ಬ್ರೇಕಿಂಗ್ ನ್ಯೂಸ್
17-02-24 03:55 pm Mangalore Correspondent ಕರಾವಳಿ
ಮಂಗಳೂರು, ಫೆ.17: ಜೆರೋಸಾ ಶಾಲೆಯ ಘಟನೆ ಬಗ್ಗೆ ವಿಶೇಷ ತನಿಖೆಗಾಗಿ ಶಿಕ್ಷಣ ಇಲಾಖೆಯ ಗುಲ್ಬರ್ಗ ವಿಭಾಗದ ಅಪರ ಆಯುಕ್ತ, ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಅವರನ್ನು ನೇಮಕ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಘಟನೆ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಶಾಸಕರು ನಡೆದುಕೊಂಡ ರೀತಿಯನ್ನು ಎಲ್ಲರೂ ನೋಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನ ತಲೆತಗ್ಗಿಸುವಂತೆ ಮಾಡಿದ್ದಾರೆ. ಮಕ್ಕಳನ್ನು, ಶಿಕ್ಷಕರನ್ನು ಬೀದಿಯಲ್ಲಿ ನಿಲ್ಲಿಸಿರುವುದು ಒಳ್ಳೆದಲ್ಲ. ಎಫ್ಐಆರ್ ಹಿಂತೆಗೆಯಲು ಆಗಲ್ಲ, ದೂರಿನ ಬಗ್ಗೆ ತನಿಖೆ ಆಗುತ್ತೆ. ತಪ್ಪು ಸಾಬೀತಾದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದರು.
ಶಿಕ್ಷಕಿಯ ವಿರುದ್ಧ ಶಿಕ್ಷಣ ಇಲಾಖೆಯವರು ತನಿಖೆ ಮಾಡುತ್ತಾರೆ. ಪೊಲೀಸರು ಮಾಡೋದಲ್ಲ, ಹಾಗಾಗಿ ಎಫ್ಐಆರ್ ದಾಖಲು ಮಾಡಿಲ್ಲ. ಯಾರು ತಪ್ಪು ಮಾಡಿದರೂ ತನಿಖೆಯಲ್ಲಿ ತಿಳಿದು ಬರುತ್ತದೆ ಎಂದು ಶಿಕ್ಷಕಿ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಈ ಘಟನೆಯಿಂದ ಜಿಲ್ಲೆಗೆ ಡ್ಯಾಮೇಜ್ ಆಗಿದೆ. ಮಕ್ಕಳನ್ನು ರಸ್ತೆಯಲ್ಲಿ ನಿಲ್ಲಿಸಿ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ. ಶಾಲೆಯೆದುರು ಗೂಂಡಾಗಿರಿ ಮೆರೆದಿದ್ದಾರೆ. ರಾಜಕೀಯ ಸ್ವಾರ್ಥಕ್ಕಾಗಿ ಧರ್ಮದ ಹೆಸರಲ್ಲಿ ಪ್ರಚೋದನೆ ನೀಡಿದ್ದಾರೆ. ಹೊರಗಿನ ಜನ ಜಿಲ್ಲೆಯಲ್ಲಿ ಏನಾಗುತ್ತಿದೆ ಎಂದು ಕೇಳುತ್ತಿದ್ದಾರೆ. ಭರತ್ ಶೆಟ್ಟಿ, ಶರಣ್ ಪಂಪ್ವೆಲ್ ಮೇಲೆ ಸುಳ್ಳು ಕೇಸ್ ದಾಖಲಾಗಿಲ್ಲ. ಎಲ್ಲಿ ಹೇಳಿಕೆ ನೀಡಿದರೂ ಅದು ತಪ್ಪೇ. ಲಂಡನ್ ನಲ್ಲಿ ಕುಳಿತು ಹೇಳಿದರೂ ತಪ್ಪೇ. ಕಾನ್ವೆಂಟ್ ಶಾಲೆಗಳಿಗೆ ಹೋಗಬೇಡಿ ಅನ್ನೋದು ತಪ್ಪಲ್ವಾ.. ಪ್ರಚೋದನಕಾರಿ ಹೇಳಿಕೆಯ ವಿರುದ್ಧ ಕೇಸ್ ಹಾಕಲಾಗಿದೆ. ಪೊಲೀಸ್ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎಂದು ಗುಂಡೂರಾವ್ ಹೇಳಿದರು.
Mangalore Gerosa school controversy, no return of FIR against Vedavyas Bharath shetty says Minister Dinesh Gundu Rao. Speaking to media persons the Minister said that IAS officer has been appointed to probe the case of school.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm