ಬ್ರೇಕಿಂಗ್ ನ್ಯೂಸ್
07-02-24 10:55 am Mangalore Correspondent ಕರಾವಳಿ
ಪುತ್ತೂರು, ಫೆ.7: ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ನೇಮಕ ವಿರೋಧಿ ಒಂದಷ್ಟು ಅತೃಪ್ತ ನಾಯಕರು ಪಕ್ಷದ ಕಚೇರಿಗೆ ಬೀಗ ಜಡಿದಿರುವುದು ಕೇಸರಿ ಭದ್ರಕೋಟೆಯಲ್ಲಿ ಕಂಪನ ಸೃಷ್ಟಿಸಿತ್ತು. ಆದರೆ, ಎರಡೇ ದಿನದಲ್ಲಿ ಬೀಗ ತೆರೆಯಲಾಗಿದ್ದು, ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತೆರಳಿ ಅತೃಪ್ತ ನಾಯಕರ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಮಂಗಳವಾರ ಬೆಳಗ್ಗೆಯೇ ಸತೀಶ್ ಕುಂಪಲ ಸುಳ್ಯಕ್ಕೆ ಆಗಮಿಸಿದ್ದು ಅವರ ಜೊತೆಗೆ ಜಿಲ್ಲೆಯ ಪಕ್ಷದ ಪ್ರಭಾರಿ ಉದಯಕುಮಾರ್ ಶೆಟ್ಟಿ, ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಅವರು ಇದ್ದರು. ಮಂಡಲಾಧ್ಯಕ್ಷರ ನೇಮಕ ಪಕ್ಷದ ನಿರ್ಧಾರ. ಅದನ್ನು ಹಿಂಪಡೆಯಲು ಸಾಧ್ಯವಿಲ್ಲ. ಪಕ್ಷದ ನಿರ್ಧಾರವನ್ನು ಎಲ್ಲರೂ ಪಾಲನೆ ಮಾಡಬೇಕಾಗುತ್ತದೆ ಎಂದು ಜಿಲ್ಲಾಧ್ಯಕ್ಷರು ತಾಲೂಕು ಮಟ್ಟದ ನಾಯಕರಿಗೆ ಮನವರಿಕೆ ಮಾಡಿದ್ದಾರೆ.
ಇದೇ ವೇಳೆ, ತಾಲೂಕು ಕೋರ್ ಕಮಿಟಿಯಲ್ಲಿ ಚರ್ಚೆಯಾಗದ ಹೆಸರನ್ನು ಪರಿಗಣಿಸಿದ್ದು ಹೇಗೆ ಎನ್ನುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಮುಂದಿನ ಕೋರ್ ಕಮಿಟಿ ಮತ್ತು ತಾಲೂಕು ಕಮಿಟಿಯಲ್ಲಿ ನಮ್ಮ ಹಿಂದಿನ ತಂಡದ ಸದಸ್ಯರನ್ನು ಸೇರಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಮಧ್ಯಾಹ್ನ ವೇಳೆಗೆ ನೂತನ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ ಅವರು ಪಕ್ಷದ ಕಚೇರಿಗೆ ಬಂದು ಜಿಲ್ಲಾಧ್ಯಕ್ಷರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಆದಷ್ಟು ಬೇಗ ಪದಗ್ರಹಣಕ್ಕೆ ಅವಕಾಶ ನೀಡಬೇಕು. ತಾಲೂಕು ತಂಡದಲ್ಲಿ ಹೊಸಬರನ್ನು ಸೇರಿಸಿಕೊಳ್ಳಲು ಅವಕಾಶ ನೀಡಬೇಕು. ಪಕ್ಷವನ್ನು ಮತ್ತೆ ಸಕ್ರಿಯಗೊಳಿಸಬೇಕು ಎಂಬುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಅತೃಪ್ತರ ಬೀಗ ಜಡಿಯುವ ನಾಟಕಕ್ಕೆ ಅಲ್ಪ ವಿರಾಮ ಬಿದ್ದಿದೆ.
BJP Sullia party office forcefully locked in Sullia, Satish Kumapla intervens to solve issue.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm