ಬ್ರೇಕಿಂಗ್ ನ್ಯೂಸ್
18-02-24 11:06 pm Mangalore Correspondent ಕರಾವಳಿ
ಉಳ್ಳಾಲ, ಫೆ.18: ತೊಕ್ಕೊಟ್ಟಿನಲ್ಲಿ ನಡೆಯಲಿರುವ ಡಿವೈಎಫ್ ಐ 12 ನೇ ರಾಜ್ಯ ಸಮ್ಮೇಳನದ ಪೂರ್ವಭಾವಿಯಾಗಿ ನಗರದೆಲ್ಲೆಡೆ ಆದರ್ಶ ಪುರುಷರ ಭಾವಚಿತ್ರಗಳುಲ್ಲ ಫ್ಲೆಕ್ಸ್ , ಕಮಾನುಗಳು ರಾರಾಜಿಸುತ್ತಿದ್ದು, ಹರೇಕಳದ ಡಿವೈಎಫ್ ಐ ಕಚೇರಿ ಬಳಿ ಟಿಪ್ಪು ಸುಲ್ತಾನ್ ನ ಬೃಹತ್ ಕಟೌಟ್ ನಿರ್ಮಿಸಲಾಗಿದ್ದು ಇದನ್ನ ತೆರವುಗೊಳಿಸುವಂತೆ ಕೊಣಾಜೆ ಪೊಲೀಸರು ನೋಟೀಸು ನೀಡಿದ್ದಾರೆ.
ಮಂಗಳೂರಿನ ಉಳ್ಳಾಲ ತಾಲೂಕಿನ ಕಲ್ಲಾಪು ಯುನಿಟಿ ಸಭಾಂಗಣದಲ್ಲಿ ಇದೇ ಫೆ.25, 26, 27 ರಂದು ನಡೆಯಲಿರುವ ಡಿವೈಎಫ್ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಅಲ್ಲಲ್ಲಿ ನಾಡಿನ ಆದರ್ಶ ಪುರುಷರ, ಸ್ವಾತಂತ್ರ್ಯ ಸೇನಾನಿಗಳ, ಸಮಾಜ ಸುಧಾರಕರ ಪ್ರತಿಮೆ, ಫ್ಲೆಕ್ಸ್ ಹಾಕಲಾಗಿದೆ.
ಹರೇಕಳದ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಸಂಘಟನೆ ಕಾರ್ಯಕರ್ತರು ಟಿಪ್ಪು ಸುಲ್ತಾನ್ ನ ಕಾರ್ಡ್ ಬೋರ್ಡ್ ಪ್ರತಿಮೆ ಅಳವಡಿಸಿದ್ದಾರೆ. ಟಿಪ್ಪುವಿನ ಕಟೌಟ್ ಅಳವಡಿಸಲು ಅನುಮತಿ ಪಡೆಯದಿರುವುದರಿಂದ ಕೊಣಾಜೆ ಪೊಲೀಸ್ ಠಾಣಾಧಿಕಾರಿ ಟಿಪ್ಪು ಕಟೌಟ್ ತೆರವುಗೊಳಿಸಲು ಹರೇಕಳ ಡಿವೈಎಫ್ ಐ ಮುಖಂಡರಿಗೆ ನೋಟಿಸ್ ನೀಡಿದ್ದಾರೆ.

ಶನಿವಾರದಂದು ಕೊಣಾಜೆ ಠಾಣಾಧಿಕಾರಿ ನೋಟೀಸು ನೀಡಿದ್ದು ಹರೇಕಳ ಪಂಚಾಯತ್ ಪಿಡಿಒ ರಜೆಯಲ್ಲಿದ್ದ ಕಾರಣ ಕಟೌಟ್ ತೆರವು ಆಗಿಲ್ಲ. ಹರೇಕಳ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಕಾರ್ಡ್ ಬೋರ್ಡ್ನಿಂದ 6 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ನಿರ್ಮಿಸಲಾಗಿದೆ. ಕಟೌಟ್ ತೆರವುಗೊಳಿಸಲು ಮುಂದಾದ ಕೊಣಾಜೆ ಪೊಲೀಸರ ವಿರುದ್ಧ ಡಿವೈಎಪ್ ಐ ಜಿಲ್ಲಾಧ್ಯಕ್ಷ ಇಮ್ತಿಯಾಝ್ ಆಕ್ರೋಶ ವ್ಯಕ್ತಪಡಿಸಿದ್ದು ರಾಜ್ಯದಲ್ಲಿ ಯಾವ ಸರಕಾರ ಇದೆಯೆಂದು ಕಿಡಿಕಾರಿದ್ದಾರೆ. ಟಿಪ್ಪು , ರಾಣಿ ಅಬ್ಬಕ್ಕ ಸೇರಿದಂತೆ ಯಾರೊಬ್ಬರ ಕಟೌಟ್ ತೆರವುಗೊಳಿಸದಂತೆ ಡಿವೈಎಫ್ ಐ ಕಾರ್ಯಕರ್ತರು ಕಾವಲಿರುತ್ತಾರೆಂದು ಇಮ್ತಿಯಾಝ್ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Police issue notice to Dfyi to remove Tippu statue at Ullal in Mangalore.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm