ಬ್ರೇಕಿಂಗ್ ನ್ಯೂಸ್
06-02-24 02:38 pm Mangalore Correspondent ಕರಾವಳಿ
ಮಂಗಳೂರು, ಫೆ.6: ಯಾರೋ ಒಂದಿಬ್ಬರು ಸೋಶಿಯಲ್ ಮೀಡಿಯಾದಲ್ಲಿ ಏನೋ ಗೀಚಿದ ಮಾತ್ರಕ್ಕೆ ನಮ್ಮ ಸಂಪ್ರದಾಯ ಬದಲಾಗಲ್ಲ. ನನ್ನ ಕೆಲಸವನ್ನು ನೂರಾರು ಮಂದಿ ಸ್ವೀಕಾರ ಮಾಡುತ್ತಾರೆ, ಗೌರವಿಸುತ್ತಾರೆ. ನಾವು ಮಾಡೋ ಕೆಲಸಗಳನ್ನು ಮಾತ್ರ ಇತಿಹಾಸ ನೆನಪಿಡುತ್ತದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಅವರ ಇಚ್ಚೆಯಂತೆ ಹರಕೆ ಹೇಳಿಕೊಂಡಿದ್ದರು. ಹರಕೆ, ಕೋಲವನ್ನು ಗೌರವಿಸುವುದು ನಮ್ಮ ಸಂಸ್ಕೃತಿ ಎಂದು ಸ್ಪೀಕರ್ ಯುಟಿ ಖಾದರ್ ಸ್ಪಷ್ಟನೆ ನೀಡಿದ್ದಾರೆ.
ಪಣೋಲಿಬೈಲಿನಲ್ಲಿ ಹರಕೆ ಕೋಲದಲ್ಲಿ ಭಾಗವಹಿಸಿದ ಯುಟಿ ಖಾದರ್ ಬಗ್ಗೆ ಫೇಸ್ಬುಕ್ ನಲ್ಲಿ ಸಾಲೆತ್ತೂರಿನ ಧರ್ಮಗುರು ಫೈಝಿ ಅಲ್ ಹಮ್ದಾನಿ ಎಂಬವರು ಟೀಕಿಸಿ ಬರೆದಿದ್ದರು. ಕೊರಗಜ್ಜನ ಭಕ್ತ ಯುಟಿ ಖಾದರ್ ಅವರನ್ನು ಮುಸ್ಲಿಮರು ಕೇವಲ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಖಂಡರಾಗಿ ಕಾಣುವುದು ಬೇಡ. ಉಲೆಮಾ, ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಮುಸ್ಲಿಂ ನಾಯಕನಾಗಿ ಹತ್ತಿಸುವುದು ತರವಲ್ಲ. ಅದು ಆತನ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾಗುತ್ತದೆ. ಖಾದರ್ ಕೊರಗಜ್ಜನಿಗೂ ಕಲ್ಲುರ್ಟಿ ಪಂಜುರ್ಲಿಗೂ ಆರಾಧಿಸಲಿ. ಪ್ರಸಾದ ಪಡೆದು ತಲೆಗೆ ಮೆತ್ತಿಕೊಂಡು ನರಕಕ್ಕೆ ಹೋಗಲಿ. ಅದು ಆತನ ವೈಯಕ್ತಿಕ ಸ್ವಾತಂತ್ರ್ಯ. ಅದನ್ನು ಭಾರತದಲ್ಲಿ ತಡೆಯುವ ಸ್ವಾತಂತ್ರ್ಯ ತನಗೆ ಇಲ್ಲ. ಆದರೆ ಆತನಿಗೆ ಉಲೆಮಾಗಳು ಗೌರವಿಸುವುದು ಕೆಟ್ಟ ಸಂದೇಶ ನೀಡುತ್ತದೆ ಎಂದು ಹೇಳಿದ್ದರು.


ಫೇಸ್ಬುಕ್ ನಲ್ಲಿ ಧರ್ಮಗುರು ಹಾಕಿದ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಅಂತಹ ಟೀಕೆಗಳ ಬಗ್ಗೆ ಮಾಧ್ಯಮದಲ್ಲಿ ಮಹತ್ವ ಕೊಡಬೇಕಿಲ್ಲ. ಎಲ್ಲ ಧರ್ಮಗಳನ್ನು ಗೌರವಿಸುವುದು ನಮ್ಮ ಸಂಸ್ಕೃತಿ. 99 ಶೇಕಡಾ ಜನರು ಎಲ್ಲ ಧರ್ಮಗಳನ್ನು ಗೌರವಿಸುತ್ತಾರೆ ಎಂದು ಹೇಳಿದ್ದಾರೆ.
Speaker Ut Khader attends kola at Panolibail turns controversy, Muslim leader's blast speaker on social media. Khader offered Harake Kola to Karnika Daivas of Tulunadu Kallurti Kalkuda on Sunday, February 4 in the night to fulfil his desires. However, Muslim leaders have viciously attacked Khader on the social media
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm