ಬ್ರೇಕಿಂಗ್ ನ್ಯೂಸ್
07-02-24 10:55 am Mangalore Correspondent ಕರಾವಳಿ
ಪುತ್ತೂರು, ಫೆ.7: ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ನೇಮಕ ವಿರೋಧಿ ಒಂದಷ್ಟು ಅತೃಪ್ತ ನಾಯಕರು ಪಕ್ಷದ ಕಚೇರಿಗೆ ಬೀಗ ಜಡಿದಿರುವುದು ಕೇಸರಿ ಭದ್ರಕೋಟೆಯಲ್ಲಿ ಕಂಪನ ಸೃಷ್ಟಿಸಿತ್ತು. ಆದರೆ, ಎರಡೇ ದಿನದಲ್ಲಿ ಬೀಗ ತೆರೆಯಲಾಗಿದ್ದು, ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತೆರಳಿ ಅತೃಪ್ತ ನಾಯಕರ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಮಂಗಳವಾರ ಬೆಳಗ್ಗೆಯೇ ಸತೀಶ್ ಕುಂಪಲ ಸುಳ್ಯಕ್ಕೆ ಆಗಮಿಸಿದ್ದು ಅವರ ಜೊತೆಗೆ ಜಿಲ್ಲೆಯ ಪಕ್ಷದ ಪ್ರಭಾರಿ ಉದಯಕುಮಾರ್ ಶೆಟ್ಟಿ, ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಅವರು ಇದ್ದರು. ಮಂಡಲಾಧ್ಯಕ್ಷರ ನೇಮಕ ಪಕ್ಷದ ನಿರ್ಧಾರ. ಅದನ್ನು ಹಿಂಪಡೆಯಲು ಸಾಧ್ಯವಿಲ್ಲ. ಪಕ್ಷದ ನಿರ್ಧಾರವನ್ನು ಎಲ್ಲರೂ ಪಾಲನೆ ಮಾಡಬೇಕಾಗುತ್ತದೆ ಎಂದು ಜಿಲ್ಲಾಧ್ಯಕ್ಷರು ತಾಲೂಕು ಮಟ್ಟದ ನಾಯಕರಿಗೆ ಮನವರಿಕೆ ಮಾಡಿದ್ದಾರೆ.
ಇದೇ ವೇಳೆ, ತಾಲೂಕು ಕೋರ್ ಕಮಿಟಿಯಲ್ಲಿ ಚರ್ಚೆಯಾಗದ ಹೆಸರನ್ನು ಪರಿಗಣಿಸಿದ್ದು ಹೇಗೆ ಎನ್ನುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಮುಂದಿನ ಕೋರ್ ಕಮಿಟಿ ಮತ್ತು ತಾಲೂಕು ಕಮಿಟಿಯಲ್ಲಿ ನಮ್ಮ ಹಿಂದಿನ ತಂಡದ ಸದಸ್ಯರನ್ನು ಸೇರಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಮಧ್ಯಾಹ್ನ ವೇಳೆಗೆ ನೂತನ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ ಅವರು ಪಕ್ಷದ ಕಚೇರಿಗೆ ಬಂದು ಜಿಲ್ಲಾಧ್ಯಕ್ಷರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಆದಷ್ಟು ಬೇಗ ಪದಗ್ರಹಣಕ್ಕೆ ಅವಕಾಶ ನೀಡಬೇಕು. ತಾಲೂಕು ತಂಡದಲ್ಲಿ ಹೊಸಬರನ್ನು ಸೇರಿಸಿಕೊಳ್ಳಲು ಅವಕಾಶ ನೀಡಬೇಕು. ಪಕ್ಷವನ್ನು ಮತ್ತೆ ಸಕ್ರಿಯಗೊಳಿಸಬೇಕು ಎಂಬುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಅತೃಪ್ತರ ಬೀಗ ಜಡಿಯುವ ನಾಟಕಕ್ಕೆ ಅಲ್ಪ ವಿರಾಮ ಬಿದ್ದಿದೆ.
BJP Sullia party office forcefully locked in Sullia, Satish Kumapla intervens to solve issue.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm