ಬ್ರೇಕಿಂಗ್ ನ್ಯೂಸ್
09-02-24 05:25 pm Mangaluru Correspondent ಕರಾವಳಿ
ಮಂಗಳೂರು, ಫೆ.9: ಸ್ಕೂಟರ್ ಚಲಾಯಿಸುತ್ತಿದ್ದಾಗ ನಾಯಿಯನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಕಂಬವೊಂದಕ್ಕೆ ಡಿಕ್ಕಿಯಾದ ಕಾರಣ ತಲೆಗೆ ತೀವ್ರ ಪೆಟ್ಟು ಬಿದ್ದ ಯುವಕನೊಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮರೋಳಿ ಬಳಿ ನಡೆದಿದೆ.
ಕುಲಶೇಖರ ನಿವಾಸಿ ಸ್ಟಾನ್ಲೀ – ಸುನೀತಾ ಡಿಸೋಜ ದಂಪತಿಯ ಪುತ್ರ, ಇಂಜಿನಿಯರಿಂಗ್ ವಿದ್ಯಾರ್ಥಿ ಟೆರ್ರೆನ್ಸ್ ಡಿಸೋಜ(21) ಮೃತ ಯುವಕ. ಗುರುವಾರ ರಾತ್ರಿ 10 ಗಂಟೆ ವೇಳೆಗೆ ಯುವಕ ಕುಲಶೇಖರ್ ಕೋರ್ಡೆಲ್ ಚರ್ಚ್ ನಲ್ಲಿ ಹೆತ್ತವರ ಜೊತೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ. ಬಳಿಕ ಪಡೀಲ್ ಪೆಟ್ರೋಲ್ ಪಂಪ್ ಗೆ ಹೋಗಿ ಬರುತ್ತೇನೆಂದು ಹೇಳಿ ಹೊರಟಿದ್ದ. ಈ ವೇಳೆ, ಬಿಕರ್ನಕಟ್ಟೆಯ ಫ್ಲೈಓವರ್ ಬಳಿಯಿಂದ ಸರ್ವಿಸ್ ರಸ್ತೆಯಲ್ಲಿ ಹೋಗುವಾಗಲೇ ನಾಯಿ ಮರಿಯೊಂದು ಹಠಾತ್ ರಸ್ತೆಗೆ ಅಡ್ಡ ಬಂದಿದ್ದು ಅದನ್ನು ತಪ್ಪಿಸಲು ಯತ್ನಿಸಿದ್ದಾನೆ. ವೇಗವಾಗಿದ್ದ ಸ್ಕೂಟರ್ ನೇರವಾಗಿ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಹೆಲ್ಮೆಟ್ ಹಾಕಿಲ್ಲದ ಕಾರಣ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು.

ಕೂಡಲೇ ಸ್ಥಳೀಯರು ಹುಡುಗನನ್ನು ಎಜೆ ಆಸ್ಪತ್ರೆಗೆ ಒಯ್ದಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಟ್ಟು ನುರಿತ ವೈದ್ಯರು ಲಭ್ಯರಿಲ್ಲ ಎಂದು ಬೇರೆ ಕಡೆಗೆ ಒಯ್ಯಲು ತಿಳಿಸಿದ್ದಾರೆ. ಬಳಿಕ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಿ ತೀವ್ರ ರಕ್ತಸ್ರಾವದಿಂದ ತಡರಾತ್ರಿ 1.30 ಗಂಟೆ ವೇಳೆಗೆ ಯುವಕ ಮೃತಪಟ್ಟಿದ್ದಾನೆ.
ಟೆರ್ರೆನ್ಸ್ ಡಿಸೋಜ ವಾಮಂಜೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಇತರೇ ಚಟುವಟಿಕೆಗಳಲ್ಲಿಯೂ ಸಕ್ರಿಯನಾಗಿದ್ದ. ನಿನ್ನೆ ರಾತ್ರಿ ಕೋರ್ಡೆಲ್ ಚರ್ಚ್ ನಲ್ಲಿ ಕಾರ್ಯಕ್ರಮ ನಡೆದಿದ್ದು ಅದರಲ್ಲಿ ತಂದೆ, ತಾಯಿಯೂ ಪಾಲ್ಗೊಂಡಿದ್ದರು. ಅಪಘಾತದಲ್ಲಿ ಟೆರ್ರೆನ್ಸ್ ಸಾವಿಗೀಡಾಗಿರುವುದು ಸ್ನೇಹಿತ ವಲಯದಲ್ಲಿ ಶಾಕ್ ಮೂಡಿಸಿದೆ. ಬಿಕರ್ನಕಟ್ಟೆಯಲ್ಲಿ ರಸ್ತೆ ಬದಿ ನಾಯಿಗಳಿಗೆ ಊಟ ಹಾಕುವುದರಿಂದ ಬೀದಿ ನಾಯಿಗಳ ಉಪಟಳ ಹೆಚ್ಚಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
Terrence D'Souza, a Mangalore St Josephs college Engineer student, was killed when his two-wheeler slammed into an iron pole after a dog unexpectedly appeared in the center of the road. The victim, identified as Terrence D'Souza (21), son of Stanley and Sunitha D'Souza from Kulshekar,
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm