ಬ್ರೇಕಿಂಗ್ ನ್ಯೂಸ್
25-11-20 09:06 pm Mangaluru Correspondent ಕರಾವಳಿ
ಮಂಗಳೂರು, ನ. 25: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒಂದೆಡೆ ಕೋಟಿ ಚೆನ್ನಯ ಹೆಸರಿಡುವ ವಿಚಾರದಲ್ಲಿ ಹೋರಾಟ ನಡೆಯುತ್ತಿರುವಾಗಲೇ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯು ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕಳ ಹೆಸರನ್ನೇ ಇಡಬೇಕೆಂದು ಒತ್ತಾಯಿಸಿದೆ.
ಸಮಿತಿಯ ಸ್ವಾಗತಾಧ್ಯಕ್ಷ ಕೆ. ಜಯರಾಮ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರಿಡುವಂತೆ ನಮ್ಮ ಸಮಿತಿ ವತಿಯಿಂದ 23 ವರ್ಷಗಳಲ್ಲಿ ಅನೇಕ ಬಾರಿ ಒತ್ತಾಯ ಮಾಡಿದ್ದೇವೆ. ಪ್ರತೀ ವರ್ಷ ಅಬ್ಬಕ್ಕ ಉತ್ಸವದಲ್ಲಿಯೂ ಈ ಬಗ್ಗೆ ಠರಾವು ಮಂಡಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಣಿ ಅಬ್ಬಕ್ಕಳ ಹೆಸರಿಡುವಂತೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದ್ದೇವೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈವರೆಗೆ ರಾಣಿ ಅಬ್ಬಕ್ಕಳ ಹೆಸರು ಮಾತ್ರ ಚಾಲ್ತಿಯಲ್ಲಿತ್ತು. ಆದರೆ, ಸದ್ಯ ಬೇರೆ ಬೇರೆ ಹೆಸರುಗಳು ಕೇಳಿ ಬರತೊಡಗಿದೆ ಎಂದು ಹೇಳಿದರು.
ವೀರರಾಣಿ ಅಬ್ಬಕ್ಕಳು ಭಾರತದ ಪ್ರಪ್ರಥಮ ಹೋರಾಟಗಾರ್ತಿ, ಧೀರೋದಾತ್ತ ವನಿತೆ. ಆದರೆ ರಾಜ್ಯದಲ್ಲಿ ಅಬ್ಬಕ್ಕಳಿಗೆ ಸಿಗಬೇಕಾದ ಗೌರವ ಇನ್ನೂ ಸಿಕ್ಕಿಲ್ಲ. ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರಿಟ್ಟರೆ, ಹೊರ ರಾಜ್ಯ, ವಿದೇಶದಿಂದ ಆಗಮಿಸುವ ಸಾರ್ವಜನಿಕರಿಗೂ ವೀರ ವನಿತೆಯ ಪರಿಚಯವಾಗುತ್ತದೆ. ಅಲ್ಲದೆ, ಅದು ಆಕೆಗೆ ಗೌರವ ನೀಡಿದಂತಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ದಿನಕರ ಉಳ್ಳಾಲ್, ಗೌರವ ಉಪಾಧ್ಯಕ್ಷ ಸದಾನಂದ ಬಂಗೇರ, ಉಪಾಧ್ಯಕ್ಷ ಆಲಿಯಬ್ಬ ಇದ್ದರು.
Veera Rani Abbakka Utsava Samithi office bearers have said that they have been repeatedly demanding to name the Mangaluru International Airport after Veera Rani Abbakka since the committee was founded in the year 1997.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am