ಬ್ರೇಕಿಂಗ್ ನ್ಯೂಸ್
21-02-24 07:48 pm Mangalore Correspondent ಕರಾವಳಿ
ಮಂಗಳೂರು, ಫೆ.21: ಕೇರಳದ ತಿರುವನಂತರಪುರ- ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ಮಂಗಳೂರಿಗೆ ವಿಸ್ತರಣೆ ಮಾಡಲಾಗಿದೆ.
ಬುಧವಾರ ರೈಲ್ವೇ ಸಚಿವಾಲಯ ಈ ಬಗ್ಗೆ ಆದೇಶ ಹೊರಡಿಸಿದೆ. ಇದರ ಪ್ರಕಾರ ವಂದೇ ಭಾರತ್ ರೈಲು ನಂ. 20632/20631 ಇನ್ನು ಮುಂದೆ ತಿರುವನಂತಪುರ- ಮಂಗಳೂರು ನಡುವೆ ಸಂಚರಿಸಲಿದೆ. ಹೊಸ ರೈಲ್ವೇ ವೇಳಾಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಗ್ಗೆ 06.15ಕ್ಕೆ ಹೊರಟು ಅಪರಾಹ್ನ 3.05 ಕ್ಕೆ ತಿರುವನಂತಪುರ ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05 ಕ್ಕೆ ಬಿಟ್ಟು ಮಂಗಳೂರನ್ನು ರಾತ್ರಿ 12.40ಕ್ಕೆ ತಲುಪಲಿದೆ.
ಬುಧವಾರ ಹೊರತುಪಡಿಸಿ ವಾರದ ಆರು ದಿನಗಳಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದೆ. ಸಂಸದರ ಮನವಿ ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರು ವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಕೃತಜ್ಞತೆ ಸಲ್ಲಿಸಿದ್ದಾರೆ.
ಮಂಗಳೂರು ರೈಲು ನಿಲ್ದಾಣ ಪಾಲ್ಘಾಟ್ ರೈಲ್ವೇ ವಿಭಾಗಕ್ಕೆ ಸೇರಿದ್ದರೂ, ವಂದೇ ಭಾರತ್ ರೈಲನ್ನು ಕೇರಳಕ್ಕೆ ಮಾತ್ರ ಸೀಮಿತಗೊಳಿಸುವ ಲಾಬಿಯಿಂದಾಗಿ ಕಾಸರಗೋಡಿನಿಂದ ತಿರುವನಂತಪುರಕ್ಕೆ ಆರಂಭಿಸಲಾಗಿತ್ತು. ಈ ರೀತಿಯ ನಿರ್ಧಾರದಿಂದ ರೈಲ್ವೇಗೆ ಲಾಭ ಇರಲಿಲ್ಲ. ಕೇರಳದ ಹೆಚ್ಚಿನ ಪ್ರಯಾಣಿಕರು ಮಂಗಳೂರಿಗೆ ಬರುತ್ತಿದ್ದರೇ ವಿನಾ ಕಾಸರಗೋಡು ವರೆಗೆ ಬರುವುದು ಕಡಿಮೆಯಿತ್ತು. ಕೇರಳದ ಸಂಸದರ ಲಾಬಿಯಿಂದಾಗಿ ಅಧಿಕಾರಿಗಳು ಮಂಗಳೂರು ನಿಲ್ದಾಣ ಬದಿಗಿಟ್ಟು ಕೇರಳಕ್ಕೆ ಆರು ತಿಂಗಳ ಮೊದಲೇ ವಂದೇ ಭಾರತ್ ರೈಲು ಓಡಾಟ ಆರಂಭಿಸಿದ್ದರು. ಇದೀಗ ಅದೇ ರೈಲನ್ನು ಮಂಗಳೂರಿಗೆ ವಿಸ್ತರಣೆ ಮಾಡಿದ್ದು ಪ್ರಯಾಣಿಕರಿಗೆ ಅನುಕೂಲ ಮಾಡಿದ್ದಾರೆ.
ಇದೇ ವೇಳೆ, ಮಂಗಳೂರು - ಗೋವಾ ವಂದೇ ಭಾರತ್ ರೈಲನ್ನು ಕೋಜಿಕ್ಕೋಡ್ ವಿಸ್ತರಿಸಲು ಕೇರಳದ ಸಂಸದರು ಲಾಬಿ ಮಾಡಿದ್ದಾರೆ. ಈಗ ನಷ್ಟದಲ್ಲಿ ಓಡುತ್ತಿರುವ ಈ ರೈಲು ಮುಂಬೈಗೆ ವಿಸ್ತರಣೆ ಆಗಬೇಕೆಂದು ಮಂಗಳೂರು, ಉಡುಪಿ ಜನರ ಬಯಕೆ. ಈ ಬಗ್ಗೆ ಮಂಗಳೂರು ಸಂಸದರೂ ರೈಲ್ವೇ ಸಚಿವರಿಗೆ ಮನವಿ ಮಾಡಿದ್ದಾರೆ. ಯಾವ ಲಾಬಿ ವರ್ಕೌಟ್ ಆಗುತ್ತೆಂದು ನೋಡಬೇಕಷ್ಟೆ.
Vande Bharat Express Thiruvananthapuram kasaragod finally extended till Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm