ಬ್ರೇಕಿಂಗ್ ನ್ಯೂಸ್
12-02-24 07:13 pm Mangalore Correspondent ಕರಾವಳಿ
ಬೆಳ್ತಂಗಡಿ, ಫೆ.12: ಡ್ರಾಯಿಂಗ್ ಶಿಕ್ಷಕನೊಬ್ಬ ತನ್ನ ಬಗ್ಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎಂಬ ಕಾರಣಕ್ಕೆ ನೊಂದ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಸಾವಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದ್ದು ಧರ್ಮಸ್ಥಳ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.
ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ವಾರದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಫೆ.12ರಂದು ಮೃತಪಟ್ಟಿದ್ದಾಳೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ ಧರ್ಮಸ್ಥಳದ ನಿವಾಸಿ 16 ವರ್ಷದ ಹುಡುಗಿ ಮೃತ ವಿದ್ಯಾರ್ಥಿನಿ. ಶಾಲೆಯ ಡ್ರಾಯಿಂಗ್ ಶಿಕ್ಷಕ ರೂಪೇಶ್ ಪೂಜಾರಿ ಎಂಬಾತ ಮೃತಪಟ್ಟ ವಿದ್ಯಾರ್ಥಿನಿಯ ಬಗ್ಗೆ ಬೇರೊಬ್ಬ ವಿದ್ಯಾರ್ಥಿನಿಗೆ ಅವಮಾನ ಆಗುವ ರೀತಿಯಲ್ಲಿ ಮೆಸೇಜ್ ಮಾಡಿದ್ದ. ಈ ಬಗ್ಗೆ ಆಕೆ ವಿಷಯವನ್ನು ವಿದ್ಯಾರ್ಥಿನಿಗೆ ತಿಳಿಸಿದ್ದಳು. ಇದರಿಂದ ನೊಂದ ವಿದ್ಯಾರ್ಥಿನಿ ಮನೆಯವರಿಗೆ ತಿಳಿಸಿದ್ದಳು. ಮರುದಿನ ತಾಯಿ ಜೊತೆ ಹೋಗಿ ವಿದ್ಯಾರ್ಥಿನಿ ವಿಚಾರಿಸಿದ್ದಾಳೆ.
ಬಳಿಕ ಫೆ.7ರಂದು ವಿದ್ಯಾರ್ಥಿನಿ ಶಾಲೆಗೆ ಬರುವಾಗ ಬಿಸ್ಕೆಟ್ ಪ್ಯಾಕೆಟ್ ಜೊತೆ ಇಲಿ ಪಾಷಾಣ ಅಂಗಡಿಯಿಂದ ಖರೀದಿಸಿ ತಂದಿದ್ದಾಳೆ ಎನ್ನಲಾಗಿದೆ. ಶಾಲೆಯಲ್ಲಿ ಬಿಸ್ಕೆಟ್ ಜೊತೆ ಇಲಿ ಪಾಷಾಣ ಪೇಸ್ಟ್ ಮಿಕ್ಸ್ ಮಾಡಿ ಸೇವಿಸಿದ್ದು ಪ್ರಜ್ಞೆ ಕಳಕೊಂಡಿದ್ದಳು. ತಕ್ಷಣ ಶಾಲೆಯ ಶಿಕ್ಷಕರು ಆಕೆಯನ್ನು ಆಂಬುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ವಿದ್ಯಾರ್ಥಿನಿ ಲಿವರ್ ಮತ್ತು ಕಿಡ್ನಿ ನಿಷ್ಕ್ರಿಯವಾಗಿ ಫೆ.12 ರಂದು ಮುಂಜಾನೆ 5:30 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾಳೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ರೂಪೇಶ್ ಪೂಜಾರಿ ವಿರುದ್ಧ ವಿದ್ಯಾರ್ಥಿನಿ ತಾಯಿ ನೀಡಿದ ದೂರಿನ ಮೇರೆಗೆ IPC 354D, 509, POSO Act 12 , 75JJ Act ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಶಿಕ್ಷಕ ರೂಪೇಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
Drawing teacher valgur messages to student, students dies committing Rat poison at Belthangady Dharmasthala.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 07:39 pm
HK News Staffer
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm