ಬ್ರೇಕಿಂಗ್ ನ್ಯೂಸ್
26-02-24 09:57 pm Mangalore Correspondent ಕರಾವಳಿ
ಮಂಗಳೂರು, ಫೆ.26: ಎಂಎಸ್ಇಝೆಡ್ (ಮಂಗಳೂರು ವಿಶೇಷ ಆರ್ಥಿಕ ವಲಯ) ಸ್ವಾಮ್ಯದ ಗೇಲ್ ಇಂಡಿಯಾ ಕಂಪೆನಿ ಉದ್ಯೋಗ ನೀಡಲು ನಿರಾಕರಿಸುತ್ತಿದೆ ಎಂದು ಆರೋಪಿಸಿ ಜೆಬಿಎಫ್ ಕಂಪನಿಗಾಗಿ ಭೂಮಿ ಕಳೆದುಕೊಂಡ ಸಂತ್ರಸ್ತ ಉದ್ಯೋಗಿಗಳು ಎಂಎಸ್ಇಝೆಡ್ ಗೇಟ್ ಬಳಿ ಸೋಮವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಎಂಎಸ್ಇಝೆಡ್ ಸಾಮ್ಯದ ಜೆಬಿಎಫ್ ಕಂಪೆನಿಯಲ್ಲಿ ಕಳೆದ 8 ವರ್ಷದಿಂದ ಖಾಯಂ ಉದ್ಯೋಗಿಗಳಾಗಿದ್ದೆವು. 2020ರಲ್ಲಿ ಆರ್ಥಿಕ ತೊಂದರೆಯಿಂದ ಈ ಕಂಪೆನಿ ಮುಚ್ಚಲ್ಪಟ್ಟು, ತದನಂತರ 2023ರಲ್ಲಿ ಗೇಲ್ ಇಂಡಿಯಾದವರು ಆ ಕಂಪನಿಯನ್ನು ಖರೀದಿಸಿದ್ದಾರೆ. ಜೆಬಿಎಫ್ ನಲ್ಲಿ ಖಾಯಂ ಉದ್ಯೋಗಿಗಳಾಗಿದ್ದ ನಮಗೆ ಗೇಲ್ ಇಂಡಿಯಾ ಕಂಪೆನಿ ಉದ್ಯೋಗ ನೀಡಲು ಹಿಂದೇಟು ಹಾಕುತ್ತಿದೆ. ಹಲವು ಬಾರಿ ಕಂಪೆನಿಯವರನ್ನು ಸಂಪರ್ಕಿಸಿದಾಗಲು ಸರಿಯಾದ ಸ್ಪಂದನೆ ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರರು ಆರೋಪಿಸಿದ್ದಾರೆ.
ಪ್ರತಿಭಟನೆ ನಡೆಸುತ್ತಿರುವ 75 ಮಂದಿ ಸಂತ್ರಸ್ತ ಉದ್ಯೋಗಿಗಳು ಎಂಎಸ್ಇಝೆಡ್ ಮುಖ್ಯ ದ್ವಾರದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಆರಂಭಿಸಿದ್ದಾರೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ಶಾಹುಲ್ ಹಮೀದ್ ಬಜ್ಪೆ, ಕಾಂಗ್ರೆಸ್ ಕಾರ್ಮಿಕ ಸಂಘಟನೆಯ ಲಾರೆನ್ಸ್, ಜೋಕಟ್ಟೆ ಗ್ರಾಮ ಪಂಚಾಯತ್ ಸದಸ್ಯ ಲೋಕೇಶ್ ಪೂಜಾರಿ, ಬಾಳ ಪಂಚಾಯತ್ ಅಧ್ಯಕ್ಷ ಶಂಕರ್ ಜೋಗಿ, ಸದಸ್ಯೆ ಸೌಮ್ಯಾ, ವಿಜಯ ಕಾನ, ರೈತ ಮೋರ್ಚಾ ಅಧ್ಯಕ್ಷ ರಾಜೇಶ್, ಮಾಜಿ ಸದಸ್ಯ ಆದಂ, ಸಂತೋಷ್ ಕೊರೆಯ, ಶಕ್ತಿ ಕೇಂದ್ರದ ಮುಖಂಡರು ಸೇರಿದಂತೆ ಹಲವರು ಭಾಗವಹಿಸಿದ್ದಾರೆ.
Cheating by GAIL company in Mangalore, Protest held blocking the road near MSE gate.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm