ಬ್ರೇಕಿಂಗ್ ನ್ಯೂಸ್
28-02-24 07:27 pm Udupi Correspondent ಕರಾವಳಿ
ಉಡುಪಿ, ಫೆ.28: ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವ ಮಾನಸಿಕತೆ ಇದ್ದವರನ್ನು ಪೊಲೀಸರು ವಿಧಾನಸೌಧ ಒಳಗೆ ಹೇಗೆ ಬಿಟ್ಟರು? ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್ ಹುಸೇನ್ ಅವರನ್ನು ವಿಚಾರಣೆಗೆ ಒಳಪಡಿಸಬೇಕು. ಸಯ್ಯದ್ ನಾಸೀರ್ ಹುಸೇನ್ ಬೆಂಬಲಿಗರ ಸಂಪರ್ಕ ಯಾರ ಜೊತೆ ಇದೆ? ಅಲ್ಲಿ ಬಂದಿರುವ ಯುವಕರ ಸಂಪರ್ಕ ಯಾರ ಜೊತೆ ಇದೆ? ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆಯುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದರ ಹಿಂದೆ ಬಹಳ ದೊಡ್ಡ ಷಡ್ಯಂತ್ರದ ಗುಮಾನಿ ಇದೆ ಎಂದರು. ಭಾರತವನ್ನು ವಿಭಜನೆ ಮಾಡುವ ಮಾತನ್ನು ಕಾಂಗ್ರೆಸ್ ಆಡುತ್ತಿದೆ. ಯಾವುದೇ ಸರ್ಕಾರಕ್ಕೆ ಅಧಿಕಾರ ಶಾಶ್ವತವಲ್ಲ. ದೇಶದಲ್ಲಿ ಗೊಂದಲ ನಿರ್ಮಾಣ ಮಾಡುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಪ್ರಕರಣವನ್ನು ಎನ್ಐಎ ತನಿಖೆ ಮಾಡಿದರೆ ಸತ್ಯಾಸತ್ಯತೆ ಹೊರಬರಲಿದೆ. ಇದರ ಹಿಂದಿರುವ ಶಕ್ತಿಯನ್ನು ಪೊಲೀಸರು ಪತ್ತೆ ಮಾಡಬೇಕು. ರಾಜ್ಯದ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆರೋಪಿಯನ್ನ ಬಂಧಿಸುವಂತೆ ಕೇಳಿಕೊಂಡಿದ್ದೇನೆ ಎಂದು ತಿಳಿಸಿದರು.
ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿರುವ ಕುರಿತ ಪ್ರಶ್ನೆಗೆ, ಅಡ್ಡ ಮತದಾನ ಮಾಡಿದವರ ಮೇಲೆ ಜನ ಕ್ರಮ ಕೈಗೊಳ್ಳುತ್ತಾರೆ. ಚುನಾವಣಾ ಆಯೋಗ, ಪಕ್ಷ ಕ್ರಮ ಕೈಗೊಳ್ಳುತ್ತದೆ. ಬಿಜೆಪಿಗೆ ಬಂದು ಮಂತ್ರಿಯಾಗಿ ಒಳ್ಳೆಯ ಖಾತೆಯನ್ನು ಅವರಿಗೆ ನೀಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದಿದೆ ಎಂದು ಮತ್ತೆ ಆ ಕಡೆ ತಿರುಗುವ ಮಾನಸಿಕತೆಗೆ ಧಿಕ್ಕಾರ ಇದೆ. ಅಧಿಕಾರ ಇಲ್ಲದಿದ್ದಾಗ ಬರುವುದು, ಅಧಿಕಾರ ಹೋದಾಗ ವಾಪಾಸ್ ಹೋಗುವುದು ಪಕ್ಷ ನಿಷ್ಠೆ, ಸಮಾಜದ ಮೇಲೆ ಭಕ್ತಿ ಇಲ್ಲ ಎಂಬುದಕ್ಕೆ ಸಾಕ್ಷಿ ಎಂದು ವಾಗ್ದಾಳಿ ಮಾಡಿದರು.
ಬಿಜೆಪಿ ಸೇರಿದಾಗ ಯಶವಂತಪುರದಲ್ಲಿ ನಾನೇ ನಿಂತು ಚುನಾವಣೆ ಮಾಡಿದ್ದೆ. ಸೋಮಶೇಖರ್ ಮೇಲೆ ಬಿಜೆಪಿ ಕಾರ್ಯಕರ್ತರ ವಿರೋಧವಿದ್ದರೂ ಅವರ ಮನವೊಲಿಸಿದ್ದೆವು. ಎಸ್ಟಿ ಸೋಮಶೇಖರ್ ಅವರು ನಡೆದುಕೊಂಡ ರೀತಿ ನಿಜಕ್ಕೂ ದುಃಖ ತಂದಿದೆ. ರಾಜಕೀಯದಲ್ಲಿ ಯಾವ ರೀತಿಯ ವ್ಯಭಿಚಾರ ಆಗಬಹುದು ಎಂಬುದಕ್ಕೆ ಇದು ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದರು
Union Minister for State for Agriculture and Farmers’ Welfare Shobha Karandlaje has demanded NIA probe into the allegations of raising pro-Pakistan slogans in Karnataka legislature premises.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm