ಬ್ರೇಕಿಂಗ್ ನ್ಯೂಸ್
13-02-24 12:23 pm Mangalore Correspondent ಕರಾವಳಿ
ಮಂಗಳೂರ, ಫೆ.13: ಸೈಂಟ್ ಜೆರೋಸಾ ಶಾಲೆಯ ಸಿಸ್ಟರ್ ಹಿಂದು ಧರ್ಮ ನಿಂದನೆ ಮಾಡಿದ್ದರೆ ಅದರ ಮೇಲೆ ಕ್ರಮ ಆಗಲಿ, ಶಿಕ್ಷೆಯೂ ಆಗಲಿ. ಅದಕ್ಕೆ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅದರದ್ದೇ ಆದ ಕ್ರಮ, ನಿಯಮಗಳಿವೆ. ಆ ಪ್ರಕಾರ ತನಿಖೆ ನಡೆದು ಅಪರಾಧ ಸಾಬೀತಾದರೆ ಶಿಕ್ಷೆ ವಿಧಿಸುವುದು ಸರಿಯಾದ ವಿಧಾನ. "ಬೀದಿ ನ್ಯಾಯ" ವಿಧಿಸಲು ಇದು ಅರಾಜಕ ದೇಶ ಅಲ್ಲ, ಸರ್ವಾಧಿಕಾರಿಗಳ ನಾಡೂ ಅಲ್ಲ. ಶಾಸಕರಾದವರಿಗೆ ಈ ಜ್ಞಾನ ಇರಬೇಕು. ಶಾಸಕ ವೇದವ್ಯಾಸ ಕಾಮತ್ ಇದನ್ನೆಲ್ಲ ಧಿಕ್ಕರಿಸಿ ಶಾಲೆಗೆ ಮುತ್ತಿಗೆ ಹಾಕಿ ಗೂಂಡಾಗಿರಿ ಮೆರೆದಿರುವುದು ಆಘಾತಕಾರಿ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
ಅದರಲ್ಲೂ ಪ್ರಾಥಮಿಕ ಶಾಲೆಯ ಮುಗ್ಧ ವಿದ್ಯಾರ್ಥಿಗಳನ್ನು ತಮ್ಮದೇ ಶಾಲೆಯ ವಿರುದ್ದ ಮುತ್ತಿಗೆಗೆ ಬಳಸಿರುವುದು, ಧಾರ್ಮಿಕ ಘೋಷಣೆಗಳನ್ನು ಕೂಗಿಸಿರುವುದು ನಾಚಿಕೆಗೇಡಿನ ಕೃತ್ಯ. ಶಾಸಕನಿಗಿರಬೇಕಾದ ಕನಿಷ್ಟ ಪ್ರಜ್ಞೆ, ಸಮಾಜದ ಭವಿಷ್ಯದ ಕುರಿತು ಕಾಳಜಿ ವೇದವ್ಯಾಸ ಕಾಮತರಿಗೆ ಇಲ್ಲ ಎಂಬುದು ಇಂದಿನ ಘಟನೆಯಿಂದ ಸಾಬೀತಾಗಿದೆ. ಮಂಗಳೂರಿನ ಸಾಮಾನ್ಯ, ಕಡಿಮೆ ಆದಾಯದ ಕುಟುಂಬಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಡಕಾಗಿರುವ ಡೊನೇಷನ್ ಹಾವಳಿ, ದುಬಾರಿ ಫೀಸು, ನಿಯಮ ಬಾಹಿರ ಶಿಕ್ಷಣ ವ್ಯವಸ್ಥೆಯ ಕುರಿತು ವಿಧಾನ ಸಭೆಯಲ್ಲಿ ಧ್ವನಿ ಎತ್ತಬೇಕಿದ್ದ ಶಾಸಕರು, ಅದರ ಬದಲಿಗೆ ಅಧಿವೇಶನ ತೊರೆದು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯೊಂದರ ಮೇಲೆ ದಬ್ಬಾಳಿಕೆ ನಡೆಸುತ್ತಿರುವುದು, ಮತೀಯ ಭಾವನೆ ಕೆರಳಿಸಲು ಪ್ರಕರಣವನ್ನು ಬಳಸುತ್ತಿರುವುದು ಖಂಡನೀಯ.











ಇದರ ಹಿಂದೆ ಲೋಕಸಭಾ ಚುನಾವಣೆಯ ಸಿದ್ದತೆ ಇರುವುದು ಸ್ಪಷ್ಟ. ಜಿಲ್ಲಾಡಳಿತ, ಸರಕಾರ ಇಂತಹ ಗೂಂಡಾಗಿರಿಯನ್ನು ಸಹಿಸಬಾರದು, ಕಾನೂನಿನ ಪಾಠ, ಜವಾಬ್ದಾರಿಯನ್ನು ಶಾಸಕರಿಗೆ ಮನವರಿಕೆ ಮಾಡಿಕೊಡಬೇಕು, ಹಿಂಸೆಗೆ ಪ್ರಚೋದಿಸುವ, ಗೂಂಡಾಗಿರಿ ಮೆರೆದಿರುವ ಶಾಸಕ ವೇದವ್ಯಾಸ ಕಾಮತರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಡಿವೈಎಫ್ಐ ರಾಜ್ಯ ಸಮಿತಿ ರಾಜ್ಯ ಸರಕಾರವನ್ನು ಆಗ್ರಹಿಸುತ್ತದೆ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Mangalore Jeppu Gerosa school controversy, Muneer Katipalla slams Vedavyas Kamath over his behaviour at school premises. Mla was found shouting slogans along with little school students.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm