ಬ್ರೇಕಿಂಗ್ ನ್ಯೂಸ್
05-02-24 08:51 pm Mangalore Correspondent ಕರಾವಳಿ
ಮಂಗಳೂರು ಫೆ.5: ಆಟೋ ರಿಕ್ಷಾ ಚಾಲಕ- ಮಾಲಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಮಂಗಳೂರು ನಗರದಲ್ಲಿ ಒಂದು ದಿನ ಆಟೋ ಸೇವೆಯನ್ನು ಬಂದ್ ಮಾಡಿ ಆರ್.ಟಿ.ಓ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ನಗರದ ಜ್ಯೋತಿ ವೃತ್ತದಿಂದ ಮಿನಿ ವಿಧಾನ ಸೌಧದ ವರೆಗೆ ಜಾಥಾ ನಡೆಸಿ ಬಳಿಕ ಪ್ರತಿಭಟನಾ ಸಭೆ ನಡೆಸಿದ ಆಟೋ ಚಾಲಕರು ತಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ನಗರದಲ್ಲಿ ಬ್ಯಾಟರಿ ಚಾಲಿತ ಆಟೋಗಳ ಹಾವಳಿ ವಿಪರೀತವಾಗಿದ್ದು ಅವುಗಳಿಂದ ಇತರ ಪೆಟ್ರೋಲ್ ಮತ್ತು ಎಲ್ ಪಿಜಿ ಚಾಲಿತ ಆಟೋಗಳಿಗೆ ಭಾರಿ ಸಮಸ್ಯೆಗಳು ಎದುರಾಗಿದೆ. ಇ- ಆಟೋಗಳಿಗೆ ನಿಗದಿ ಮಾಡಿದ ವಲಯದ ಬಗ್ಗೆ ಸಮರ್ಪಕ ಮಾರ್ಗದರ್ಶನ ಇಲ್ಲ. 25-11-2022ರ ಬಳಿಕ ನೋಂದಣಿಯಾದಂತಹ ಬ್ಯಾಟರಿ ಜಾಲಿತ ಆಟೋರಿಕ್ಷಾಗಳಿಗೆ ವಲಯ-1ರ ಕ್ರಮ ಸಂಖ್ಯೆ ನೀಡಬಾರದು ಎಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.
ವಲಯ- 1 ಕ್ರಮ ಸಂಖ್ಯೆ ಇಲ್ಲದ ಯಾವುದೇ ಕಂಪೆನಿಯ ಆಟೋ ರಿಕ್ಷಾಗಳು ಮಂಗಳೂರು ನಗರ ಪ್ರವೇಶಿಸಬಾರದು. ನಗರದಲ್ಲಿ ಆಟೋ ರಿಕ್ಷಾ ನಿಲ್ದಾಣಗಳ ಕೊರತೆಯನ್ನು ಸರಿಪಡಿಸಬೇಕು. ಸಿ.ಎನ್.ಜಿ. ಅಥವಾ ಎಲ್.ಪಿ.ಜಿ. ಆಟೋ ರಿಕ್ಷಾಗಳಲ್ಲಿ ಮಂಗಳೂರು ನಗರದ ಪರವಾನಿಗೆ ಇಲ್ಲದೇ ನಕಲಿ ಆಟೋರಿಕ್ಷಾಗಳ ಹಾವಳಿ ಹೆಚ್ಚಾಗಿದ್ದು ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಚಾಲ್ತಿಯಲ್ಲಿರುವ ಆಟೋ ರಿಕ್ಷಾಗಳ ಪರವಾನಿಗೆಯನ್ನು ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳಿಗೆ ವರ್ಗಾಯಿಸಲು ಅವಕಾಶ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಿದರು. ಬಳಿಕ ತಮ್ಮ ಬೇಡಿಕೆಯನ್ನು ಆರ್ ಟಿಓ ಅಧಿಕಾರಿಗೆ ನೀಡಿ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ.
ಬೆಳಗ್ಗೆ 10 ಗಂಟೆಯಿಂದ ಸಂಜೆಯ ವರೆಗೂ ಆಟೋಗಳನ್ನು ಬದಿಗಿಟ್ಟು ಪ್ರತಿಭಟನೆಯಲ್ಲಿ ಚಾಲಕರು ತೊಡಗಿದ್ದರಿಂದ ನಗರದಲ್ಲಿ ಆಟೋಗಳಿಲ್ಲದೆ ಪ್ರಯಾಣಿಕರು ಪರದಾಡಬೇಕಾಯಿತು.
Protest by Auto drivers over Battery autos in Mangalore.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm