ಬ್ರೇಕಿಂಗ್ ನ್ಯೂಸ್
20-02-24 03:19 pm Mangalore Correspondent ಕರಾವಳಿ
ಉಳ್ಳಾಲ, ಫೆ.20: ಕೋಟೆಕಾರು ಬಳಿಯ ಮಾಡೂರಿನ ಪಿಜಿಯೊಂದರಲ್ಲಿದ್ದು ದೇರಳಕಟ್ಟೆಯ ಖಾಸಗಿ ಯುನಿವರ್ಸಿಟಿಯಲ್ಲಿ ಪಿಎಚ್ ಡಿ ಅಧ್ಯಯನ ಮಾಡುತ್ತಿದ್ದ ಪುತ್ತೂರು ಮೂಲದ ಬ್ರಾಹ್ಮಣ ವಿದ್ಯಾರ್ಥಿನಿ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಮುಸ್ಲಿಂ ಯುವಕನೊಂದಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ.
ಪುತ್ತೂರು ಮೂಲದ ಚೈತ್ರಾ ಹೆಬ್ಬಾರ್(27) ನಾಪತ್ತೆಯಾದ ವಿದ್ಯಾರ್ಥಿನಿ. ಚೈತ್ರಾ ದೇರಳಕಟ್ಟೆಯ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಎಂಎಸ್ಸಿ ಮುಗಿಸಿ ಫುಡ್ ಸೆಕ್ಯುರಿಟಿ ವಿಷಯದಲ್ಲಿ ಪಿಎಚ್ ಡಿ ಅಧ್ಯಯನ ನಡೆಸುತ್ತಿದ್ದಳು. ಕೋಟೆಕಾರು ಮಾಡೂರಿನ ಅಹನಾ ಎಂಬ ಪಿಜಿಯಲ್ಲಿ ಸ್ನೇಹಿತೆಯರೊಂದಿಗೆ ಚೈತ್ರಾ ನೆಲೆಸಿದ್ದಳು.
ಚೈತ್ರಾಳ ತಂದೆ ಮೃತರಾಗಿದ್ದು ಮಂಗಳೂರಿನ ಕದ್ರಿಯಲ್ಲಿ ನೆಲೆಸಿರುವ ದೊಡ್ಡಪ್ಪನ ಆಶ್ರಯದಲ್ಲಿದ್ದು ಎಂಎಸ್ಸಿ ಪೂರೈಸಿದ್ದಳು. ಕಳೆದ ಫೆ.17 ರಂದು ಬೆಳಗ್ಗೆ 9 ಗಂಟೆಗೆ ಮಾಡೂರಿನ ಪಿಜಿಯಿಂದ ತನ್ನ ಸ್ಕೂಟರಲ್ಲಿ ತೆರಳಿದ್ದ ಚೈತ್ರಾ ಕದ್ರಿಯ ಮನೆಗೂ ತೆರಳದೆ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾಳೆ.
ಚೈತ್ರಾ ನೆಲೆಸಿದ್ದ ಪಿಜಿಗೆ ಪುತ್ತೂರಿನ ಮುಸ್ಲಿಂ ಯುವಕನೋರ್ವ ಪದೇ ಪದೇ ಬರುತ್ತಿದ್ದು ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಬಗ್ಗೆ ಸ್ಥಳೀಯರು ಆರೋಪಿಸಿ ಹಿಂದು ಸಂಘಟನೆಗಳ ಗಮನಕ್ಕೆ ತಂದಿದ್ದರು.
ಈ ಬಗ್ಗೆ ವಿಷಯ ತಿಳಿದ ಬಜರಂಗದಳ ಮುಖಂಡ ಅರ್ಜುನ್ ಮಾಡೂರು ಅವರು ವಾರದ ಹಿಂದೆ ಚೈತ್ರಾಳ ದೊಡ್ಡಪ್ಪನಿಗೆ ಮಾಹಿತಿ ನೀಡಿದ್ದರು. ಫೆ.17 ರಂದು ಚೈತ್ರಾ ನಾಪತ್ತೆಯಾದ ವಿಚಾರ ತಿಳಿದ ದೊಡ್ಡಪ್ಪ ಮರುದಿನ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ. ಅದಾಗಿ ಮೂರು ದಿನ ಕಳೆದರೂ ಚೈತ್ರಾ ಮರಳಿ ಬಂದಿಲ್ಲ, ಎಲ್ಲಿ ಹೋಗಿದ್ದಾಳೆಂದು ಗೊತ್ತಾಗಿಲ್ಲ. ಬಜರಂಗದಳ ಪ್ರಮುಖರು ಪುತ್ತೂರಿನ ಮುಸ್ಲಿಂ ಯುವಕನೊಂದಿಗೆ ತೆರಳಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
Chaitra Hebbar, a 27-year-old Puttur native and PHD student, goes missing from Mangalore. She was pursuing a thesis in food security and living at a local PG in Derlakatte. It has been stated that she fled with her Muslim friend. Ullal police are currently investigating the case.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm