ಬ್ರೇಕಿಂಗ್ ನ್ಯೂಸ್
15-02-24 11:07 pm Mangaluru Correspondent ಕರಾವಳಿ
ಮಂಗಳೂರು, ಫೆ.15: ನಗರ ಹೊರವಲಯದ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಫ.17ರಂದು ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಮಾವೇಶ ನಡೆಯಲಿದ್ದು, ಲೋಕಸಭೆ ಚುನಾವಣೆಗೆ ಕರಾವಳಿಯಿಂದಲೇ ರಣಕಹಳೆ ಮೊಳಗಲಿದೆ.
ಮೊದಲ ಬಾರಿಗೆ ಚುನಾವಣೆಗೆ ಒಂದು ತಿಂಗಳಿರುವಾಗ, ಗಾಂಧಿ ಕುಟುಂಬ ಸದಸ್ಯರಿಲ್ಲದೆ ಕಾಂಗ್ರೆಸ್ ಪಕ್ಷ ಕಾರ್ಯಕರ್ತರನ್ನು ಸೆಳೆಯಲು ಮುಂದಾಗಿದೆ. ಸಭೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಲು ಪಕ್ಷದ ಜಿಲ್ಲಾ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟಾಸ್ಕ್ ನೀಡಿದ್ದಾರೆ. ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯ ನಾಯಕರು ಪಾಲ್ಗೊಳ್ಳಲಿದ್ದಾರೆ.
ಇತ್ತೀಚೆಗೆ ಮಂಗಳೂರಿಗೆ ಬಂದಿದ್ದ ಡಿಕೆ ಶಿವಕುಮಾರ್, ಸಭೆಯಲ್ಲಿ ಎಲ್ಲ ಸಚಿವರು, ಶಾಸಕರು ಕೂಡ ಪಾಲ್ಗೊಳ್ಳಲಿದ್ದಾರೆ ಎಂದಿದ್ದರು. ಆದರೆ ಸಭೆಯಲ್ಲಿ ಹೆಚ್ಚು ಜನ ಸೇರಿಸುವುದು ಜಿಲ್ಲಾ ನಾಯಕರಿಗೆ ಟಾಸ್ಕ್ ಆಗಿರತ್ತೆ. ನಾವು ಬೇರೆ ಜಿಲ್ಲೆಗಳಲ್ಲಿ ಹೆಚ್ಚು ಜನ ಸೇರಿಸುತ್ತೇವೆ. ನಮಗೆ ಹೆಚ್ಚು ಬಲ ಇಲ್ಲ ಎಂದು ವಿರೋಧಿಗಳು ಹೇಳುವ ಕರಾವಳಿಯಲ್ಲೇ ಅತಿ ಹೆಚ್ಚು ಜನರನ್ನು ನಾವು ತೋರಿಸಬೇಕಾಗಿದೆ ಎಂದು ಜಿಲ್ಲೆಯ ನಾಯಕರಿಗೆ ಸೂಚನೆ ನೀಡಿದ್ದರು.

ಸಭೆಯ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಮಾಜಿ ಸಚಿವ, ಸಭೆಯ ಪ್ರಚಾರ ಸಮಿತಿ ಅಧ್ಯಕ್ಷ ರಮಾನಾಥ ರೈ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ನೀಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಬಿಜೆಪಿಯವರು ಹೇಳಿದ್ದರು. ನಾವು ನುಡಿದಂತೆ ಐದು ಗ್ಯಾರಂಟಿಗಳನ್ನೂ ನೀಡಿದ್ದೇವೆ. ಗ್ಯಾರಂಟಿ ಯೋಜನೆಗಳೆಲ್ಲ ಜನಸಾಮಾನ್ಯರಿಗೆ ತಲುಪಿದೆ ಎನ್ನುವುದಕ್ಕೆ ಹೆಮ್ಮೆಯಾಗುತ್ತದೆ. ಹಾಗಾಗಿ ಈ ಬಾರಿ ಜನರು ಕಾಂಗ್ರೆಸ್ ಕೈಹಿಡಿಯುತ್ತಾರೆ ಎಂಬ ಭರವಸೆ ಇದೆ. ಬಿಜೆಪಿಯವರು ವಿರೋಧ ಪಕ್ಷ ಇಲ್ಲದಂತೆ ಮಾಡುತ್ತೇವೆ ಎಂಬ ಕನಸಿನಲ್ಲಿದ್ದಾರೆ. ಹಿಂದೆ ಇಂದಿರಾ ಕಾಲದಲ್ಲಿಯೂ ಇಂತಹದ್ದೇ ಸ್ಥಿತಿಯಿತ್ತು. ಕಾಲ ಕಾಲಕ್ಕೆ ಜನರು ತೀರ್ಪು ನೀಡುತ್ತಾರೆ, ಯಾವುದೂ ಶಾಶ್ವತವಲ್ಲ ಎಂದರು.
ನೀವು ಪ್ರತಿ ಬಾರಿಯೂ ಕೊನೆಕ್ಷಣದಲ್ಲಿ ಅಭ್ಯರ್ಥಿ ಘೋಷಿಸಿ ಸೋಲುತ್ತೀರಿ, ಸೋಲಿನ ಸರಪಣಿ ಕಡಿದುಕೊಳ್ಳಲು ಯಾವ ಪ್ರಯತ್ನ ಮಾಡಿದ್ದೀರಿ ಎಂದು ಕೇಳಿದ ಪ್ರಶ್ನೆಗೆ, ಅದಕ್ಕೆ ನಮ್ಮದೇ ಆದ ಪ್ರಯತ್ನ ಮಾಡಿದ್ದೇವೆ, ಪಕ್ಷ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ. ಅವಿಭಜಿತ ಜಿಲ್ಲೆ ನಮ್ಮದು. ಎರಡೂ ಜಿಲ್ಲೆಯನ್ನು ಗೆಲ್ಲುವುದು ನಮ್ಮ ಗುರಿ. ಅದಕ್ಕಾಗಿ ಎರಡೂ ಜಿಲ್ಲೆಯ ಜನರನ್ನು ಸೇರಿಸಿ ರಾಜ್ಯ ಮಟ್ಟದ ಸಮಾವೇಶ ಮಾಡುತ್ತಿದ್ದೇವೆ ಎಂದು ಹೇಳಿದರು.
Mallikarjun Kharge will visit Mangalore for the Congress mega event on February 17 at Shayadri College grounds.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm