ಬ್ರೇಕಿಂಗ್ ನ್ಯೂಸ್
25-11-20 09:06 pm Mangaluru Correspondent ಕರಾವಳಿ
ಮಂಗಳೂರು, ನ. 25: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒಂದೆಡೆ ಕೋಟಿ ಚೆನ್ನಯ ಹೆಸರಿಡುವ ವಿಚಾರದಲ್ಲಿ ಹೋರಾಟ ನಡೆಯುತ್ತಿರುವಾಗಲೇ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯು ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕಳ ಹೆಸರನ್ನೇ ಇಡಬೇಕೆಂದು ಒತ್ತಾಯಿಸಿದೆ.
ಸಮಿತಿಯ ಸ್ವಾಗತಾಧ್ಯಕ್ಷ ಕೆ. ಜಯರಾಮ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರಿಡುವಂತೆ ನಮ್ಮ ಸಮಿತಿ ವತಿಯಿಂದ 23 ವರ್ಷಗಳಲ್ಲಿ ಅನೇಕ ಬಾರಿ ಒತ್ತಾಯ ಮಾಡಿದ್ದೇವೆ. ಪ್ರತೀ ವರ್ಷ ಅಬ್ಬಕ್ಕ ಉತ್ಸವದಲ್ಲಿಯೂ ಈ ಬಗ್ಗೆ ಠರಾವು ಮಂಡಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಣಿ ಅಬ್ಬಕ್ಕಳ ಹೆಸರಿಡುವಂತೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದ್ದೇವೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈವರೆಗೆ ರಾಣಿ ಅಬ್ಬಕ್ಕಳ ಹೆಸರು ಮಾತ್ರ ಚಾಲ್ತಿಯಲ್ಲಿತ್ತು. ಆದರೆ, ಸದ್ಯ ಬೇರೆ ಬೇರೆ ಹೆಸರುಗಳು ಕೇಳಿ ಬರತೊಡಗಿದೆ ಎಂದು ಹೇಳಿದರು.
ವೀರರಾಣಿ ಅಬ್ಬಕ್ಕಳು ಭಾರತದ ಪ್ರಪ್ರಥಮ ಹೋರಾಟಗಾರ್ತಿ, ಧೀರೋದಾತ್ತ ವನಿತೆ. ಆದರೆ ರಾಜ್ಯದಲ್ಲಿ ಅಬ್ಬಕ್ಕಳಿಗೆ ಸಿಗಬೇಕಾದ ಗೌರವ ಇನ್ನೂ ಸಿಕ್ಕಿಲ್ಲ. ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರಿಟ್ಟರೆ, ಹೊರ ರಾಜ್ಯ, ವಿದೇಶದಿಂದ ಆಗಮಿಸುವ ಸಾರ್ವಜನಿಕರಿಗೂ ವೀರ ವನಿತೆಯ ಪರಿಚಯವಾಗುತ್ತದೆ. ಅಲ್ಲದೆ, ಅದು ಆಕೆಗೆ ಗೌರವ ನೀಡಿದಂತಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ದಿನಕರ ಉಳ್ಳಾಲ್, ಗೌರವ ಉಪಾಧ್ಯಕ್ಷ ಸದಾನಂದ ಬಂಗೇರ, ಉಪಾಧ್ಯಕ್ಷ ಆಲಿಯಬ್ಬ ಇದ್ದರು.
Veera Rani Abbakka Utsava Samithi office bearers have said that they have been repeatedly demanding to name the Mangaluru International Airport after Veera Rani Abbakka since the committee was founded in the year 1997.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am