ಬ್ರೇಕಿಂಗ್ ನ್ಯೂಸ್
18-02-24 11:06 pm Mangalore Correspondent ಕರಾವಳಿ
ಉಳ್ಳಾಲ, ಫೆ.18: ತೊಕ್ಕೊಟ್ಟಿನಲ್ಲಿ ನಡೆಯಲಿರುವ ಡಿವೈಎಫ್ ಐ 12 ನೇ ರಾಜ್ಯ ಸಮ್ಮೇಳನದ ಪೂರ್ವಭಾವಿಯಾಗಿ ನಗರದೆಲ್ಲೆಡೆ ಆದರ್ಶ ಪುರುಷರ ಭಾವಚಿತ್ರಗಳುಲ್ಲ ಫ್ಲೆಕ್ಸ್ , ಕಮಾನುಗಳು ರಾರಾಜಿಸುತ್ತಿದ್ದು, ಹರೇಕಳದ ಡಿವೈಎಫ್ ಐ ಕಚೇರಿ ಬಳಿ ಟಿಪ್ಪು ಸುಲ್ತಾನ್ ನ ಬೃಹತ್ ಕಟೌಟ್ ನಿರ್ಮಿಸಲಾಗಿದ್ದು ಇದನ್ನ ತೆರವುಗೊಳಿಸುವಂತೆ ಕೊಣಾಜೆ ಪೊಲೀಸರು ನೋಟೀಸು ನೀಡಿದ್ದಾರೆ.
ಮಂಗಳೂರಿನ ಉಳ್ಳಾಲ ತಾಲೂಕಿನ ಕಲ್ಲಾಪು ಯುನಿಟಿ ಸಭಾಂಗಣದಲ್ಲಿ ಇದೇ ಫೆ.25, 26, 27 ರಂದು ನಡೆಯಲಿರುವ ಡಿವೈಎಫ್ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಅಲ್ಲಲ್ಲಿ ನಾಡಿನ ಆದರ್ಶ ಪುರುಷರ, ಸ್ವಾತಂತ್ರ್ಯ ಸೇನಾನಿಗಳ, ಸಮಾಜ ಸುಧಾರಕರ ಪ್ರತಿಮೆ, ಫ್ಲೆಕ್ಸ್ ಹಾಕಲಾಗಿದೆ.
ಹರೇಕಳದ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಸಂಘಟನೆ ಕಾರ್ಯಕರ್ತರು ಟಿಪ್ಪು ಸುಲ್ತಾನ್ ನ ಕಾರ್ಡ್ ಬೋರ್ಡ್ ಪ್ರತಿಮೆ ಅಳವಡಿಸಿದ್ದಾರೆ. ಟಿಪ್ಪುವಿನ ಕಟೌಟ್ ಅಳವಡಿಸಲು ಅನುಮತಿ ಪಡೆಯದಿರುವುದರಿಂದ ಕೊಣಾಜೆ ಪೊಲೀಸ್ ಠಾಣಾಧಿಕಾರಿ ಟಿಪ್ಪು ಕಟೌಟ್ ತೆರವುಗೊಳಿಸಲು ಹರೇಕಳ ಡಿವೈಎಫ್ ಐ ಮುಖಂಡರಿಗೆ ನೋಟಿಸ್ ನೀಡಿದ್ದಾರೆ.

ಶನಿವಾರದಂದು ಕೊಣಾಜೆ ಠಾಣಾಧಿಕಾರಿ ನೋಟೀಸು ನೀಡಿದ್ದು ಹರೇಕಳ ಪಂಚಾಯತ್ ಪಿಡಿಒ ರಜೆಯಲ್ಲಿದ್ದ ಕಾರಣ ಕಟೌಟ್ ತೆರವು ಆಗಿಲ್ಲ. ಹರೇಕಳ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಕಾರ್ಡ್ ಬೋರ್ಡ್ನಿಂದ 6 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ನಿರ್ಮಿಸಲಾಗಿದೆ. ಕಟೌಟ್ ತೆರವುಗೊಳಿಸಲು ಮುಂದಾದ ಕೊಣಾಜೆ ಪೊಲೀಸರ ವಿರುದ್ಧ ಡಿವೈಎಪ್ ಐ ಜಿಲ್ಲಾಧ್ಯಕ್ಷ ಇಮ್ತಿಯಾಝ್ ಆಕ್ರೋಶ ವ್ಯಕ್ತಪಡಿಸಿದ್ದು ರಾಜ್ಯದಲ್ಲಿ ಯಾವ ಸರಕಾರ ಇದೆಯೆಂದು ಕಿಡಿಕಾರಿದ್ದಾರೆ. ಟಿಪ್ಪು , ರಾಣಿ ಅಬ್ಬಕ್ಕ ಸೇರಿದಂತೆ ಯಾರೊಬ್ಬರ ಕಟೌಟ್ ತೆರವುಗೊಳಿಸದಂತೆ ಡಿವೈಎಫ್ ಐ ಕಾರ್ಯಕರ್ತರು ಕಾವಲಿರುತ್ತಾರೆಂದು ಇಮ್ತಿಯಾಝ್ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Police issue notice to Dfyi to remove Tippu statue at Ullal in Mangalore.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm