ಬ್ರೇಕಿಂಗ್ ನ್ಯೂಸ್
24-02-24 06:46 pm Mangalore Correspondent ಕರಾವಳಿ
ಮಂಗಳೂರು, ಫೆ.24: ಚಾಲಕನ ನಿರ್ಲಕ್ಷ್ಯ ಮತ್ತು ದುಡುಕುತನದಿಂದಾಗಿ ಸಿಮೆಂಟ್ ಮಿಕ್ಸರ್ ಲಾರಿ ಸ್ಕೂಟರಿಗೆ ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಉಪ್ಪಿನಕುದ್ರು ನಿವಾಸಿ ಪೂರ್ಣಿಮಾ(29) ಮೃತರು. ಪೂರ್ಣಿಮಾ ಅವರು ಸುರತ್ಕಲ್ ಕುಳಾಯಿಯಲ್ಲಿ ನೆಲೆಸಿದ್ದ ತಂಗಿ ಮಾನಸ ಉಡುಪ ಅವರ ಮನೆಗೆ ಬಂದಿದ್ದರು. ಶುಕ್ರವಾರ ಸಂಜೆ ಮಾನಸ ಅವರು ಉರ್ವಾ ದೇವಸ್ಥಾನಕ್ಕೆಂದು ಸ್ಕೂಟರಿನಲ್ಲಿ ತನ್ನ ಅಕ್ಕ ಪೂರ್ಣಿಮಾ ಅವರನ್ನು ಕುಳ್ಳಿರಿಸಿ ಹೊರಟಿದ್ದರು. ಸ್ಕೂಟರ್ ಕುಳಾಯಿ ಕಡೆಯಿಂದ ಪಣಂಬೂರು ತಲುಪುವಷ್ಟರಲ್ಲಿ ಗೈಲ್ ಗ್ಯಾಸ್ ಪಂಪ್ ಬಳಿಯಲ್ಲಿ ಅದೇ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಿಮೆಂಟ್ ಮಿಕ್ಸರ್ ಲಾರಿಯ ಚಾಲಕ ನಿರ್ಲಕ್ಷ್ಯದಿಂದ ಸೈಡಿಗೆ ಬಂದಿದ್ದಾನೆ. ಈ ವೇಳೆ, ಎಡ ಭಾಗದಲ್ಲಿ ಚಲಿಸುತ್ತಿದ್ದ ಸ್ಕೂಟರಿನ ಹ್ಯಾಂಡಲಿಗೆ ಲಾರಿ ತಾಗಿದ್ದು, ಹಿಂಬದಿ ಸವಾರೆಯಾಗಿದ್ದ ಪೂರ್ಣಿಮಾ ಬಲ ಬದಿಗೆ ರಸ್ತೆಗೆ ಬಿದ್ದಿದ್ದಾರೆ.
ಈ ವೇಳೆ, ಲಾರಿಯ ಹಿಂಭಾಗದ ಚಕ್ರವು ಪೂರ್ಣಿಮಾ ಅವರ ಮೇಲಿನಿಂದಲೇ ಚಲಿಸಿದೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ಮಾನಸ ಅವರು ಎಡ ಭಾಗಕ್ಕೆ ಬಿದ್ದಿದ್ದರಿಂದ ತರಚಿದ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಮಹಿಳೆಯ ಹೊಟ್ಟೆಯ ಭಾಗದಿಂದಲೇ ಲಾರಿಯ ಚಕ್ರ ಹರಿದಿದ್ದು ಸ್ಥಳೀಯರು ಕೂಡಲೇ ಆಂಬುಲೆನ್ಸ್ ನಲ್ಲಿ ಎಜೆ ಆಸ್ಪತ್ರೆಗೆ ಒಯ್ದಿದ್ದರು. ಅಷ್ಟರಲ್ಲಿ ಆಕೆ ಮೃತಪಟ್ಟಿದ್ದರು. ಪೊಲೀಸರು ಲಾರಿ ಚಾಲಕ ದೀಪಕ್ ಸುನಾರ್ ಎಂಬಾತನನ್ನು ಬಂಧಿಸಿದ್ದಾರೆ. ಪಣಂಬೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore accident, Cement truck rams scooter near Panambur, 29 year old girl dies on spot. The deceased has been Identifed as Poornima a native of Udupi.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm