ಬ್ರೇಕಿಂಗ್ ನ್ಯೂಸ್
05-02-24 08:51 pm Mangalore Correspondent ಕರಾವಳಿ
ಮಂಗಳೂರು ಫೆ.5: ಆಟೋ ರಿಕ್ಷಾ ಚಾಲಕ- ಮಾಲಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಮಂಗಳೂರು ನಗರದಲ್ಲಿ ಒಂದು ದಿನ ಆಟೋ ಸೇವೆಯನ್ನು ಬಂದ್ ಮಾಡಿ ಆರ್.ಟಿ.ಓ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ನಗರದ ಜ್ಯೋತಿ ವೃತ್ತದಿಂದ ಮಿನಿ ವಿಧಾನ ಸೌಧದ ವರೆಗೆ ಜಾಥಾ ನಡೆಸಿ ಬಳಿಕ ಪ್ರತಿಭಟನಾ ಸಭೆ ನಡೆಸಿದ ಆಟೋ ಚಾಲಕರು ತಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ನಗರದಲ್ಲಿ ಬ್ಯಾಟರಿ ಚಾಲಿತ ಆಟೋಗಳ ಹಾವಳಿ ವಿಪರೀತವಾಗಿದ್ದು ಅವುಗಳಿಂದ ಇತರ ಪೆಟ್ರೋಲ್ ಮತ್ತು ಎಲ್ ಪಿಜಿ ಚಾಲಿತ ಆಟೋಗಳಿಗೆ ಭಾರಿ ಸಮಸ್ಯೆಗಳು ಎದುರಾಗಿದೆ. ಇ- ಆಟೋಗಳಿಗೆ ನಿಗದಿ ಮಾಡಿದ ವಲಯದ ಬಗ್ಗೆ ಸಮರ್ಪಕ ಮಾರ್ಗದರ್ಶನ ಇಲ್ಲ. 25-11-2022ರ ಬಳಿಕ ನೋಂದಣಿಯಾದಂತಹ ಬ್ಯಾಟರಿ ಜಾಲಿತ ಆಟೋರಿಕ್ಷಾಗಳಿಗೆ ವಲಯ-1ರ ಕ್ರಮ ಸಂಖ್ಯೆ ನೀಡಬಾರದು ಎಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.
ವಲಯ- 1 ಕ್ರಮ ಸಂಖ್ಯೆ ಇಲ್ಲದ ಯಾವುದೇ ಕಂಪೆನಿಯ ಆಟೋ ರಿಕ್ಷಾಗಳು ಮಂಗಳೂರು ನಗರ ಪ್ರವೇಶಿಸಬಾರದು. ನಗರದಲ್ಲಿ ಆಟೋ ರಿಕ್ಷಾ ನಿಲ್ದಾಣಗಳ ಕೊರತೆಯನ್ನು ಸರಿಪಡಿಸಬೇಕು. ಸಿ.ಎನ್.ಜಿ. ಅಥವಾ ಎಲ್.ಪಿ.ಜಿ. ಆಟೋ ರಿಕ್ಷಾಗಳಲ್ಲಿ ಮಂಗಳೂರು ನಗರದ ಪರವಾನಿಗೆ ಇಲ್ಲದೇ ನಕಲಿ ಆಟೋರಿಕ್ಷಾಗಳ ಹಾವಳಿ ಹೆಚ್ಚಾಗಿದ್ದು ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಚಾಲ್ತಿಯಲ್ಲಿರುವ ಆಟೋ ರಿಕ್ಷಾಗಳ ಪರವಾನಿಗೆಯನ್ನು ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳಿಗೆ ವರ್ಗಾಯಿಸಲು ಅವಕಾಶ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಿದರು. ಬಳಿಕ ತಮ್ಮ ಬೇಡಿಕೆಯನ್ನು ಆರ್ ಟಿಓ ಅಧಿಕಾರಿಗೆ ನೀಡಿ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ.
ಬೆಳಗ್ಗೆ 10 ಗಂಟೆಯಿಂದ ಸಂಜೆಯ ವರೆಗೂ ಆಟೋಗಳನ್ನು ಬದಿಗಿಟ್ಟು ಪ್ರತಿಭಟನೆಯಲ್ಲಿ ಚಾಲಕರು ತೊಡಗಿದ್ದರಿಂದ ನಗರದಲ್ಲಿ ಆಟೋಗಳಿಲ್ಲದೆ ಪ್ರಯಾಣಿಕರು ಪರದಾಡಬೇಕಾಯಿತು.
Protest by Auto drivers over Battery autos in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm