ಬ್ರೇಕಿಂಗ್ ನ್ಯೂಸ್
03-02-24 06:02 pm Mangalore Correspondent ಕರಾವಳಿ
ಉಳ್ಳಾಲ, ಫೆ.3: ಕೋಚಿಮುಲ್ ನೇಮಕಾತಿ ಪರೀಕ್ಷಾ ಹಗರಣದಲ್ಲಿ ಮಂಗಳೂರು ವಿವಿಗೆ ಇಡಿ ದಾಳಿ ಹಿನ್ನೆಲೆಯಲ್ಲಿ ಮಂಗಳೂರು ವಿವಿ ಆಡಳಿತದ ವಿರುದ್ದ ಸಿಡಿದೆದ್ದ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಸದಸ್ಯರು ವಿವಿಯ ಕುಲಪತಿ ರಾಜೀನಾಮೆ ನೀಡಬೇಕು ಹಾಗೂ ಪರೀಕ್ಷಾಂಗ ಕುಲಸಚಿವರ ಅಮಾನತಿಗೆ ಆಗ್ರಹಿಸಿ ಶನಿವಾರ ಕೊಣಾಜೆಯ ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಭಾರೀ ಪೊಲೀಸ್ ಭದ್ರತೆ ಮಧ್ಯೆಯೂ ಎಬಿವಿಪಿ ಕಾರ್ಯಕರ್ತರು ವಿವಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪರೀಕ್ಷಾ ಪೂರ್ವದಲ್ಲೇ ಕೋಚಿಮುಲ್ ನೇಮಕಾತಿ ಪರೀಕ್ಷೆ ಪ್ರಶ್ನಾಪತ್ರಿಕೆ ಸೋರಿಕೆ ಆರೋಪ ಹೊರಿಸಿದ ಕಾರ್ಯಕರ್ತರು ಮಂಗಳೂರು ವಿವಿ ಅಧಿಕಾರಿಗಳಿಂದಲೇ ಪ್ರಶ್ನೆಪತ್ರಿಕೆ ಮಾರಾಟವಾಗಿದೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಮಂಗಳೂರು ವಿವಿಗೆ ಇ.ಡಿ ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಪರೀಕ್ಷೆ ಹಾಗೂ ಫಲಿತಾಂಶ ಪ್ರಕಟಣೆಯ ಜವಾಬ್ದಾರಿ ಹೊತ್ತಿದ್ದ ಮಂಗಳೂರು ವಿವಿ ನಿರ್ಲಕ್ಷ್ಯ ಮಾಡಿದೆ. ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನೇಮಕಾತಿ ಪ್ರಕ್ರಿಯೆ ಅವ್ಯವಹಾರ ತನಿಖೆ ನಡೆಸ್ತಿರೋ ಇ.ಡಿ ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಚಲನ್ನವರ್ ಅವರನ್ನೂ ವಿಚಾರಣೆ ನಡೆಸಿತ್ತು.

ಕೋಚಿಮುಲ್ ನೇಮಕಾತಿ ಪರೀಕ್ಷಾ ಜವಾಬ್ದಾರಿ ವಹಿಸಿಕೊಂಡಿದ್ದ ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವದಲ್ಲೇ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗಿತ್ತು. ಆ ಕಾರಣದಿಂದ ಕೋಚಿಮುಲ್ ನೇಮಕಾತಿ ಹಗರಣದಲ್ಲಿ ಮಂಗಳೂರು ವಿವಿ ನೇರ ಭಾಗಿಯಾದ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಎಬಿವಿಪಿ ವಿದ್ಯಾರ್ಥಿ ಸಂಘಟನೆ ವಿವಿಯ ಪರಿಕ್ಷಾಂಗ ಕುಲಸಚಿವರ ಅಮಾನತ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದೆ.
Kochimul scam, Mangalore university, ABVP students protest demand suspension of Registrar. Amid huge security students of Abvp Tried to gherao Mangalore University.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 09:48 pm
HK News Staffer
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am