ಬ್ರೇಕಿಂಗ್ ನ್ಯೂಸ್
07-02-24 10:55 am Mangalore Correspondent ಕರಾವಳಿ
ಪುತ್ತೂರು, ಫೆ.7: ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ನೇಮಕ ವಿರೋಧಿ ಒಂದಷ್ಟು ಅತೃಪ್ತ ನಾಯಕರು ಪಕ್ಷದ ಕಚೇರಿಗೆ ಬೀಗ ಜಡಿದಿರುವುದು ಕೇಸರಿ ಭದ್ರಕೋಟೆಯಲ್ಲಿ ಕಂಪನ ಸೃಷ್ಟಿಸಿತ್ತು. ಆದರೆ, ಎರಡೇ ದಿನದಲ್ಲಿ ಬೀಗ ತೆರೆಯಲಾಗಿದ್ದು, ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತೆರಳಿ ಅತೃಪ್ತ ನಾಯಕರ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಮಂಗಳವಾರ ಬೆಳಗ್ಗೆಯೇ ಸತೀಶ್ ಕುಂಪಲ ಸುಳ್ಯಕ್ಕೆ ಆಗಮಿಸಿದ್ದು ಅವರ ಜೊತೆಗೆ ಜಿಲ್ಲೆಯ ಪಕ್ಷದ ಪ್ರಭಾರಿ ಉದಯಕುಮಾರ್ ಶೆಟ್ಟಿ, ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಅವರು ಇದ್ದರು. ಮಂಡಲಾಧ್ಯಕ್ಷರ ನೇಮಕ ಪಕ್ಷದ ನಿರ್ಧಾರ. ಅದನ್ನು ಹಿಂಪಡೆಯಲು ಸಾಧ್ಯವಿಲ್ಲ. ಪಕ್ಷದ ನಿರ್ಧಾರವನ್ನು ಎಲ್ಲರೂ ಪಾಲನೆ ಮಾಡಬೇಕಾಗುತ್ತದೆ ಎಂದು ಜಿಲ್ಲಾಧ್ಯಕ್ಷರು ತಾಲೂಕು ಮಟ್ಟದ ನಾಯಕರಿಗೆ ಮನವರಿಕೆ ಮಾಡಿದ್ದಾರೆ.
ಇದೇ ವೇಳೆ, ತಾಲೂಕು ಕೋರ್ ಕಮಿಟಿಯಲ್ಲಿ ಚರ್ಚೆಯಾಗದ ಹೆಸರನ್ನು ಪರಿಗಣಿಸಿದ್ದು ಹೇಗೆ ಎನ್ನುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಮುಂದಿನ ಕೋರ್ ಕಮಿಟಿ ಮತ್ತು ತಾಲೂಕು ಕಮಿಟಿಯಲ್ಲಿ ನಮ್ಮ ಹಿಂದಿನ ತಂಡದ ಸದಸ್ಯರನ್ನು ಸೇರಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಮಧ್ಯಾಹ್ನ ವೇಳೆಗೆ ನೂತನ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ ಅವರು ಪಕ್ಷದ ಕಚೇರಿಗೆ ಬಂದು ಜಿಲ್ಲಾಧ್ಯಕ್ಷರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಆದಷ್ಟು ಬೇಗ ಪದಗ್ರಹಣಕ್ಕೆ ಅವಕಾಶ ನೀಡಬೇಕು. ತಾಲೂಕು ತಂಡದಲ್ಲಿ ಹೊಸಬರನ್ನು ಸೇರಿಸಿಕೊಳ್ಳಲು ಅವಕಾಶ ನೀಡಬೇಕು. ಪಕ್ಷವನ್ನು ಮತ್ತೆ ಸಕ್ರಿಯಗೊಳಿಸಬೇಕು ಎಂಬುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಅತೃಪ್ತರ ಬೀಗ ಜಡಿಯುವ ನಾಟಕಕ್ಕೆ ಅಲ್ಪ ವಿರಾಮ ಬಿದ್ದಿದೆ.
BJP Sullia party office forcefully locked in Sullia, Satish Kumapla intervens to solve issue.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 08:31 pm
HK News Staffer
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm