ಬ್ರೇಕಿಂಗ್ ನ್ಯೂಸ್
18-02-24 11:06 pm Mangalore Correspondent ಕರಾವಳಿ
ಉಳ್ಳಾಲ, ಫೆ.18: ತೊಕ್ಕೊಟ್ಟಿನಲ್ಲಿ ನಡೆಯಲಿರುವ ಡಿವೈಎಫ್ ಐ 12 ನೇ ರಾಜ್ಯ ಸಮ್ಮೇಳನದ ಪೂರ್ವಭಾವಿಯಾಗಿ ನಗರದೆಲ್ಲೆಡೆ ಆದರ್ಶ ಪುರುಷರ ಭಾವಚಿತ್ರಗಳುಲ್ಲ ಫ್ಲೆಕ್ಸ್ , ಕಮಾನುಗಳು ರಾರಾಜಿಸುತ್ತಿದ್ದು, ಹರೇಕಳದ ಡಿವೈಎಫ್ ಐ ಕಚೇರಿ ಬಳಿ ಟಿಪ್ಪು ಸುಲ್ತಾನ್ ನ ಬೃಹತ್ ಕಟೌಟ್ ನಿರ್ಮಿಸಲಾಗಿದ್ದು ಇದನ್ನ ತೆರವುಗೊಳಿಸುವಂತೆ ಕೊಣಾಜೆ ಪೊಲೀಸರು ನೋಟೀಸು ನೀಡಿದ್ದಾರೆ.
ಮಂಗಳೂರಿನ ಉಳ್ಳಾಲ ತಾಲೂಕಿನ ಕಲ್ಲಾಪು ಯುನಿಟಿ ಸಭಾಂಗಣದಲ್ಲಿ ಇದೇ ಫೆ.25, 26, 27 ರಂದು ನಡೆಯಲಿರುವ ಡಿವೈಎಫ್ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಅಲ್ಲಲ್ಲಿ ನಾಡಿನ ಆದರ್ಶ ಪುರುಷರ, ಸ್ವಾತಂತ್ರ್ಯ ಸೇನಾನಿಗಳ, ಸಮಾಜ ಸುಧಾರಕರ ಪ್ರತಿಮೆ, ಫ್ಲೆಕ್ಸ್ ಹಾಕಲಾಗಿದೆ.
ಹರೇಕಳದ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಸಂಘಟನೆ ಕಾರ್ಯಕರ್ತರು ಟಿಪ್ಪು ಸುಲ್ತಾನ್ ನ ಕಾರ್ಡ್ ಬೋರ್ಡ್ ಪ್ರತಿಮೆ ಅಳವಡಿಸಿದ್ದಾರೆ. ಟಿಪ್ಪುವಿನ ಕಟೌಟ್ ಅಳವಡಿಸಲು ಅನುಮತಿ ಪಡೆಯದಿರುವುದರಿಂದ ಕೊಣಾಜೆ ಪೊಲೀಸ್ ಠಾಣಾಧಿಕಾರಿ ಟಿಪ್ಪು ಕಟೌಟ್ ತೆರವುಗೊಳಿಸಲು ಹರೇಕಳ ಡಿವೈಎಫ್ ಐ ಮುಖಂಡರಿಗೆ ನೋಟಿಸ್ ನೀಡಿದ್ದಾರೆ.

ಶನಿವಾರದಂದು ಕೊಣಾಜೆ ಠಾಣಾಧಿಕಾರಿ ನೋಟೀಸು ನೀಡಿದ್ದು ಹರೇಕಳ ಪಂಚಾಯತ್ ಪಿಡಿಒ ರಜೆಯಲ್ಲಿದ್ದ ಕಾರಣ ಕಟೌಟ್ ತೆರವು ಆಗಿಲ್ಲ. ಹರೇಕಳ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಕಾರ್ಡ್ ಬೋರ್ಡ್ನಿಂದ 6 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ನಿರ್ಮಿಸಲಾಗಿದೆ. ಕಟೌಟ್ ತೆರವುಗೊಳಿಸಲು ಮುಂದಾದ ಕೊಣಾಜೆ ಪೊಲೀಸರ ವಿರುದ್ಧ ಡಿವೈಎಪ್ ಐ ಜಿಲ್ಲಾಧ್ಯಕ್ಷ ಇಮ್ತಿಯಾಝ್ ಆಕ್ರೋಶ ವ್ಯಕ್ತಪಡಿಸಿದ್ದು ರಾಜ್ಯದಲ್ಲಿ ಯಾವ ಸರಕಾರ ಇದೆಯೆಂದು ಕಿಡಿಕಾರಿದ್ದಾರೆ. ಟಿಪ್ಪು , ರಾಣಿ ಅಬ್ಬಕ್ಕ ಸೇರಿದಂತೆ ಯಾರೊಬ್ಬರ ಕಟೌಟ್ ತೆರವುಗೊಳಿಸದಂತೆ ಡಿವೈಎಫ್ ಐ ಕಾರ್ಯಕರ್ತರು ಕಾವಲಿರುತ್ತಾರೆಂದು ಇಮ್ತಿಯಾಝ್ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Police issue notice to Dfyi to remove Tippu statue at Ullal in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm