ಬ್ರೇಕಿಂಗ್ ನ್ಯೂಸ್
15-02-24 10:44 am Mangalore Correspondent ಕರಾವಳಿ
ಮಂಗಳೂರು, ಫೆ.15: ಜೆರೋಸಾ ಶಾಲೆಯ ಎದುರಲ್ಲಿ ಪ್ರತಿಭಟನೆ, ಶಿಕ್ಷಕರಿಗೆ ನಿಂದನೆ ಮತ್ತು ಕ್ರಿಸ್ತಿಯನ್ ಶಾಲೆಗಳ ಬಹಿಷ್ಕಾರದ ಕರೆ ಇತ್ಯಾದಿ ಬೆಳವಣಿಗೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಪೊಲೀಸರಿಗೆ ದೂರು ನೀಡಿದ್ದು, ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ವಿಹಿಂಪ ಮುಖಂಡ ಶರಣ್ ಪಂಪ್ವೆಲ್ ಸೇರಿದಂತೆ ಆರು ಮಂದಿಯ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅನಿಲ್ ಜೆರಾಲ್ಡ್ ಲೋಬೊ ಎಂಬವರು ನೀಡಿದ ದೂರಿನಲ್ಲಿ, ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್ ಶಾಲಾಡಳಿತ ಮಂಡಳಿಯ ಜೊತೆ ವಿಚಾರ ವಿಮರ್ಶೆ ಮಾಡದೇ ಶಾಲೆಯ ಮುಂಭಾಗ ಸೇರಿ ಪ್ರತಿಭಟನೆ ನಡೆಸಿದ್ದಾರೆ, ಇವರೊಂದಿಗೆ ಶಾಸಕ ಭರತ್ ಶೆಟ್ಟಿ, ಬಜರಂಗದಳ ಮುಖಂಡ ಶರಣ್ ಪಂಪ್ವೆಲ್, ಸ್ಥಳೀಯ ಬಿಜೆಪಿ ಕಾರ್ಪೊರೇಟರುಗಳಾದ ಸಂದೀಪ್ ಗರೋಡಿ, ಭರತ್ ಕುಮಾರ್ ಮತ್ತು ಇತರರು ಪ್ರತಿಭಟನೆಗೆ ಕೈಜೋಡಿಸಿದ್ದಾರೆ. ಶಾಲೆಯ ಮುಂಭಾಗದಲ್ಲಿ ಅಕ್ರಮವಾಗಿ ಸೇರಿಕೊಂಡು ಜೈಶ್ರೀರಾಮ್ ಘೋಷಣೆ ಕೂಗಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಕ್ರಿಸ್ತಿಯನ್ ಧರ್ಮದ ಬಗ್ಗೆ ಅವಹೇಳನ ಮಾತನಾಡಿ, ಶಾಲೆಯ ನಿಮಯಗಳನ್ನು ಉಲ್ಲಂಘಿಸುವಂತೆ ವಿದ್ಯಾರ್ಥಿಗಳಿಗೆ ಪ್ರಚೋದಿಸಿದ್ದಾರೆ. ಹಿಂದು- ಕ್ರಿಸ್ತಿಯನ್ ಧರ್ಮದ ಜನರ ನಡುವೆ ಗಲಭೆ ಉಂಟಾಗುವಂತೆ ಪ್ರಚೋದಿಸಿದ್ದಾರೆ. ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಭಂಗಕ್ಕೆ ಪ್ರಯತ್ನಿಸಿದ್ದಾರೆ ಎಂದು ತಿಳಿಸಿದ್ದಾರೆ.
ಬುಧವಾರ ರಾತ್ರಿ ಮಾಜಿ ಎಂಎಲ್ಸಿ ಐವಾನ್ ಡಿಸೋಜ ಮತ್ತು ಮಾಜಿ ಶಾಸಕ ಜೆಆರ್ ಲೋಬೊ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಪಾಂಡೇಶ್ವರ ಠಾಣೆಗೆ ತೆರಳಿ, ಎಸಿಪಿ ಮತ್ತು ಇನ್ಸ್ ಪೆಕ್ಟರ್ ಅವರನ್ನು ಭೇಟಿಯಾಗಿ ಘಟನೆಯ ಬಗ್ಗೆ ಹೇಳಿದ್ದು, ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪೊಲೀಸರು ಐದು ಮಂದಿ ಪ್ರಮುಖರು ಮತ್ತು ಇತರರ ವಿರುದ್ಧ ಸೆಕ್ಷನ್ 153ಎ, 295ಎ, 505(2), 506, 149 ಅಡಿ ಎಫ್ಐಆರ್ ದಾಖಲಿಸಿದ್ದಾರೆ. ಈಗಾಗಲೇ ಶಾಸಕ ವೇದವ್ಯಾಸ ಕಾಮತ್ ವಿರುದ್ಧ ಹಕ್ಕುಚ್ಯುತಿ ಬಗ್ಗೆ ವಿಧಾನಸಭೆ ಸ್ಪೀಕರ್ ಗೆ ದೂರು ನೀಡುವುದಾಗಿ ಐವಾನ್ ಡಿಸೋಜ ತಿಳಿಸಿದ್ದು ಇದರ ಬೆನ್ನಲೇ ಎಫ್ಐಆರ್ ದಾಖಲಿಸಿದ್ದಾರೆ. ಶಾಸಕರನ್ನು ವಿಧಾನಸಭೆಯಿಂದ ಅನರ್ಹಗೊಳಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸುವುದಾಗಿಯೂ ಹೇಳಿದ್ದಾರೆ.
Mangalore Gerosa school controversy, FIR booked against MLA Vedavyas Kamath, bharath shetty and sharan pumpwell. The diocese of Mangalore has requested the departments of minority welfare, child welfare and the women’s commission to hold a fair inquiry into the recent incidents at a school in the city where a teacher was removed from her post for her alleged anti-Hindu remarks.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am