ಬ್ರೇಕಿಂಗ್ ನ್ಯೂಸ್
07-02-24 10:55 am Mangalore Correspondent ಕರಾವಳಿ
ಪುತ್ತೂರು, ಫೆ.7: ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ನೇಮಕ ವಿರೋಧಿ ಒಂದಷ್ಟು ಅತೃಪ್ತ ನಾಯಕರು ಪಕ್ಷದ ಕಚೇರಿಗೆ ಬೀಗ ಜಡಿದಿರುವುದು ಕೇಸರಿ ಭದ್ರಕೋಟೆಯಲ್ಲಿ ಕಂಪನ ಸೃಷ್ಟಿಸಿತ್ತು. ಆದರೆ, ಎರಡೇ ದಿನದಲ್ಲಿ ಬೀಗ ತೆರೆಯಲಾಗಿದ್ದು, ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತೆರಳಿ ಅತೃಪ್ತ ನಾಯಕರ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಮಂಗಳವಾರ ಬೆಳಗ್ಗೆಯೇ ಸತೀಶ್ ಕುಂಪಲ ಸುಳ್ಯಕ್ಕೆ ಆಗಮಿಸಿದ್ದು ಅವರ ಜೊತೆಗೆ ಜಿಲ್ಲೆಯ ಪಕ್ಷದ ಪ್ರಭಾರಿ ಉದಯಕುಮಾರ್ ಶೆಟ್ಟಿ, ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಅವರು ಇದ್ದರು. ಮಂಡಲಾಧ್ಯಕ್ಷರ ನೇಮಕ ಪಕ್ಷದ ನಿರ್ಧಾರ. ಅದನ್ನು ಹಿಂಪಡೆಯಲು ಸಾಧ್ಯವಿಲ್ಲ. ಪಕ್ಷದ ನಿರ್ಧಾರವನ್ನು ಎಲ್ಲರೂ ಪಾಲನೆ ಮಾಡಬೇಕಾಗುತ್ತದೆ ಎಂದು ಜಿಲ್ಲಾಧ್ಯಕ್ಷರು ತಾಲೂಕು ಮಟ್ಟದ ನಾಯಕರಿಗೆ ಮನವರಿಕೆ ಮಾಡಿದ್ದಾರೆ.
ಇದೇ ವೇಳೆ, ತಾಲೂಕು ಕೋರ್ ಕಮಿಟಿಯಲ್ಲಿ ಚರ್ಚೆಯಾಗದ ಹೆಸರನ್ನು ಪರಿಗಣಿಸಿದ್ದು ಹೇಗೆ ಎನ್ನುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಮುಂದಿನ ಕೋರ್ ಕಮಿಟಿ ಮತ್ತು ತಾಲೂಕು ಕಮಿಟಿಯಲ್ಲಿ ನಮ್ಮ ಹಿಂದಿನ ತಂಡದ ಸದಸ್ಯರನ್ನು ಸೇರಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಮಧ್ಯಾಹ್ನ ವೇಳೆಗೆ ನೂತನ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ ಅವರು ಪಕ್ಷದ ಕಚೇರಿಗೆ ಬಂದು ಜಿಲ್ಲಾಧ್ಯಕ್ಷರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಆದಷ್ಟು ಬೇಗ ಪದಗ್ರಹಣಕ್ಕೆ ಅವಕಾಶ ನೀಡಬೇಕು. ತಾಲೂಕು ತಂಡದಲ್ಲಿ ಹೊಸಬರನ್ನು ಸೇರಿಸಿಕೊಳ್ಳಲು ಅವಕಾಶ ನೀಡಬೇಕು. ಪಕ್ಷವನ್ನು ಮತ್ತೆ ಸಕ್ರಿಯಗೊಳಿಸಬೇಕು ಎಂಬುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಅತೃಪ್ತರ ಬೀಗ ಜಡಿಯುವ ನಾಟಕಕ್ಕೆ ಅಲ್ಪ ವಿರಾಮ ಬಿದ್ದಿದೆ.
BJP Sullia party office forcefully locked in Sullia, Satish Kumapla intervens to solve issue.
12-07-25 10:47 pm
HK News Desk
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
12-07-25 11:00 pm
Mangalore Correspondent
Mangalore Accident, Bolero, Deralakatte: ದೇರಳ...
12-07-25 10:26 pm
Gas Leak at MRPL, Mangalore, death: ಎಂಆರ್ ಪಿಎ...
12-07-25 01:42 pm
Dharmasthala News, Dead bodies, Court: ಧರ್ಮಸ್...
11-07-25 08:55 pm
Dc Mangalore, Darshan; ಯುವ ಜಿಲ್ಲಾಧಿಕಾರಿ ಚುರುಕ...
10-07-25 07:23 pm
12-07-25 11:10 pm
Mangalore Correspondent
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm
ಮಂಗಳೂರಿಗೆ ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಡ್ರಗ್ಸ್...
11-07-25 07:13 pm