ಬ್ರೇಕಿಂಗ್ ನ್ಯೂಸ್
23-11-20 04:00 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 23: ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮಂಗಳೂರಿನ ಕದ್ರಿ ಉದ್ಯಾನ ವನದಲ್ಲಿ ನಡೆಸುತ್ತಿದ್ದ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಈ ಬಾರಿ ಬಹುತೇಕ ರದ್ದುಗೊಳ್ಳುವ ಸಾಧ್ಯತೆಯಿದೆ.
ಕೊರೊನಾ ಕಾರಣದಿಂದ ಈ ಬಾರಿ ಕಾರ್ಯಕ್ರಮ ಆಯೋಜನೆಗೆ ಸರಕಾರದ ಅನುಮತಿ ಮತ್ತು ಅನುದಾನ ಸಿಗುವುದು ಕಷ್ಟ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಅಲ್ಲದೆ, ಪಾರ್ಕ್ ಭೇಟಿಗೆ ಸೀಮಿತ ನಿರ್ಬಂಧ ಇರುವುದರಿಂದ ಉತ್ಸವಕ್ಕೆ ಅವಕಾಶ ಸಿಗಲಾರದು ಎನ್ನುತ್ತಿದ್ದಾರೆ.



ಸದ್ಯಕ್ಕೆ ಬೆಳಗ್ಗೆ ಮತ್ತು ಸಂಜೆಯ ಅವಧಿಯಲ್ಲಿ ಮಾತ್ರ ಕದ್ರಿ ಪಾರ್ಕ್ ವೀಕ್ಷಣೆಗೆ ಅವಕಾಶ ಇದೆ. ಉಳಿದ ಅವಧಿಯಲ್ಲಿ ಪಾರ್ಕ್ ಭೇಟಿಗೆ ಅವಕಾಶವಿಲ್ಲ. ಫಲಪುಷ್ಪ ಪ್ರದರ್ಶನ ಏರ್ಪಡಿಸುವುದಿದ್ದರೆ ನಾಲ್ಕು ತಿಂಗಳ ಮೊದಲೇ ಪೂರ್ವ ತಯಾರಿ ಆರಂಭವಾಗುತ್ತದೆ. ಆದರೆ ಈ ಬಾರಿ ಇನ್ನೂ ಯಾವುದೇ ಚಟುವಟಿಕೆಗಳು ಆರಂಭವಾಗಿಲ್ಲ.
ಪ್ರದರ್ಶನ ಮತ್ತು ಮಾರಾಟಕ್ಕಾಗಿ ಕದ್ರಿ ಉದ್ಯಾನ ಸೇರಿದಂತೆ ಜಿಲ್ಲೆಯ ವಿವಿಧ ತೋಟಗಾರಿಕಾ ಕ್ಷೇತ್ರದಲ್ಲಿ ಬಗೆಬಗೆಯ ತರಕಾರಿ ಗಿಡಗಳನ್ನು ಬೆಳೆಸಲಾಗುತ್ತಿತ್ತು. ಅಲ್ಲದೆ, ಬೀಜಗಳನ್ನು ಸಿದ್ಧಪಡಿಸಿ ಪ್ರದರ್ಶನ ಮತ್ತು ಮಾರಾಟಕ್ಕೆ ಇರಿಸಲಾಗುತ್ತದೆ. ಕಳೆದೆರಡು ವರ್ಷದಿಂದ ಒಂದು ರೂ.ಗೆ ಒಂದು ತರಕಾರಿ ಸಸಿ ಎನ್ನುವ ಹೆಸರಲ್ಲಿ ಮಾರಾಟ ಮಾಡಿದ್ದು ಆಕರ್ಷಣೆಗೆ ಪಾತ್ರವಾಗಿತ್ತು. ಈ ಬಾರಿಯೂ ಕದ್ರಿ ಪಾರ್ಕಿನಲ್ಲಿ ತರಕಾರಿ ಬೆಳೆಸಲಾಗುವುದು. ಆದರೆ ಪ್ರದರ್ಶನ ಉದ್ದೇಶಕ್ಕಾಗಿ ಅಲ್ಲ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.
Video:
The Coronavirus effect has resulted in the cancellation of the Annual Flower Show Exhibition at Kadri Park in Mangalore this 2020.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am