ಬ್ರೇಕಿಂಗ್ ನ್ಯೂಸ್
05-02-24 08:51 pm Mangalore Correspondent ಕರಾವಳಿ
ಮಂಗಳೂರು ಫೆ.5: ಆಟೋ ರಿಕ್ಷಾ ಚಾಲಕ- ಮಾಲಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಮಂಗಳೂರು ನಗರದಲ್ಲಿ ಒಂದು ದಿನ ಆಟೋ ಸೇವೆಯನ್ನು ಬಂದ್ ಮಾಡಿ ಆರ್.ಟಿ.ಓ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ನಗರದ ಜ್ಯೋತಿ ವೃತ್ತದಿಂದ ಮಿನಿ ವಿಧಾನ ಸೌಧದ ವರೆಗೆ ಜಾಥಾ ನಡೆಸಿ ಬಳಿಕ ಪ್ರತಿಭಟನಾ ಸಭೆ ನಡೆಸಿದ ಆಟೋ ಚಾಲಕರು ತಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ನಗರದಲ್ಲಿ ಬ್ಯಾಟರಿ ಚಾಲಿತ ಆಟೋಗಳ ಹಾವಳಿ ವಿಪರೀತವಾಗಿದ್ದು ಅವುಗಳಿಂದ ಇತರ ಪೆಟ್ರೋಲ್ ಮತ್ತು ಎಲ್ ಪಿಜಿ ಚಾಲಿತ ಆಟೋಗಳಿಗೆ ಭಾರಿ ಸಮಸ್ಯೆಗಳು ಎದುರಾಗಿದೆ. ಇ- ಆಟೋಗಳಿಗೆ ನಿಗದಿ ಮಾಡಿದ ವಲಯದ ಬಗ್ಗೆ ಸಮರ್ಪಕ ಮಾರ್ಗದರ್ಶನ ಇಲ್ಲ. 25-11-2022ರ ಬಳಿಕ ನೋಂದಣಿಯಾದಂತಹ ಬ್ಯಾಟರಿ ಜಾಲಿತ ಆಟೋರಿಕ್ಷಾಗಳಿಗೆ ವಲಯ-1ರ ಕ್ರಮ ಸಂಖ್ಯೆ ನೀಡಬಾರದು ಎಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.
ವಲಯ- 1 ಕ್ರಮ ಸಂಖ್ಯೆ ಇಲ್ಲದ ಯಾವುದೇ ಕಂಪೆನಿಯ ಆಟೋ ರಿಕ್ಷಾಗಳು ಮಂಗಳೂರು ನಗರ ಪ್ರವೇಶಿಸಬಾರದು. ನಗರದಲ್ಲಿ ಆಟೋ ರಿಕ್ಷಾ ನಿಲ್ದಾಣಗಳ ಕೊರತೆಯನ್ನು ಸರಿಪಡಿಸಬೇಕು. ಸಿ.ಎನ್.ಜಿ. ಅಥವಾ ಎಲ್.ಪಿ.ಜಿ. ಆಟೋ ರಿಕ್ಷಾಗಳಲ್ಲಿ ಮಂಗಳೂರು ನಗರದ ಪರವಾನಿಗೆ ಇಲ್ಲದೇ ನಕಲಿ ಆಟೋರಿಕ್ಷಾಗಳ ಹಾವಳಿ ಹೆಚ್ಚಾಗಿದ್ದು ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಚಾಲ್ತಿಯಲ್ಲಿರುವ ಆಟೋ ರಿಕ್ಷಾಗಳ ಪರವಾನಿಗೆಯನ್ನು ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳಿಗೆ ವರ್ಗಾಯಿಸಲು ಅವಕಾಶ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಿದರು. ಬಳಿಕ ತಮ್ಮ ಬೇಡಿಕೆಯನ್ನು ಆರ್ ಟಿಓ ಅಧಿಕಾರಿಗೆ ನೀಡಿ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ.
ಬೆಳಗ್ಗೆ 10 ಗಂಟೆಯಿಂದ ಸಂಜೆಯ ವರೆಗೂ ಆಟೋಗಳನ್ನು ಬದಿಗಿಟ್ಟು ಪ್ರತಿಭಟನೆಯಲ್ಲಿ ಚಾಲಕರು ತೊಡಗಿದ್ದರಿಂದ ನಗರದಲ್ಲಿ ಆಟೋಗಳಿಲ್ಲದೆ ಪ್ರಯಾಣಿಕರು ಪರದಾಡಬೇಕಾಯಿತು.
Protest by Auto drivers over Battery autos in Mangalore.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm