ಬ್ರೇಕಿಂಗ್ ನ್ಯೂಸ್
21-02-24 07:48 pm Mangalore Correspondent ಕರಾವಳಿ
ಮಂಗಳೂರು, ಫೆ.21: ಕೇರಳದ ತಿರುವನಂತರಪುರ- ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ಮಂಗಳೂರಿಗೆ ವಿಸ್ತರಣೆ ಮಾಡಲಾಗಿದೆ.
ಬುಧವಾರ ರೈಲ್ವೇ ಸಚಿವಾಲಯ ಈ ಬಗ್ಗೆ ಆದೇಶ ಹೊರಡಿಸಿದೆ. ಇದರ ಪ್ರಕಾರ ವಂದೇ ಭಾರತ್ ರೈಲು ನಂ. 20632/20631 ಇನ್ನು ಮುಂದೆ ತಿರುವನಂತಪುರ- ಮಂಗಳೂರು ನಡುವೆ ಸಂಚರಿಸಲಿದೆ. ಹೊಸ ರೈಲ್ವೇ ವೇಳಾಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಗ್ಗೆ 06.15ಕ್ಕೆ ಹೊರಟು ಅಪರಾಹ್ನ 3.05 ಕ್ಕೆ ತಿರುವನಂತಪುರ ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05 ಕ್ಕೆ ಬಿಟ್ಟು ಮಂಗಳೂರನ್ನು ರಾತ್ರಿ 12.40ಕ್ಕೆ ತಲುಪಲಿದೆ.
ಬುಧವಾರ ಹೊರತುಪಡಿಸಿ ವಾರದ ಆರು ದಿನಗಳಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದೆ. ಸಂಸದರ ಮನವಿ ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರು ವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಕೃತಜ್ಞತೆ ಸಲ್ಲಿಸಿದ್ದಾರೆ.
ಮಂಗಳೂರು ರೈಲು ನಿಲ್ದಾಣ ಪಾಲ್ಘಾಟ್ ರೈಲ್ವೇ ವಿಭಾಗಕ್ಕೆ ಸೇರಿದ್ದರೂ, ವಂದೇ ಭಾರತ್ ರೈಲನ್ನು ಕೇರಳಕ್ಕೆ ಮಾತ್ರ ಸೀಮಿತಗೊಳಿಸುವ ಲಾಬಿಯಿಂದಾಗಿ ಕಾಸರಗೋಡಿನಿಂದ ತಿರುವನಂತಪುರಕ್ಕೆ ಆರಂಭಿಸಲಾಗಿತ್ತು. ಈ ರೀತಿಯ ನಿರ್ಧಾರದಿಂದ ರೈಲ್ವೇಗೆ ಲಾಭ ಇರಲಿಲ್ಲ. ಕೇರಳದ ಹೆಚ್ಚಿನ ಪ್ರಯಾಣಿಕರು ಮಂಗಳೂರಿಗೆ ಬರುತ್ತಿದ್ದರೇ ವಿನಾ ಕಾಸರಗೋಡು ವರೆಗೆ ಬರುವುದು ಕಡಿಮೆಯಿತ್ತು. ಕೇರಳದ ಸಂಸದರ ಲಾಬಿಯಿಂದಾಗಿ ಅಧಿಕಾರಿಗಳು ಮಂಗಳೂರು ನಿಲ್ದಾಣ ಬದಿಗಿಟ್ಟು ಕೇರಳಕ್ಕೆ ಆರು ತಿಂಗಳ ಮೊದಲೇ ವಂದೇ ಭಾರತ್ ರೈಲು ಓಡಾಟ ಆರಂಭಿಸಿದ್ದರು. ಇದೀಗ ಅದೇ ರೈಲನ್ನು ಮಂಗಳೂರಿಗೆ ವಿಸ್ತರಣೆ ಮಾಡಿದ್ದು ಪ್ರಯಾಣಿಕರಿಗೆ ಅನುಕೂಲ ಮಾಡಿದ್ದಾರೆ.
ಇದೇ ವೇಳೆ, ಮಂಗಳೂರು - ಗೋವಾ ವಂದೇ ಭಾರತ್ ರೈಲನ್ನು ಕೋಜಿಕ್ಕೋಡ್ ವಿಸ್ತರಿಸಲು ಕೇರಳದ ಸಂಸದರು ಲಾಬಿ ಮಾಡಿದ್ದಾರೆ. ಈಗ ನಷ್ಟದಲ್ಲಿ ಓಡುತ್ತಿರುವ ಈ ರೈಲು ಮುಂಬೈಗೆ ವಿಸ್ತರಣೆ ಆಗಬೇಕೆಂದು ಮಂಗಳೂರು, ಉಡುಪಿ ಜನರ ಬಯಕೆ. ಈ ಬಗ್ಗೆ ಮಂಗಳೂರು ಸಂಸದರೂ ರೈಲ್ವೇ ಸಚಿವರಿಗೆ ಮನವಿ ಮಾಡಿದ್ದಾರೆ. ಯಾವ ಲಾಬಿ ವರ್ಕೌಟ್ ಆಗುತ್ತೆಂದು ನೋಡಬೇಕಷ್ಟೆ.
Vande Bharat Express Thiruvananthapuram kasaragod finally extended till Mangalore.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm