ಬ್ರೇಕಿಂಗ್ ನ್ಯೂಸ್
26-02-24 07:51 pm Mangalore Correspondent ಕರಾವಳಿ
ಮಂಗಳೂರು, ಫೆ.26: ಕರಾವಳಿಯಲ್ಲಿ ಇತಿಹಾಸ ಬರೆದವರಲ್ಲಿ ಪ್ರಮುಖ ಪಾತ್ರವನ್ನು ಬಿಎ ಸಾಲೆತ್ತೂರು, ಗೋವಿಂದ ಪೈ ಮೊದಲಾದವರು ಹೊಂದಿದ್ದಾರೆ. ಆದರೆ ನಮ್ಮ ಕರಾವಳಿಯ ಇತಿಹಾಸವನ್ನು ಕಟ್ಟಿದವರು ಯಾರು ಎಂಬ ಪ್ರಶ್ನೆ ಬಂದಾಗ ಅದರಲ್ಲಿ ಮೊದಲ ಸ್ಥಾನವನ್ನು ಪಡೆಯುವುದು ಬಾಸೆಲ್ ಮಿಷನರಿಗಳು. ಕರಾವಳಿಗೆ ಒಂದು ಚಲನೆಯನ್ನು ಕೊಟ್ಟವರು ಮಿಷನರಿಗಳು ಎಂದು ಹಿರಿಯ ಚಿಂತಕ ಪುರುಷೋತ್ತಮ ಬಿಳಿಮಲೆ ಹೇಳಿದರು.
ಡಿವೈಎಫ್ಐನ 12ನೇ ರಾಜ್ಯ ಸಮ್ಮೇಳನದ ಎರಡನೆಯ ದಿನ ನಡೆದ “ ಕರಾವಳಿ ಕಟ್ಟಿದ ಬಗೆ” ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಪಾರಂಪರಿಕತೆಯನ್ನು ಸಾರ್ವತ್ರಿಕಗೊಳಿಸಿದ ಕ್ರಾಂತಿ ಕರಾವಳಿಯಲ್ಲಿ ಮಿಷನರಿಗಳು ಮಾಡಿದ್ದಾರೆ. ಈ ಮಿಷನರಿಗಳಿಗೆ ನಾವೆಲ್ಲರೂ ಅಭಾರಿಯಾಗಿರಬೇಕು. ನಮ್ಮಲ್ಲಿರುವ ಮಠಗಳು ಸಾವಿರಾರು ವರ್ಷಗಳ ಹಿಂದಿನದ್ದು ಎಂದು ಹೇಳಲಾಗುತ್ತದೆ. ಆದರೆ ನಮ್ಮ ಕರಾವಳಿಯಲ್ಲಿ ಮೊದಲ ಬಾರಿಗೆ ಮುದ್ರಣಾಲಯವನ್ನು ಈ ಮಠದವರು ಹಾಕಿದ್ದಾರಾ? ಅದಕ್ಕಾಗಿ ಮಿಷನರಿಗಳು ಬರಬೇಕಾಯಿತು. ಈ ನಿಟ್ಟಿನಲ್ಲಿ ನಾವು ಮಿಷನರಿಗಳ ಕೊಡುಗೆಯನ್ನು ಸ್ಮರಿಸಬೇಕು ಎಂದು ಶ್ಲಾಘಿಸಿದರು.
'ನಾನು ಕೋಮುವಾದ ಮಾಡುತ್ತೇನೆ. ಅದರಲ್ಲಿ ತಪ್ಪೇನಿಲ್ಲ, ಅದುವೇ ಸರಿ ಎನ್ನುವವರ ನಡುವೆ ಕೋಮುವಾದ ಮಾಡುವುದು ತಪ್ಪು ಎನ್ನುವ ಒಬ್ಬರು ಇದ್ದರೆ ಸಾಕು ಎಂದ ಬಿಳಿಮಲೆ, ಈ ಹಿಂದೆ ಬ್ರಾಹ್ಮಣರೇನು ಮತಾಂತರ ಆಗುತ್ತಿರಲಿಲ್ಲ. ಮತಾಂತರ ಆದವರು ಎಂಜಲು ತಿನ್ನುತ್ತಿದ್ದವರು, ಭಿಕ್ಷೆ ಬೇಡುತ್ತಿದ್ದವರು. ಆದರೆ ಈಗ ಅವರು ಕೂಡಾ ತಮ್ಮ ಸ್ವಇಚ್ಛೆಯಿಂದ ಮತಾಂತರವಾಗಲು ಸಾಧ್ಯವಾಗದಂತಾಗಿದೆ ಎಂದರು. ಈ ಹಿಂದೆ ಸಮಾಜಕ್ಕೆ ಕೊಡುಗೆ ನೀಡಿದವರು ಎಂದರೆ ಮಂಗಳೂರಿಗರು ಆಗಿದ್ದರು. ಆದರೆ ಈಗ ಯಾವುದೇ ಜಿಲ್ಲೆ, ಪ್ರದೇಶದಲ್ಲಿ ಗಲಾಟೆ, ಗಲಭೆ ನಡೆದರೂ ಆ ಜಿಲ್ಲೆಯನ್ನು "ಮಂಗಳೂರಿನಂತೆ" ಎಂದು ಹೋಲಿಕೆ ಮಾಡಲಾಗುತ್ತದೆ. ಆ ಮಟ್ಟಿಗೆ ನಮ್ಮ ನಗರ ತಲುಪಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಒಂದು ಮೇಲ್ಸೆತುವೆ ನಿರ್ಮಾಣ ಮಾಡಲು ಎರಡು ಬಾರಿ ಗೆದ್ದು ಬಂದ ಎಂಎಲ್ಎಗಳ ನಡುವೆ ನಾವು ಶ್ರೀನಿವಾಸ ಮಲ್ಯರ ಕೊಡುಗೆಯನ್ನು ನೆನೆಯಬೇಕು ಎಂದರು. ಜಾತಕವನ್ನು ಬರೆಯುವಾಗ ಎಂದಿಗೂ ಕೂಡ ಬ್ರಾಹ್ಮಣರೇತರಿಗೆ ವಿದ್ಯೆ ಇಲ್ಲ ಎಂದು ಬರೆಯಲಾಗುತ್ತದೆ. ನನಗೂ ಹಾಗೆಯೇ ಬರೆಯಲಾಗಿತ್ತು. ಆದರೆ ಆ ಜ್ಯೋತಿಷಿ ಬರೆದ ಜಾತಕಕ್ಕೆ ಸಡ್ಡು ಹೊಡೆದವರು ನಮ್ಮ ತಾಯಿ. ನನಗೆ ತನ್ನ ಕಿವಿಯೋಳೆ ಅಡವಿಟ್ಟು ವಿದ್ಯೆ ನೀಡಿದರು. ಇಂದು ನಾನು ಪ್ರೊಫೆಸರ್ ಆಗಿ ಬೆಳೆದಿದ್ದೇನೆ ಎಂದು ತಿಳಿಸಿದರು.
ಕನ್ನಡ ಪರ ಹೋರಾಟಗಾರ ರಮೇಶ್ ಬೆಲ್ಲದಕೊಂಡ ಪ್ರತಿಕ್ರಿಯೆ ನೀಡಿದರು. ವೇದಿಕೆಯಲ್ಲಿ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ್ ಪೂಜಾರ್ ಉಪಸ್ಥಿತರಿದ್ದರು. ಜಿಲ್ಲಾ ಮುಖಂಡ ಮನೋಜ್ ವಾಮಂಜೂರು ಕಾರ್ಯಕ್ರಮ ನಿರ್ವಹಿಸಿದರು.
Ba Salettur, Govinda Pai and others have played an important role in the history of coastal areas. But when it comes to the question of who built the history of our coast, it is the Basel missionaries who take the first place. Senior thinker Purushothama Bilimale said that it was the missionaries who gave a movement to the coast.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm