ಬ್ರೇಕಿಂಗ್ ನ್ಯೂಸ್
25-11-20 03:21 pm Mangalore Correspondent ಕರಾವಳಿ
ಮಂಗಳೂರು, ನ. 25: ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರನ್ನು ಇಡಲು ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿರುವ ನಡುವಲ್ಲೇ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಒಂದು ಹೆಜ್ಜೆ ಮುಂದಿಟ್ಟು ಗಮನ ಸೆಳೆದಿದ್ದಾರೆ. ಬಜ್ಪೆ ಆಸುಪಾಸಿನಲ್ಲಿ ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ನಾಮಕರಣದ ಜಾಹೀರಾತು ಬೋರ್ಡ್ ಹಾಕಿ ಕುತೂಹಲ ಮೂಡಿಸಿದ್ದಾರೆ.
ಆದರೆ, ಹೀಗೆ ನಾಮಕರಣ ಮಾಡಿರುವುದೂ ಪ್ರತಿಭಟನೆಯಂತೆ. ನಿಲ್ದಾಣಕ್ಕೆ ಹೋಗುವ ಕೆಂಜಾರು ಸಮೀಪ ‘ಸುಸ್ವಾಗತ, ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮಂಗಳೂರು’ ಎಂಬ ಬೃಹತ್ ಜಾಹೀರಾತು ಬೋರ್ಡ್ ಗಳನ್ನು ಮಿಥುನ್ ರೈ ಭಾವಚಿತ್ರ ಮತ್ತು ಹೆಸರಿನಲ್ಲಿ ಹಾಕಲಾಗಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ, ಶ್ರೀನಿವಾಸ ಮಲ್ಯ ಸೇರಿದಂತೆ ಹಲವಾರು ಗಣ್ಯರ ಹೆಸರುಗಳನ್ನು ಇಡಬೇಕೆಂಬ ಒತ್ತಾಯ, ಪ್ರತಿಭಟನೆ ಹಲವು ವರ್ಷಗಳಿಂದ ನಡೆಯುತ್ತಿವೆ. ಪ್ರಸ್ತುತ ವಿಮಾನ ನಿಲ್ದಾಣವನ್ನು 50 ವರ್ಷಗಳಿಗೆ ಅದಾನಿ ಕಂಪನಿ ನಿರ್ವಹಣೆ ಗುತ್ತಿಗೆ ನೀಡಿದ ಬಳಿಕ ಪ್ರವೇಶ ದ್ವಾರ ಸೇರಿದಂತೆ ಎಲ್ಲ ಕಡೆ ವಿಮಾನ ನಿಲ್ದಾಣದ ಹೆಸರಿನ ಜೊತೆ ಅದಾನಿ ಏರ್ಪೋರ್ಟ್ಸ್ ಎಂಬ ಹೆಸರನ್ನು ಸೇರಿಸಲಾಗಿದೆ. ಈ ಬಗ್ಗೆ ಸಾಮಾಜಿಕ ವಲಯದಲ್ಲಿ ಸಾಕಷ್ಟು ವಿರೋಧ, ಆಕ್ಷೇಪಗಳು ವ್ಯಕ್ತವಾಗಿವೆ.


ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡಬೇಕೆಂದು ಒತ್ತಾಯಿಸಿ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಸರಣಿ ಪ್ರತಿಭಟನೆಗಳು ನಡೆದಿವೆ. ಈ ನಡುವೆಯೇ, ಕೋಟಿ ಚೆನ್ನಯ ಹೆಸರಲ್ಲಿ ಸ್ವಾಗತಿಸುವ ಜಾಹೀರಾತು ಬೋರ್ಡ್ ಹಾಕಿದ್ದು ಸಾಕಷ್ಟು ಕುತೂಹಲ ಕೆರಳಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಿಥುನ್ ರೈ, ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡುವಂತೆ ಒಂದೆಡೆ ಹೋರಾಟ ನಡೆಯುತ್ತಿದ್ದು, ಇದೇ ವೇಳೆ ಸಂಸದರಿಗೆ ಮತ್ತು ಸಚಿವರಿಗೆ ಎಚ್ಚರಿಕೆಯನ್ನು ನೀಡುವ ಸಲುವಾಗಿ ಜಾಹೀರಾತು ಬೋರ್ಡ್ ಗಳನ್ನು ಅಳವಡಿಸಲಾಗಿದೆ. ಆದಷ್ಟು ಶೀಘ್ರವಾಗಿ ಕೋಟಿ ಚೆನ್ನಯ ನಾಮಕರಣ ಮಾಡಬೇಕೆಂಬುದು ನಮ್ಮ ಬೇಡಿಕೆ. ನಮ್ಮ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.
District Youth Congress president Mithun Rai has come up with a unique way of protest in the party’s demand to rename Mangaluru International Airport to Koti Chennayya airport.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm