ಬ್ರೇಕಿಂಗ್ ನ್ಯೂಸ್
24-02-24 06:46 pm Mangalore Correspondent ಕರಾವಳಿ
ಮಂಗಳೂರು, ಫೆ.24: ಚಾಲಕನ ನಿರ್ಲಕ್ಷ್ಯ ಮತ್ತು ದುಡುಕುತನದಿಂದಾಗಿ ಸಿಮೆಂಟ್ ಮಿಕ್ಸರ್ ಲಾರಿ ಸ್ಕೂಟರಿಗೆ ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಉಪ್ಪಿನಕುದ್ರು ನಿವಾಸಿ ಪೂರ್ಣಿಮಾ(29) ಮೃತರು. ಪೂರ್ಣಿಮಾ ಅವರು ಸುರತ್ಕಲ್ ಕುಳಾಯಿಯಲ್ಲಿ ನೆಲೆಸಿದ್ದ ತಂಗಿ ಮಾನಸ ಉಡುಪ ಅವರ ಮನೆಗೆ ಬಂದಿದ್ದರು. ಶುಕ್ರವಾರ ಸಂಜೆ ಮಾನಸ ಅವರು ಉರ್ವಾ ದೇವಸ್ಥಾನಕ್ಕೆಂದು ಸ್ಕೂಟರಿನಲ್ಲಿ ತನ್ನ ಅಕ್ಕ ಪೂರ್ಣಿಮಾ ಅವರನ್ನು ಕುಳ್ಳಿರಿಸಿ ಹೊರಟಿದ್ದರು. ಸ್ಕೂಟರ್ ಕುಳಾಯಿ ಕಡೆಯಿಂದ ಪಣಂಬೂರು ತಲುಪುವಷ್ಟರಲ್ಲಿ ಗೈಲ್ ಗ್ಯಾಸ್ ಪಂಪ್ ಬಳಿಯಲ್ಲಿ ಅದೇ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಿಮೆಂಟ್ ಮಿಕ್ಸರ್ ಲಾರಿಯ ಚಾಲಕ ನಿರ್ಲಕ್ಷ್ಯದಿಂದ ಸೈಡಿಗೆ ಬಂದಿದ್ದಾನೆ. ಈ ವೇಳೆ, ಎಡ ಭಾಗದಲ್ಲಿ ಚಲಿಸುತ್ತಿದ್ದ ಸ್ಕೂಟರಿನ ಹ್ಯಾಂಡಲಿಗೆ ಲಾರಿ ತಾಗಿದ್ದು, ಹಿಂಬದಿ ಸವಾರೆಯಾಗಿದ್ದ ಪೂರ್ಣಿಮಾ ಬಲ ಬದಿಗೆ ರಸ್ತೆಗೆ ಬಿದ್ದಿದ್ದಾರೆ.
ಈ ವೇಳೆ, ಲಾರಿಯ ಹಿಂಭಾಗದ ಚಕ್ರವು ಪೂರ್ಣಿಮಾ ಅವರ ಮೇಲಿನಿಂದಲೇ ಚಲಿಸಿದೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ಮಾನಸ ಅವರು ಎಡ ಭಾಗಕ್ಕೆ ಬಿದ್ದಿದ್ದರಿಂದ ತರಚಿದ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಮಹಿಳೆಯ ಹೊಟ್ಟೆಯ ಭಾಗದಿಂದಲೇ ಲಾರಿಯ ಚಕ್ರ ಹರಿದಿದ್ದು ಸ್ಥಳೀಯರು ಕೂಡಲೇ ಆಂಬುಲೆನ್ಸ್ ನಲ್ಲಿ ಎಜೆ ಆಸ್ಪತ್ರೆಗೆ ಒಯ್ದಿದ್ದರು. ಅಷ್ಟರಲ್ಲಿ ಆಕೆ ಮೃತಪಟ್ಟಿದ್ದರು. ಪೊಲೀಸರು ಲಾರಿ ಚಾಲಕ ದೀಪಕ್ ಸುನಾರ್ ಎಂಬಾತನನ್ನು ಬಂಧಿಸಿದ್ದಾರೆ. ಪಣಂಬೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore accident, Cement truck rams scooter near Panambur, 29 year old girl dies on spot. The deceased has been Identifed as Poornima a native of Udupi.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am