ಬ್ರೇಕಿಂಗ್ ನ್ಯೂಸ್
12-02-24 07:13 pm Mangalore Correspondent ಕರಾವಳಿ
ಬೆಳ್ತಂಗಡಿ, ಫೆ.12: ಡ್ರಾಯಿಂಗ್ ಶಿಕ್ಷಕನೊಬ್ಬ ತನ್ನ ಬಗ್ಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎಂಬ ಕಾರಣಕ್ಕೆ ನೊಂದ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಸಾವಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದ್ದು ಧರ್ಮಸ್ಥಳ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.
ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ವಾರದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಫೆ.12ರಂದು ಮೃತಪಟ್ಟಿದ್ದಾಳೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ ಧರ್ಮಸ್ಥಳದ ನಿವಾಸಿ 16 ವರ್ಷದ ಹುಡುಗಿ ಮೃತ ವಿದ್ಯಾರ್ಥಿನಿ. ಶಾಲೆಯ ಡ್ರಾಯಿಂಗ್ ಶಿಕ್ಷಕ ರೂಪೇಶ್ ಪೂಜಾರಿ ಎಂಬಾತ ಮೃತಪಟ್ಟ ವಿದ್ಯಾರ್ಥಿನಿಯ ಬಗ್ಗೆ ಬೇರೊಬ್ಬ ವಿದ್ಯಾರ್ಥಿನಿಗೆ ಅವಮಾನ ಆಗುವ ರೀತಿಯಲ್ಲಿ ಮೆಸೇಜ್ ಮಾಡಿದ್ದ. ಈ ಬಗ್ಗೆ ಆಕೆ ವಿಷಯವನ್ನು ವಿದ್ಯಾರ್ಥಿನಿಗೆ ತಿಳಿಸಿದ್ದಳು. ಇದರಿಂದ ನೊಂದ ವಿದ್ಯಾರ್ಥಿನಿ ಮನೆಯವರಿಗೆ ತಿಳಿಸಿದ್ದಳು. ಮರುದಿನ ತಾಯಿ ಜೊತೆ ಹೋಗಿ ವಿದ್ಯಾರ್ಥಿನಿ ವಿಚಾರಿಸಿದ್ದಾಳೆ.
ಬಳಿಕ ಫೆ.7ರಂದು ವಿದ್ಯಾರ್ಥಿನಿ ಶಾಲೆಗೆ ಬರುವಾಗ ಬಿಸ್ಕೆಟ್ ಪ್ಯಾಕೆಟ್ ಜೊತೆ ಇಲಿ ಪಾಷಾಣ ಅಂಗಡಿಯಿಂದ ಖರೀದಿಸಿ ತಂದಿದ್ದಾಳೆ ಎನ್ನಲಾಗಿದೆ. ಶಾಲೆಯಲ್ಲಿ ಬಿಸ್ಕೆಟ್ ಜೊತೆ ಇಲಿ ಪಾಷಾಣ ಪೇಸ್ಟ್ ಮಿಕ್ಸ್ ಮಾಡಿ ಸೇವಿಸಿದ್ದು ಪ್ರಜ್ಞೆ ಕಳಕೊಂಡಿದ್ದಳು. ತಕ್ಷಣ ಶಾಲೆಯ ಶಿಕ್ಷಕರು ಆಕೆಯನ್ನು ಆಂಬುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ವಿದ್ಯಾರ್ಥಿನಿ ಲಿವರ್ ಮತ್ತು ಕಿಡ್ನಿ ನಿಷ್ಕ್ರಿಯವಾಗಿ ಫೆ.12 ರಂದು ಮುಂಜಾನೆ 5:30 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾಳೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ರೂಪೇಶ್ ಪೂಜಾರಿ ವಿರುದ್ಧ ವಿದ್ಯಾರ್ಥಿನಿ ತಾಯಿ ನೀಡಿದ ದೂರಿನ ಮೇರೆಗೆ IPC 354D, 509, POSO Act 12 , 75JJ Act ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಶಿಕ್ಷಕ ರೂಪೇಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
Drawing teacher valgur messages to student, students dies committing Rat poison at Belthangady Dharmasthala.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm