ಬ್ರೇಕಿಂಗ್ ನ್ಯೂಸ್
12-02-24 02:08 pm Mangalore Correspondent ಕರಾವಳಿ
ಮಂಗಳೂರು, ಫೆ.12: ಬಿಜೆಪಿ- ಜೆಡಿಎಸ್ ಮೈತ್ರಿ ಬಗ್ಗೆಯಾಗಲೀ, ಲೋಕಸಭಾ ಕ್ಷೇತ್ರಗಳ ಟಿಕೆಟ್ ಯಾರಿಗೆ ನೀಡಬೇಕೆಂಬುದರ ಬಗ್ಗೆ ನಿಮಗೆ ಚಿಂತೆ ಬೇಡ. ಅದನ್ನು ನಾವು ನೋಡಿಕೊಳ್ಳುತ್ತೇವೆ. ಎಲ್ಲ 28 ಕ್ಷೇತ್ರಗಳನ್ನೂ ಗೆಲ್ಲುವ ಟಾಸ್ಕ್ ಮಾತ್ರ ಪೂರ್ಣಗೊಳಿಸಲು ಗಮನ ಕೊಡಿ ಎಂದು ಅಮಿತ್ ಶಾ ರಾಜ್ಯ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಒಂದು ದಿನದ ಪ್ರವಾಸ ನಿಮಿತ್ತ ಮೈಸೂರಿಗೆ ಆಗಮಿಸಿದ್ದ ಅವರು, ಖಾಸಗಿ ಹೋಟೆಲ್ನಲ್ಲಿ ರಾಜ್ಯ ಬಿಜೆಪಿ ಮುಖಂಡರೊಂದಿಗೆ ಕೋರ್ ಕಮಿಟಿ ಸಭೆ ನಡೆಸಿದರು. ಪಕ್ಷದ ಪ್ರಮುಖರು ಭಾಗಿಯಾಗಿದ್ದ ಈ ಸಭೆಯಲ್ಲಿ ಹೈಕಮಾಂಡ್ನ ಕಾರ್ಯಸೂಚಿ ಬಗ್ಗೆ ಸಂದೇಶ ನೀಡಿದ ಅಮಿತ್ ಶಾ, ಅಭ್ಯರ್ಥಿಗಳ ಆಯ್ಕೆಯ ಚಿಂತೆಯನ್ನು ಹೈಕಮಾಂಡ್ಗೆ ಬಿಡಿ. ರಾಜ್ಯದ 28 ಕ್ಷೇತ್ರಗಳಲ್ಲೂ ಗೆಲ್ಲುವ ಟಾಸ್ಕ್ ಪೂರ್ಣಗೊಳಿಸಲು ಓಡಾಟ ಶುರು ಮಾಡಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ.
ಇಡೀ ದೇಶದಲ್ಲಿ ಮೋದಿ ಸರ್ಕಾರದ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಮಮಂದಿರ ಉದ್ಘಾಟನೆ ಬಳಿಕ ಪಕ್ಷದ ಪರವಾದ ಅಲೆ ಹೆಚ್ಚಾಗಿದೆ. ಹಾಗಾಗಿ ಹಿಂದಿನ ಎಲ್ಲ ದಾಖಲೆಗಳನ್ನು ಮುರಿಯುವ ನಿಟ್ಟಿನಲ್ಲಿ ಎಲ್ಲ 28 ಕ್ಷೇತ್ರಗಳಲ್ಲೂ ಜಯ ದಾಖಲಿಸಬೇಕು ಎಂಬ ಸೂಚನೆ ಕೊಟ್ಟರು. ಮೂರನೇ ಬಾರಿಗೆ ನರೇಂದ್ರ ಮೋದಿ ಅವರನ್ನು ಪ್ರಧಾನ ಮಂತ್ರಿಯಾಗಿಸಬೇಕು, ದೇಶದಲ್ಲಿ ಬಿಜೆಪಿ 400 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ, ರಾಜ್ಯದಲ್ಲಿಯೂ 28 ಅಭ್ಯರ್ಥಿಗಳನ್ನು ಗೆಲ್ಲಿಸಿ ಹೊಸ ದಾಖಲೆ ಬರೆಯಿರಿ ಎಂದು ಅಮಿತ್ ಶಾ ಸೂಚನೆ ನೀಡಿದ್ದಾರೆ.
ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರಗಳಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಬಲಪಡಿಸಿ. ಆಮೂಲಕ ಅವುಗಳನ್ನು ಬಿಜೆಪಿ ಮತಗಳನ್ನಾಗಿ ಪರಿವರ್ತಿಸಲು ನಿಗಾವಹಿಸಿ ಎಂದು ಮುಖಂಡರಿಗೆ ಅಮಿತ್ ಶಾ ಟಾಸ್ಕ್ ನೀಡಿದ್ದಾರೆ.
ಮೈಸೂರು ಕ್ಲಸ್ಟರ್ ಮಟ್ಟದ ಸಭೆಯಲ್ಲಿ ಮೈಸೂರು–ಕೊಡಗು, ಚಾಮರಾಜನಗರ, ಹಾಸನ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಶಾಸಕರು, ಪರಿಷತ್ ಸದಸ್ಯರು, ಪಕ್ಷದ ಮುಖಂಡರು ಸೇರಿ ನೂರಕ್ಕೂ ಹೆಚ್ಚು ಮಂದಿ ಪಾಲ್ಗೊಂಡರು. ಈ ಭಾಗದಲ್ಲಿ ಕಾಂಗ್ರೆಸ್ ಶಾಸಕರು ಹೆಚ್ಚಿದ್ದು, ಬಿಜೆಪಿಗೆ ಎದುರಾಗಬಹುದಾದ ಸವಾಲುಗಳು ಮತ್ತು ಅದನ್ನು ಎದುರಿಸುವ ಕುರಿತು ಶಾ ಮುಖಂಡರಿಗೆ ಕಿವಿಮಾತು ಹೇಳಿದರು.
ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರದ ಮಾನ ಕಳೆಯುವ ಪ್ರಯತ್ನ ನಡೆಸಿದ ಕಾಂಗ್ರೆಸ್ಗೆ ಅವರದ್ದೇ ಹಾದಿಯಲ್ಲಿ ತಿರುಗೇಟು ನೀಡಬೇಕು. ಕಳೆದ ಹತ್ತು ವರ್ಷದಲ್ಲಿ ಕರ್ನಾಟಕಕ್ಕೆ ಕೇಂದ್ರ ನೀಡಿರುವ ಅನುದಾನವನ್ನು ಅಂಕಿ–ಅಂಶ ಸಮೇತ ಜನರ ಮುಂದಿರಿಸಬೇಕು. ಬಿಜೆಪಿ– ಜೆಡಿಎಸ್ ಮೈತ್ರಿಕೂಟವು ರಾಜ್ಯದ 28 ಕ್ಷೇತ್ರಗಳಲ್ಲೂ ಗೆಲ್ಲಬೇಕು ಎಂದು ಸೂಚನೆ ನೀಡಿದ್ದಾರೆ.
ಪ್ರಚಾರದ ರೋಡ್ ಮ್ಯಾಪ್ ಕುರಿತು ರಾಜ್ಯ ಮುಖಂಡರಿಂದ ಮಾಹಿತಿ ಪಡೆದ ಅಮಿತ್ ಷಾ, ಕೆಲವು ಸೂಚನೆಗಳನ್ನು ನೀಡಿದರು. ಜೆಡಿಎಸ್ಗೆ ಕ್ಷೇತ್ರಗಳನ್ನು ಬಿಟ್ಟುಕೊಡುವ ಬಗ್ಗೆ ಹಾಗೂ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಭೆಯಲ್ಲಿ ಯಾವುದೇ ಚರ್ಚೆ ನಡೆಯಲಿಲ್ಲ. ಆದರೆ, ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.
Mangalore 28 constituency winning is our agenda says Amith Shah. There is not need to worry about JDS merger and seats during the meeting held.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm