ಬ್ರೇಕಿಂಗ್ ನ್ಯೂಸ್
19-02-24 09:38 pm Mangalore Correspondent ಕರಾವಳಿ
ಮಂಗಳೂರು, ಫೆ.19: ಶಾಲೆಗಳ ಮೂಲಕ ಮನೆಗಳನ್ನು ಸಂಪರ್ಕಿಸಿ ಶಿಕ್ಷಕರು ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. ರಾಮನ ಬಗ್ಗೆ ಅವಹೇಳನ ಮಾಡಿರುವ ಶಿಕ್ಷಕಿ ಮತಾಂತರದ ಉದ್ದೇಶ ಹೊಂದಿದ್ದಾರೆ. ಆಕೆಯ ವಿರುದ್ಧ ಪೊಲೀಸರು ಕೂಡಲೇ ಎಫ್ಐಆರ್ ದಾಖಲು ಮಾಡಬೇಕು ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ಆರೋಪಿಸಿದ್ದಾರೆ.
ಜಿರೋಸಾ ಶಾಲೆಯ ಘಟನೆ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಿಸಿದ ಕ್ರಮ ಖಂಡಿಸಿ ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ವತಿಯಿಂದ ನಗರ ಕ್ಲಾಕ್ ಟವರ್ ನಲ್ಲಿ ಪ್ರತಿಭಟನೆ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಹರಿಕೃಷ್ಣ ಬಂಟ್ವಾಳ್, ಕಾಂಗ್ರೆಸ್ ಸರಕಾರ ದಂಗಲ್ ಎಬ್ಬಿಸಲು ನೋಡುತ್ತಿದೆ. ಇದು ಜಾತಿ, ಧರ್ಮದ ದಂಗಲ್ ಅಲ್ಲ. ಕಾಂಗ್ರೆಸ್ ದಂಗಲ್ ಆಗಿದ್ದು, ಪೊಲೀಸರು ಸರಕಾರದ ಪರ ನಿಂತರೆ ಮುಂದೆ ಕಂಗಾಲು ಆಗಬೇಕಾಗುತ್ತದೆ. ಯಾಕಂದ್ರೆ, ಶಿಕ್ಷಕಿ ವಿರುದ್ಧ ಕ್ರಮ ಜರುಗಿಸದಿದ್ದರೆ ನಾವು ಈ ಪ್ರತಿಭಟನೆಯನ್ನು ಇಡೀ ರಾಜ್ಯಕ್ಕೆ ಹಬ್ಬಿಸುತ್ತೇವೆ ಎಂದರು.



ಹಿಂದುಗಳು ಯಾವತ್ತೂ ಇತರ ಧರ್ಮೀಯರನ್ನು ಅವಹೇಳನ ಮಾಡಲ್ಲ. ಇವರು ಆ ರೀತಿ ಮಾಡಲು ಮುಂದಾದರೆ ನಾವು ಸುಮ್ಮನೆ ಇರೋದಿಲ್ಲ. ಶಾಸಕರ ಮೇಲೆ ಎಫ್ಐಆರ್ ದಾಖಲಿಸಿರುವುದು ಮಂಗಳೂರಿನ ಮತದಾರರ ಮೇಲೆ ಕ್ರಮ ಜರುಗಿಸಿದಂತೆ. ಜನರಿಂದ ಆಯ್ಕೆಯಾದ ವ್ಯಕ್ತಿ ಪೋಷಕರ ಕರೆಗೆ ಓಗೊಟ್ಟು ಅವರ ಪರವಾಗಿ ನಿಂತಿದ್ದಕ್ಕೆ ಪೊಲೀಸರು ಕೇಸು ದಾಖಲು ಮಾಡಿದ್ದಾರೆ. ಇದನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹ ಮಾಡಿದರು. ಪ್ರತಿಭಟನೆಯಲ್ಲಿ ರವಿಶಂಕರ ಮಿಜಾರ್, ವಿಜಯಕುಮಾರ್ ಶೆಟ್ಟಿ, ರಮೇಶ್ ಕಂಡೆಟ್ಟು, ಪ್ರೇಮಾನಂದ ಶೆಟ್ಟಿ, ರಾಜಗೋಪಾಲ್ ರೈ ಮತ್ತಿತರರಿದ್ದರು.
ಪ್ರತಿಭಟನೆ ಕೊನೆಯಲ್ಲಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಹೊಯ್ದಾಟ ನಡೆಯಿತು. ಕಾರ್ಯಕರ್ತರು ಧಿಕ್ಕಾರ ಮತ್ತು ಜೈಶ್ರೀರಾಮ್ ಘೋಷಣೆ ಕೂಗಿದರೆ, ರಸ್ತೆಗೆ ಬರದಂತೆ ಪೊಲೀಸರು ತಡೆದು ನಿಲ್ಲಿಸಿದರು. ಇದರಿಂದ ಒಂದಷ್ಟು ಹೊತ್ತು ವಾಗ್ವಾದ, ಮಾತಿನ ಚಕಮಕಿ ನಡೆಯಿತು.
Mangalore Gerosa School Controversy, BJP Holds protest demanding action against sister Prabha.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm