ಬ್ರೇಕಿಂಗ್ ನ್ಯೂಸ್
07-02-24 04:25 pm Mangalore Correspondent ಕರಾವಳಿ
ಉಳ್ಳಾಲ, ಫೆ.7: ನರಿಂಗಾನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ , ಸ್ಪೀಕರ್ ಯು.ಟಿ.ಖಾದರ್ ಆಪ್ತ, ಕಾಂಗ್ರೆಸ್ ಹಿರಿಯ ದಲಿತ ಮುಖಂಡರಾದ ಪದ್ಮನಾಭ ನರಿಂಗಾನ(77) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಸದಾ ಲವಲವಿಕೆಯಿಂದಿದ್ದ ಪದ್ಮನಾಭರಿಗೆ ನಿನ್ನೆ ಸಂಜೆ ಎದೆ ನೋವು ಕಾಣಿಸಿಕೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನ ದಾಖಲು ಮಾಡಲಾಗಿತ್ತು. ಇಂದು ಮಧ್ಯಾಹ್ನ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅಪರೂಪದ ಪ್ರಾಮಾಣಿಕ ರಾಜಕೀಯ, ಸಾಮಾಜಿಕ ಕಾರ್ಯಕರ್ತರಾಗಿದ್ದ ಪದ್ಮನಾಭ ಅವರು ಸಾಮಾನ್ಯ ಬಡತನದ ಕುಟುಂಬದಿಂದ ಬಂದು ತನ್ನ ಅಪರಿಮಿತ ಶ್ರಮ ಹಾಗೂ ಬದ್ಧತೆಯಿಂದ ಸಾಮಾಜಿಕ ಕ್ಷೇತ್ರ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಮೇಲೆ ಬಂದವರು. ಎರಡು ಬಾರಿ ನರಿಂಗಾನ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದಲ್ಲದೆ ಪಂಚಾಯತ್ ಉಪಾಧ್ಯಕ್ಷರೂ ಆಗಿದ್ದರು.
ಕೈರಂಗಳ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ, ಸ್ಥಳೀಯ ದೇವಸ್ಥಾನ, ದೈವಸ್ಥಾನದ ಆಡಳಿತ ಮಂಡಳಿ ಸದಸ್ಯರಾಗಿ ಜನಾನುರಾಗಿಯಾಗಿದ್ದರು. ಸಾಮಾಜಿಕ ಕ್ಷೇತ್ರದ ಸೇವೆಗಾಗಿ ಈ (2023) ಬಾರಿಯ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯೂ ಪದ್ಮನಾಭರಿಗೆ ಲಭಿಸಿತ್ತು. ಪದ್ಮನಾಭರ ಮಗ ಮೋಹನ್ ಅವರು ಸರಕಾರಿ ವಾಹನ ಚಾಲಕರು. ಮೋಹನ್ ಸ್ಪೀಕರ್ ಯು.ಟಿ.ಖಾದರ್ ಸಚಿವರಾಗಿದ್ದಾಗಲೂ ಅವರಿಗೆ ಚಾಲಕರಾಗಿದ್ದರು. ಈಗ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಕಾರು ಚಾಲಕರಾಗಿದ್ದಾರೆ. ಮಗ ಜಿಲ್ಲಾಧಿಕಾರಿಯ ಕಾರು ಚಾಲಕನಾದರೂ ಅದರ ಯಾವುದೇ ಲಾಭ ಪಡೆಯದ ಪದ್ಮನಾಭರು ಸಿಂಪಲ್ ಆಗಿದ್ದರು.
ಹಿಂದಿನ ಕಮ್ಯೂನಿಸ್ಟ್ ಧುರೀಣ ಮಹಾಬಲೇಶ್ವರ ಭಟ್ಟರ ಪ್ರೇರಣೆಯಿಂದ ಕಮ್ಯೂನಿಸ್ಟ್ ಕಾರ್ಯಕರ್ತನಾಗಿ ರಾಜಕೀಯ ಪ್ರವೇಶ ಮಾಡಿದ ಪದ್ಮನಾಭ ಅವರು ಅನೇಕ ವರ್ಷಗಳ ಕಾಲ ಸಿಪಿಐ ಪಕ್ಷದಲ್ಲಿ ಸಕ್ರಿಯವಾಗಿ ದುಡಿದವರು. ಬಳಿಕ ಕಾಂಗ್ರೆಸ್ ಪಕ್ಷ ಸೇರಿದ್ದರು. ನರಿಂಗಾನ ಕಂಬಳ ಸಮಿತಿಯ ಗೌರವ ಸಲಹೆಗಾರರೂ, ಅಹಿಂದ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ, ಮೊಮ್ಮಕ್ಕಳು ಇದ್ದಾರೆ.
ಫೆ.8ರ ಗುರುವಾರ(ನಾಳೆ) ಬೆಳಗ್ಗೆ 10 ಗಂಟೆಗೆ ಪದ್ಮನಾಭರ ನರಿಂಗಾನದ ಸ್ವಗೃಹದಲ್ಲಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ ಬಳಿಕ ಅಂತ್ಯಕ್ರಿಯೆ ನಡೆಯಲಿದೆಯೆಂದು ಕುಟುಂಬಸ್ಥರು ತಿಳಿಸಿದ್ದಾರೆ.
Mangalore Congress senior leader Padmanaba Naringana close member of speaker UT Khader dies at 77
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm