ಬ್ರೇಕಿಂಗ್ ನ್ಯೂಸ್
23-02-24 08:01 pm Mangalore Correspondent ಕರಾವಳಿ
ಮಂಗಳೂರು, ಫೆ.23: ಬಂಟ್ವಾಳ ತಾಲೂಕಿನ ಬೊರಿಮಾರು ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೇರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡಿದ್ದು, ಆಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಿದ ಅತಿ ಕಿರಿಯ ವ್ಯಕ್ತಿ ಎನ್ನುವ ಶ್ರೇಯಕ್ಕೆ ಪಾತ್ರರಾಗಿದ್ದಾರೆ.
ಮಂಗಳೂರಿನ ಎಸ್ ಡಿಎಂ ಕಾನೂನು ಕಾಲೇಜಿನಲ್ಲಿ ಬಿಬಿಎ ಮತ್ತು ಎಲ್ಎಲ್ ಬಿ ಪೂರೈಸಿದ್ದ ಅನಿಲ್ ಜಾನ್ ಸಿಕ್ವೇರಾ ಕಾಲೇಜು ದಿನಗಳಲ್ಲಿಯೇ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಬಂಟ್ವಾಳದ ಬೊರಿಮಾರಿನ ಸೈಂಟ್ ಜೋಸೆಫ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಮಾಣಿ ಕರ್ನಾಟಕ ಹೈಸ್ಕೂಲ್ ನಲ್ಲಿ ಪ್ರೌಢ ಶಿಕ್ಷಣ, ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು.
ಕಾನೂನು ಪದವಿಯ ಬಳಿಕ ಮಂಗಳೂರಿನಲ್ಲಿ ಬಾರ್ ಅಸೋಸಿಯೇಶನ್ ಸದಸ್ಯರಾಗಿ ಪ್ರಾಕ್ಟೀಸ್ ಆರಂಭಿಸಿದ್ದರು. ಮಂಗಳೂರಿನ ವಕೀಲರಾದ ದೀಪಕ್ ಡಿಸೋಜ ಮತ್ತು ನವೀನ್ ಪಾಯಸ್ ಜೊತೆಗೆ ವೃತ್ತಿ ನಡೆಸುತ್ತಿದ್ದರು. ಕಾಲೇಜು ದಿನಗಳಲ್ಲಿಯೇ ನಾಯಕತ್ವ ಬೆಳೆಸಿಕೊಂಡಿದ್ದ ಅನಿಲ್ ಸಿಕ್ವೇರಾ 2022ರಲ್ಲಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ ಸಂಘಟನೆಯ ಅಧ್ಯಕ್ಷರಾಗಿದ್ದರು. ಅನಿಲ್ ಸಿಕ್ವೇರಾ ಅವರು ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಎರಡೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು ಪ್ರಿಲಿಮಿನರಿ, ಮೈನ್ಸ್ ಮತ್ತು ಇಂಟರ್ವ್ಯೂ ಪಾಸ್ ಮಾಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ.
Mangalore Anil John Sequeira becomes youngest civil judge in Karnataka at age of 25. Anil John Sequeira, hailing from Borimar in Bantwal taluk, has secured success in the Karnataka Civil Judge Examination 2023, clearing the Prelims, Mains, and the interview at the young age of 25. This makes him the youngest Civil Judge (Judicial Magistrate) in the state of Karnataka.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm