ಬ್ರೇಕಿಂಗ್ ನ್ಯೂಸ್
12-02-24 07:43 pm Mangalore Correspondent ಕರಾವಳಿ
ಮಂಗಳೂರು, ಫೆ.12: ಹಿಂದು ದೇವರ ಅವಹೇಳನ ಆರೋಪದ ಹಿನ್ನೆಲೆಯಲ್ಲಿ ಇಡೀ ದಿನ ಪೋಷಕರ ಧರಣಿ, ಶಾಸಕ ವೇದವ್ಯಾಸ ಕಾಮತ್ ಧಿಕ್ಕಾರದ ಕೂಗು, ತೀವ್ರ ಹೋರಾಟದ ಎಚ್ಚರಿಕೆ ಬೆನ್ನಲ್ಲೇ ಬಿಸಿ ತಟ್ಟಿಸಿಕೊಂಡ ಜಿಲ್ಲಾಡಳಿತ ಶಾಲಾಡಳಿತ ಮಂಡಳಿಯ ಜೊತೆಗೆ ಮಾತುಕತೆ ನಡೆಸಿ ಆರೋಪಿತ ಶಿಕ್ಷಕಿಯನ್ನು ವಜಾಗೊಳಿಸುವ ನಿರ್ಧಾರಕ್ಕೆ ಬಂದಿದೆ.
ಈ ಬಗ್ಗೆ ವೆಲೆನ್ಸಿಯಾದ ಜೆರೋಸಾ ಶಿಕ್ಷಣ ಸಂಸ್ಥೆಯವರು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಆರೋಪಿತ ಸಿಸ್ಟರ್ ಪ್ರಭಾ ಅವರನ್ನು ತಕ್ಷಣದಿಂದ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಆ ಸ್ಥಾನಕ್ಕೆ ಮತ್ತೊಬ್ಬರನ್ನು ನೇಮಕ ಮಾಡಲಾಗುವುದು. ಜಿಲ್ಲಾ ಮಟ್ಟದ ಅಧಿಕಾರಿಗಳ ತನಿಖೆಗೆ ನಾವು ಸಹಕರಿಸುತ್ತೇವೆ. ಸದರಿ ತನಿಖೆಯ ಅಂತಿಮ ಆದೇಶಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಶಾಲೆಯ ಪರವಾಗಿ ಮುಖ್ಯ ಶಿಕ್ಷಕಿ ಅನಿತಾ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.

ಈ ಘಟನೆ ದುರದೃಷ್ಟಕರವಾಗಿದ್ದು, ನಮ್ಮ ಮತ್ತು ಪೋಷಕರ ಮಧ್ಯೆ ಅಪನಂಬಿಕೆಯನ್ನು ಸೃಷ್ಟಿಸಿದೆ. ನಾವು ಎಲ್ಲ ಧರ್ಮಗಳು, ನಂಬಿಕೆಗಳನ್ನು ಸಮಾನವಾಗಿ ಸ್ವೀಕರಿಸುತ್ತೇವೆ. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಪೋಷಕರ ಸಹಕಾರವನ್ನು ಬಯಸುತ್ತೇವೆ. ಜೆರೋಸಾ ಶಿಕ್ಷಣ ಸಂಸ್ಥೆಗೆ 60 ವರ್ಷಗಳ ಇತಿಹಾಸವಿದ್ದು, ಈವರೆಗೆ ಇಂತಹ ಘಟನೆ ನಡೆದಿಲ್ಲ ಎಂದವರು ಹೇಳಿದ್ದಾರೆ. ಸಂಜೆಯ ವೇಳೆಗೆ ಶಾಸಕ ವೇದವ್ಯಾಸ ಕಾಮತ್, ಶಾಲಾಡಳಿತ ಮಂಡಳಿ ಸದಸ್ಯರು ಮತ್ತು ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿಗೆ ಶಿಕ್ಷಕಿಯ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದರೆ ಇಲ್ಲಿಯೇ ಧರಣಿ ನಡೆಸುತ್ತೇನೆ ಎಂದು ಬೆದರಿಕೆ ಒಡ್ಡಿದ್ದರು. ಹೀಗಾಗಿ ಜಿಲ್ಲಾಧಿಕಾರಿ ಅಲ್ಲಿ ಸೇರಿದ್ದವರನ್ನು ಸಮಾಧಾನ ಪಡಿಸಿ ಪೊಲೀಸ್ ಕಮಿಷನರ್ ಜೊತೆಗೆ ಶಾಲೆಯ ಒಳಗಡೆ ಹೋಗಿ ಆಡಳಿತ ಮಂಡಳಿ ಸದಸ್ಯರ ಜೊತೆಗೆ ಮಾತುಕತೆ ನಡೆಸಿದ್ದಾರೆ.











ಸಂಜೆ 4.30ರಿಂದ 6.45ರ ವರೆಗೂ ಆಡಳಿತ ಮಂಡಳಿ ಸದಸ್ಯರ ಜೊತೆಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತುಕತೆ ನಡೆಸಿದ್ದಾರೆ. ಬಳಿಕ ಹೊರಬಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ಪ್ರಕರಣದ ತನಿಖೆಗೆ ಎಲ್ಲರೂ ಸಹಕರಿಸಬೇಕು. ಆದಷ್ಟು ತ್ವರಿತವಾಗಿ ತನಿಖೆ ನಡೆಸುತ್ತೇವೆ. ಶಿಕ್ಷಕಿ ವಿರುದ್ಧ ಶಾಲಾಡಳಿತ ಮಂಡಳಿ ಸದಸ್ಯರು ಕ್ರಮ ತೆಗೆದುಕೊಂಡಿದ್ದಾರೆ. ಮಕ್ಕಳ ಶಿಕ್ಷಣದ ದೃಷ್ಟಿಯಿಂದ ಎಲ್ಲ ಪೋಷಕರು ಸಹಕಾರ ನೀಡಬೇಕು ಎಂದು ಹೇಳಿದ್ದಾರೆ. ಸುದೀರ್ಘ ಮಾತುಕತೆಯಾದರೂ, ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳುವ ಆದೇಶ ಬರದೇ ಇದ್ದುದರಿಂದ ಸಂಜೆ 6 ಗಂಟೆಯಾಗುತ್ತಿದ್ದಂತೆ ಮತ್ತೆ ಪೋಷಕರು ಶಾಲೆಯ ಆವರಣದಲ್ಲಿ ಸೇರಿದ್ದರು. ಜಿಲ್ಲಾಧಿಕಾರಿ ಮತ್ತು ಶಾಲೆಯ ಮುಖ್ಯ ಶಿಕ್ಷಕಿ ಹೊರಬಂದು ಹೇಳಿಕೆ ನೀಡುತ್ತಿದ್ದಂತೆ, ಪೋಷಕರು ಜೈಕಾರ ಕೂಗಿ ಸ್ಥಳದಿಂದ ನಿರ್ಗಮಿಸಿದ್ದಾರೆ.
Mangalore Jeppu Gerosa School controversy, Teacher dismissed from school after protest from parents. Finally the school HeadMinister Anitha confirmed the media that teacher Prabha has been dismissed from the school.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm