ಬ್ರೇಕಿಂಗ್ ನ್ಯೂಸ್
03-02-24 06:02 pm Mangalore Correspondent ಕರಾವಳಿ
ಉಳ್ಳಾಲ, ಫೆ.3: ಕೋಚಿಮುಲ್ ನೇಮಕಾತಿ ಪರೀಕ್ಷಾ ಹಗರಣದಲ್ಲಿ ಮಂಗಳೂರು ವಿವಿಗೆ ಇಡಿ ದಾಳಿ ಹಿನ್ನೆಲೆಯಲ್ಲಿ ಮಂಗಳೂರು ವಿವಿ ಆಡಳಿತದ ವಿರುದ್ದ ಸಿಡಿದೆದ್ದ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಸದಸ್ಯರು ವಿವಿಯ ಕುಲಪತಿ ರಾಜೀನಾಮೆ ನೀಡಬೇಕು ಹಾಗೂ ಪರೀಕ್ಷಾಂಗ ಕುಲಸಚಿವರ ಅಮಾನತಿಗೆ ಆಗ್ರಹಿಸಿ ಶನಿವಾರ ಕೊಣಾಜೆಯ ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಭಾರೀ ಪೊಲೀಸ್ ಭದ್ರತೆ ಮಧ್ಯೆಯೂ ಎಬಿವಿಪಿ ಕಾರ್ಯಕರ್ತರು ವಿವಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪರೀಕ್ಷಾ ಪೂರ್ವದಲ್ಲೇ ಕೋಚಿಮುಲ್ ನೇಮಕಾತಿ ಪರೀಕ್ಷೆ ಪ್ರಶ್ನಾಪತ್ರಿಕೆ ಸೋರಿಕೆ ಆರೋಪ ಹೊರಿಸಿದ ಕಾರ್ಯಕರ್ತರು ಮಂಗಳೂರು ವಿವಿ ಅಧಿಕಾರಿಗಳಿಂದಲೇ ಪ್ರಶ್ನೆಪತ್ರಿಕೆ ಮಾರಾಟವಾಗಿದೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಮಂಗಳೂರು ವಿವಿಗೆ ಇ.ಡಿ ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಪರೀಕ್ಷೆ ಹಾಗೂ ಫಲಿತಾಂಶ ಪ್ರಕಟಣೆಯ ಜವಾಬ್ದಾರಿ ಹೊತ್ತಿದ್ದ ಮಂಗಳೂರು ವಿವಿ ನಿರ್ಲಕ್ಷ್ಯ ಮಾಡಿದೆ. ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನೇಮಕಾತಿ ಪ್ರಕ್ರಿಯೆ ಅವ್ಯವಹಾರ ತನಿಖೆ ನಡೆಸ್ತಿರೋ ಇ.ಡಿ ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಚಲನ್ನವರ್ ಅವರನ್ನೂ ವಿಚಾರಣೆ ನಡೆಸಿತ್ತು.

ಕೋಚಿಮುಲ್ ನೇಮಕಾತಿ ಪರೀಕ್ಷಾ ಜವಾಬ್ದಾರಿ ವಹಿಸಿಕೊಂಡಿದ್ದ ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವದಲ್ಲೇ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗಿತ್ತು. ಆ ಕಾರಣದಿಂದ ಕೋಚಿಮುಲ್ ನೇಮಕಾತಿ ಹಗರಣದಲ್ಲಿ ಮಂಗಳೂರು ವಿವಿ ನೇರ ಭಾಗಿಯಾದ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಎಬಿವಿಪಿ ವಿದ್ಯಾರ್ಥಿ ಸಂಘಟನೆ ವಿವಿಯ ಪರಿಕ್ಷಾಂಗ ಕುಲಸಚಿವರ ಅಮಾನತ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದೆ.
Kochimul scam, Mangalore university, ABVP students protest demand suspension of Registrar. Amid huge security students of Abvp Tried to gherao Mangalore University.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm