ಬ್ರೇಕಿಂಗ್ ನ್ಯೂಸ್
24-02-24 06:46 pm Mangalore Correspondent ಕರಾವಳಿ
ಮಂಗಳೂರು, ಫೆ.24: ಚಾಲಕನ ನಿರ್ಲಕ್ಷ್ಯ ಮತ್ತು ದುಡುಕುತನದಿಂದಾಗಿ ಸಿಮೆಂಟ್ ಮಿಕ್ಸರ್ ಲಾರಿ ಸ್ಕೂಟರಿಗೆ ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಉಪ್ಪಿನಕುದ್ರು ನಿವಾಸಿ ಪೂರ್ಣಿಮಾ(29) ಮೃತರು. ಪೂರ್ಣಿಮಾ ಅವರು ಸುರತ್ಕಲ್ ಕುಳಾಯಿಯಲ್ಲಿ ನೆಲೆಸಿದ್ದ ತಂಗಿ ಮಾನಸ ಉಡುಪ ಅವರ ಮನೆಗೆ ಬಂದಿದ್ದರು. ಶುಕ್ರವಾರ ಸಂಜೆ ಮಾನಸ ಅವರು ಉರ್ವಾ ದೇವಸ್ಥಾನಕ್ಕೆಂದು ಸ್ಕೂಟರಿನಲ್ಲಿ ತನ್ನ ಅಕ್ಕ ಪೂರ್ಣಿಮಾ ಅವರನ್ನು ಕುಳ್ಳಿರಿಸಿ ಹೊರಟಿದ್ದರು. ಸ್ಕೂಟರ್ ಕುಳಾಯಿ ಕಡೆಯಿಂದ ಪಣಂಬೂರು ತಲುಪುವಷ್ಟರಲ್ಲಿ ಗೈಲ್ ಗ್ಯಾಸ್ ಪಂಪ್ ಬಳಿಯಲ್ಲಿ ಅದೇ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಿಮೆಂಟ್ ಮಿಕ್ಸರ್ ಲಾರಿಯ ಚಾಲಕ ನಿರ್ಲಕ್ಷ್ಯದಿಂದ ಸೈಡಿಗೆ ಬಂದಿದ್ದಾನೆ. ಈ ವೇಳೆ, ಎಡ ಭಾಗದಲ್ಲಿ ಚಲಿಸುತ್ತಿದ್ದ ಸ್ಕೂಟರಿನ ಹ್ಯಾಂಡಲಿಗೆ ಲಾರಿ ತಾಗಿದ್ದು, ಹಿಂಬದಿ ಸವಾರೆಯಾಗಿದ್ದ ಪೂರ್ಣಿಮಾ ಬಲ ಬದಿಗೆ ರಸ್ತೆಗೆ ಬಿದ್ದಿದ್ದಾರೆ.
ಈ ವೇಳೆ, ಲಾರಿಯ ಹಿಂಭಾಗದ ಚಕ್ರವು ಪೂರ್ಣಿಮಾ ಅವರ ಮೇಲಿನಿಂದಲೇ ಚಲಿಸಿದೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ಮಾನಸ ಅವರು ಎಡ ಭಾಗಕ್ಕೆ ಬಿದ್ದಿದ್ದರಿಂದ ತರಚಿದ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಮಹಿಳೆಯ ಹೊಟ್ಟೆಯ ಭಾಗದಿಂದಲೇ ಲಾರಿಯ ಚಕ್ರ ಹರಿದಿದ್ದು ಸ್ಥಳೀಯರು ಕೂಡಲೇ ಆಂಬುಲೆನ್ಸ್ ನಲ್ಲಿ ಎಜೆ ಆಸ್ಪತ್ರೆಗೆ ಒಯ್ದಿದ್ದರು. ಅಷ್ಟರಲ್ಲಿ ಆಕೆ ಮೃತಪಟ್ಟಿದ್ದರು. ಪೊಲೀಸರು ಲಾರಿ ಚಾಲಕ ದೀಪಕ್ ಸುನಾರ್ ಎಂಬಾತನನ್ನು ಬಂಧಿಸಿದ್ದಾರೆ. ಪಣಂಬೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore accident, Cement truck rams scooter near Panambur, 29 year old girl dies on spot. The deceased has been Identifed as Poornima a native of Udupi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm