್ಲೇ ಎಎಸ್ಐ ಸರ್ವೆ ಆಗಬೇಕೆಂದು ನಾವು ಒತ್ತಾಯ ಮಾಡುತ್ತೇವೆ ಎಂದಿದ್ದಾರೆ. ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ನೀಡಿರುವ ಪ್ರತ್ಯೇಕ ರಾಷ್ಟ್ರದ ಕುರಿತ ಪ್ರಶ್ನೆಗೆ, ನಾವು ಅಖಂಡ ಭಾರತದ ಸಂಕಲ್ಪ ಹೊಂದಿರುವವರು. ಬಜರಂಗದಳ ಸ್ಥಾಪನೆ ದಿನದಿಂದಲೇ ಪ್ರತಿವರ್ಷ ಆಗಸ್ಟ್ 14ರಂದು ಅಖಂಡ ಭಾರತ ಸಂಕಲ್ಪ ಮಾಡುತ್ತೇವೆ. ಅನುದಾನದ ವಿಚಾರದಲ್ಲಿ ಪ್ರಶ್ನೆ ಇದ್ದರೆ, ಅದನ್ನು ಕೇಳಬೇಕು ವಿನಾ ದೇಶ ಒಡೆಯುವ ಮಾತನ್ನಾಡಿದ್ದು ತಪ್ಪು. ನಾವದನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಪುರುಷೋತ್ತಮ್, ಭುಜಂಗ ಕುಲಾಲ್, ಪುನೀತ್ ಅತ್ತಾವರ್ ಮತ್ತಿತರರಿದ್ದರು.
VHP campaigns for Hanuman flag on every house in Mangalore.
07-04-26 12:37 pm
HK News Staffer
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm