ಬ್ರೇಕಿಂಗ್ ನ್ಯೂಸ್
23-11-20 04:29 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 23: ಪದವಿ ಕಾಲೇಜು ಆರಂಭಗೊಂಡು ವಾರ ಕಳೆಯುತ್ತಿದ್ದು, ಕಾಲೇಜು ತೆರಳುವ ಮುನ್ನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಜಿಲ್ಲಾಡಳಿತದಿಂದ ಉಚಿತವಾಗಿ ಟೆಸ್ಟ್ ಮಾಡಲಾಗುತ್ತಿದ್ದು, ಈವರೆಗೆ ಟೆಸ್ಟ್ ಆಗಿ ರಿಪೋರ್ಟ್ ಬಂದಿದ್ದರಲ್ಲಿ 29 ವಿದ್ಯಾರ್ಥಿಗಳು ಮಾತ್ರ ಕೊರೊನಾ ಪಾಸಿಟಿವ್ ಆಗಿದ್ದಾರೆ.
ಮಂಗಳೂರಿನಲ್ಲಿ 16, ಸುಳ್ಯದಲ್ಲಿ 4, ಬೆಳ್ತಂಗಡಿಯಲ್ಲಿ 1, ಬಂಟ್ವಾಳದಲ್ಲಿ 7, ಪುತ್ತೂರಿನಲ್ಲಿ ಒಬ್ಬ ವಿದ್ಯಾರ್ಥಿಗೆ ಕೊರೊನಾ ಕಾಣಿಸಿಕೊಂಡಿದೆ. ಮಂಗಳೂರಿನ ಕೆಎಂಸಿಯಲ್ಲಿ ಕಲಿಯುವ ಹೊರ ರಾಜ್ಯದಿಂದ ಬಂದಿದ್ದ ಆರು ವಿದ್ಯಾರ್ಥಿಗಳಲ್ಲೂ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದ್ದು, ಅದರ ವರದಿ ಸಿಗುವಾಗ ವಿಳಂಬವಾಗುತ್ತಿದೆ. ಶನಿವಾರ ರಾತ್ರಿ ವರೆಗೆ 16,441 ವಿದ್ಯಾರ್ಥಿಗಳ ಕೋವಿಡ್ ತಪಾಸಣೆ ಪರೀಕ್ಷೆ ನಡೆಸಿದ್ದು, 29 ವಿದ್ಯಾರ್ಥಿಗಳಲ್ಲಿ ಮಾತ್ರ ಪಾಸಿಟಿವ್ ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಅವರನ್ನು ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 8 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದ್ದು, 8 ಖಾಸಗಿ ಹಾಗೂ ಒಂದು ಸರಕಾರಿ ಆಸ್ಪತ್ರೆಯ ಲ್ಯಾಬ್ನಲ್ಲಿ ವರದಿ ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 17 ಸಾವಿರ ವಿದ್ಯಾರ್ಥಿಗಳ ಪೈಕಿ ಕೇವಲ 29 ಮಂದಿಗೆ ಮಾತ್ರ ಕೋವಿಡ್ ಕಂಡುಬಂದಿದ್ದು ಅತ್ಯಂತ ಸಂತಸದ ಬೆಳವಣಿಗೆಯಾಗಿದೆ. ಕೊರೊನಾ ನಮ್ಮನ್ನು ಬಿಟ್ಟು ದೂರ ಹೋಗುತ್ತಿರುವುದರ ಸಂಕೇತ ಎಂದು ಹೇಳಲಾಗುತ್ತಿದೆ.
As colleges have reopened in Mangalore the over all attendance on the first day was 17 thousand in which only 29 students have been tested covid positive.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm