ಬ್ರೇಕಿಂಗ್ ನ್ಯೂಸ್
21-02-24 08:24 pm Mangalore Correspondent ಕರಾವಳಿ
ಮಂಗಳೂರು, ಫೆ.21: ವಿಧಾನಸಭೆ ಅಧಿವೇಶನದಲ್ಲಿ ಪಬ್ ದಾಳಿ ಮಾಡಿದ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಮಂಗಳೂರಿನ ಬಜರಂಗದಳ ಮುಖಂಡರು ತಿರುಗಿ ಬಿದ್ದಿದ್ದಾರೆ.
ವಿಧಾನಸಭೆಯಲ್ಲಿ ಗೃಹ ಸಚಿವ ಪರಮೇಶ್ವರ್ ವಿರುದ್ಧ ಧ್ವನಿ ಎತ್ತುವ ಸಂದರ್ಭದಲ್ಲಿ ಹಳೆಯ ಘಟನೆಯನ್ನು ಮೆಲುಕು ಹಾಕಿದ್ದಾರೆ. ಮಂಗಳೂರಿನಲ್ಲಿ ಪಬ್ ದಾಳಿಯಾದ ಸಂದರ್ಭ ರಾಜ್ಯದ ಗೃಹ ಸಚಿವನಾಗಿದ್ದೆ. ಅಧಿವೇಶನದಲ್ಲಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಗದ್ದಲ ಎಬ್ಬಿಸಿದ್ದರು. ಆಗ ತುಂಬ ಒತ್ತಡ, ಫೋನ್ ಕರೆಗಳು ಬಂದರೂ ಮಣಿಯದೇ ಪಬ್ ದಾಳಿ ಮಾಡಿದ್ದ ಬಜರಂಗದಳದವರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ಅದೇ ರೀತಿ ನೀವು ಕೂಡ ಯಾವುದೇ ಒತ್ತಡಕ್ಕೆ ಮಣಿಯದೆ ಕೆಲಸ ಮಾಡಬೇಕು ಎಂದು ಅಧಿವೇಶನದಲ್ಲಿ ಹೇಳಿಕೆ ನೀಡಿದ್ದರು. ಅಶೋಕ್ ಅವರು ಬಹಿರಂಗವಾಗಿ ಈ ರೀತಿ ಹೇಳಿಕೆ ನೀಡಿದ್ದಕ್ಕೆ ಆಕ್ರೋಶ ಭುಗಿಲೆದ್ದಿದೆ.


ಬಜರಂಗದಳ ಮಂಗಳೂರು ವಿಭಾಗ ಸಹ ಸಂಯೋಜಕ ಪುನೀತ್ ಅತ್ತಾವರ ಈ ಬಗ್ಗೆ ಫೇಸ್ಬುಕ್ ನಲ್ಲಿ ಬರೆದಿದ್ದು ನೀವು ಮಂಗಳೂರಿಗೆ ಬಂದಾಗ ನೋಡಿಕೊಳ್ಳುತ್ತೇವೆ ಎಂದು ಅಶೋಕ್ ಗೆ ಬೆದರಿಕೆ ಹಾಕಿದ್ದಾರೆ. ಪುನೀತ್ ಹಾಕಿರುವ ಪೋಸ್ಟ್ ಈ ರೀತಿ ಇದೆ. "ನೀವು ಆರ್ ಅಶೋಕ್ ಅಲ್ಲ.. ನಿಮ್ಮ ಹೆಸರನ್ನು ಎ ಅಶೋಕ್ ಅಂತ ಬದಲಾಯಿಸಿ ಬಿಡಿ ಅಡ್ಜಸ್ಟ್ ಮೆಂಟ್ ಅಶೋಕ್ ಅವರೇ..!! ನಿಮ್ಮ ನಾಲಗೆಯನ್ನು ನಾಲಗೆ ರೀತಿ ಬಳಸಿ, ಎಕ್ಕಡದ ರೀತಿ ಬಳಸಿಕೊಳ್ಳಬೇಡಿ... ಅಡ್ಜಸ್ಟ್ ಮೆಂಟ್ ರಾಜಕಾರಣ ಎಂಬ ಕೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ... ಸಿದ್ಧಾಂತಕ್ಕಾಗಿ ಹೋರಾಡುವ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿ ಅವರನ್ನು ಸುಮ್ಮನಿರಿಸುವಷ್ಟು ದೊಡ್ಡವರು ನೀವಾಗಿಲ್ಲ. ಬಜರಂಗದಳ ಕಾರ್ಯಕರ್ತರು ಹೋರಾಡುವುದು ನಿಮ್ಮ ಹಾಗೆ ವೈಯಕ್ತಿಕ ಲಾಭದ ಆಸೆಗಾಗಿ ಅಲ್ಲ.. ನಿಮ್ಮ ರಾಜಕೀಯ ತೆವಲಿಗಾಗಿ ಬಜರಂಗದಳ ಕಾರ್ಯಕರ್ತರ ಬಗ್ಗೆ ಆಡಿದ ಮಾತನ್ನು ಹಿಂದೆಗೆದುಕೊಳ್ಳಿ..
ಪ್ರತಿಪಕ್ಷ ನಾಯಕನಾಗಿರುವ ನೀವು ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ ಎಂಬ ಮಾತು ನೆನಪಿರಲಿ...!! ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ.. ಒಂದೋ ಬಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ, ಇಲ್ಲದಿದ್ದರೆ ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಎಂದು ಬರೆದಿದ್ದಾರೆ. ಈ ರೀತಿಯ ಪೋಸ್ಟ್ ಗೆ ಪರ- ವಿರೋಧ ವ್ಯಕ್ತವಾಗಿದ್ದು ಚರ್ಚೆ ನಡೆದಿದೆ.
Mangalore Bajrang dal leader Puneeth Attavar slams BJP R Ashok over pub attack says we will look after you when you come to Mangalore. Ashok while speaking in the Assembly said 'Pub Attackers' Bajrang dal, this statement has made members of Bajrang dal go angry.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm