ಬ್ರೇಕಿಂಗ್ ನ್ಯೂಸ್
16-02-24 07:29 pm Mangalore Correspondent ಕರಾವಳಿ
ಮಂಗಳೂರು, ಫೆ.16: ತುಳು ಭಾಷೆಯನ್ನು ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯಾಗಿ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಈಗಾಗಲೇ ಕೇರಳ ಮತ್ತು ಕರ್ನಾಟಕ ಮುಖ್ಯಮಂತ್ರಿಗಳಿಗೆ ಹತ್ತು ಸಾವಿರಕ್ಕೂ ಹೆಚ್ಚು ತುಳುವರು ಪತ್ರ ಬರೆದಿದ್ದಾರೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರಿಗೆ ಬರುತ್ತಿದ್ದು, ಅವರನ್ನು ಮುಖತಃ ಭೇಟಿಯಾಗಿ ಈ ಆಗ್ರಹವನ್ನು ಮಾಡಲಾಗುವುದು. ತುಳು ಚಿತ್ರರಂಗದ ಪ್ರಮುಖರು, ತುಳು ಭಾಷೆಯ ಹೋರಾಟಗಾರರು ಜೊತೆಯಾಗಿ ಏರ್ಪೋರ್ಟ್ ನಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾಗುತ್ತೇವೆ ಎಂದು ಮಾಜಿ ಶಾಸಕ ಮೊಯ್ದೀನ್ ಬಾವ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳು ಭಾಷೆಯನ್ನು ಕರಾವಳಿಯ ಮೂರು ಜಿಲ್ಲೆಗಳಲ್ಲಿ ನೇರವಾಗಿ 40 ಲಕ್ಷಕ್ಕೂ ಹೆಚ್ಚು ಜನ ಮಾತನಾಡುತ್ತಾರೆ. ವ್ಯಾವಹಾರಿಕ ನೆಲೆಯಲ್ಲಿ ಮಂಗಳೂರು, ಕಾಸರಗೋಡು, ಮುಂಬೈ, ಬೆಂಗಳೂರು ಹೀಗೆ ಎಲ್ಲ ಕಡೆಯೂ ತುಳುವರಿದ್ದು, ಒಂದೂವರೆ ಕೋಟಿಗೂ ಹೆಚ್ಚು ಜನರು ಮಾತನಾಡುತ್ತಾರೆ. ಒಂದೆರಡು ಲಕ್ಷದಷ್ಟು ಜನರು ಮಾತನಾಡುವ ಭಾಷೆಗಳನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಿದ್ದಾರೆ. 99 ಭಾಷೆಗಳು ಸೇರ್ಪಡೆಯಾಗಲು ಸಾಲಿನಲ್ಲಿದ್ದು, ಅದರಲ್ಲಿ ತುಳು ಕೂಡ ಒಂದು.
ಆದರೆ, ತುಳು ಭಾಷೆಯನ್ನು ಆಯಾ ರಾಜ್ಯದಲ್ಲಿ ಅಧಿಕೃತ ಭಾಷೆಯಾಗಿ ಮಾಡಿದರೆ, ಸಂವಿಧಾನಕ್ಕೆ ಸೇರ್ಪಡೆಯಾಗಲು ಒಂದು ಹೆಜ್ಜೆ ಮುಂದಿಟ್ಟಂತಾಗುತ್ತದೆ. ಅಧಿಕೃತ ಭಾಷೆಯ ಮಾನ್ಯತೆ ನೀಡುವುದರಿಂದ ಯಾವುದೇ ಖರ್ಚು ಬೇಕಾಗುವುದಿಲ್ಲ. ಬೇರೆ ರಾಜ್ಯಗಳಲ್ಲಿ ಮಾಡಿರುವಂತೆ ಕರ್ನಾಟಕದಲ್ಲಿಯೂ ಮಾಡಬೇಕೆಂದು ನಾವು ಒತ್ತಾಯ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ನಾವು ಮನವಿ ನೀಡಲಿದ್ದೇವೆ ಎಂದು ತಿಳಿಸಿದರು.
ತುಳುನಾಡ ರಕ್ಷಣಾ ವೇದಿಕೆಯ ಯೋಗೀಶ್ ಶೆಟ್ಟಿ ಜೆಪ್ಪು ಮಾತನಾಡಿ, ತುಳು ಭಾಷೆಯನ್ನು ಇದಕ್ಕೂ ಮೊದಲೇ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕಿತ್ತು. ನಮ್ಮಲ್ಲಿ ಮೂರು ಜಿಲ್ಲೆಗಳ ಸಂಸದರು, ತುಳುವನ್ನೇ ಮಾತನಾಡುವ ಸಾಕಷ್ಟು ಮಂದಿ ಶಾಸಕರಿದ್ದಾರೆ. ಸೂಕ್ತ ಪ್ರಯತ್ನದ ಕೊರತೆ ಮತ್ತು ನಿರ್ಲಕ್ಷ್ಯದಿಂದಾಗಿ ಈ ಸ್ಥಿತಿಯಾಗಿದೆ. ಇನ್ನಾದರೂ ನಾವು ಒತ್ತಡ ಹಾಕದೇ ಇದ್ದರೆ, ತುಳು ಭಾಷೆಗೆ ಗೌರವ ಸಿಗುವುದಿಲ್ಲ. ನಾವೆಲ್ಲ ಸೇರಿ ಹಕ್ಕೊತ್ತಾಯ ಮಾಡಬೇಕಾಗಿದೆ ಎಂದು ಹೇಳಿದರು. ಈ ಭಾಗದ ಶಾಸಕರನ್ನು ಕರೆದಿದ್ದೀರಾ ಎಂಬ ಪ್ರಶ್ನೆಗೆ, ಅವರನ್ನು ಯಾಕೆ ಕರೆಯಬೇಕು. ಅವರು ವಿಧಾನಸಭೆಯಲ್ಲಿ ಈ ಬಗ್ಗೆ ಪ್ರಶ್ನೆ ಮಾಡಬೇಕು ಎಂದರು. ದಲಿತ ಹೋರಾಟಗಾರ ಲೋಲಾಕ್ಷ, ಎಸ್ ವಿಎಸ್ ಉಳ್ಳಾಲ ಇದ್ದರು.
"We are in a fight to make the Tulu language official. Regarding this, we had written letters to our Prime Minister, chief minister of Karnataka and Kerala. Chief minister Siddaramaiah had called everyone to Bengaluru, and we got information that on February 17, he is coming to Mangaluru for the Congress convention event.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm